AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದಿಂದ ನಲುಗಿಹೋಗಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ ಹಿಂಗಾರು ಬೆಳೆ

ಬಾಗಲಕೋಟೆ: ಈ ಬಾರಿ ಬಂದ ಪ್ರವಾಹಕ್ಕೆ ಇಲ್ಲಿನ ಜನರೆಲ್ಲ ಸಿಲುಕಿ ತತ್ತರಿಸಿ ಹೋಗಿದ್ದರು. ಬೆಳೆದಿದ್ದ ಬೆಳೆ ನೀರು ಪಾಲಾಗಿತ್ತು. ಈ ವರ್ಷ ಭೂತಾಯಿ ನಮಗೇನು ಕೊಡಲೇ ಇಲ್ಲ ಅಂತಾ ಕೂತಿದ್ದ ರೈತರಿಗೆ ಹಿಂಗಾರು ಬೆಳೆ ಭರವಸೆ ಮೂಡಿಸಿದೆ. ಕಣ್ಣು ಹಾಯಿಸಿದ ಕಡೆಎಲ್ಲಾ ಹಚ್ಚಹಸಿರ ದರ್ಶನ. ಹಸಿರು ಸೀರೆ ಉಟ್ಟಂತೆ ಕಾಣ್ತಿರೋ ಭೂತಾಯಿ. ಬೆಳೆದು ನಿಂತಿರೋ ಕಡಲೆ ರೈತನ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕಂಗಾಲಾಗಿದ್ದ ಅನ್ನದಾತನ ಬದುಕಿನಲ್ಲಿ ಭರವಸೆ ಮೂಡಿಸಿದೆ. ಬೆಳೆ ನೋಡಿ ಖುಷಿಯಲ್ಲಿರೋ ರೈತನಿಗೆ ಹೊಲ ಬಿಟ್ಟು […]

ಪ್ರವಾಹದಿಂದ ನಲುಗಿಹೋಗಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ ಹಿಂಗಾರು ಬೆಳೆ
ಸಾಧು ಶ್ರೀನಾಥ್​
|

Updated on: Jan 05, 2020 | 7:17 PM

Share

ಬಾಗಲಕೋಟೆ: ಈ ಬಾರಿ ಬಂದ ಪ್ರವಾಹಕ್ಕೆ ಇಲ್ಲಿನ ಜನರೆಲ್ಲ ಸಿಲುಕಿ ತತ್ತರಿಸಿ ಹೋಗಿದ್ದರು. ಬೆಳೆದಿದ್ದ ಬೆಳೆ ನೀರು ಪಾಲಾಗಿತ್ತು. ಈ ವರ್ಷ ಭೂತಾಯಿ ನಮಗೇನು ಕೊಡಲೇ ಇಲ್ಲ ಅಂತಾ ಕೂತಿದ್ದ ರೈತರಿಗೆ ಹಿಂಗಾರು ಬೆಳೆ ಭರವಸೆ ಮೂಡಿಸಿದೆ.

ಕಣ್ಣು ಹಾಯಿಸಿದ ಕಡೆಎಲ್ಲಾ ಹಚ್ಚಹಸಿರ ದರ್ಶನ. ಹಸಿರು ಸೀರೆ ಉಟ್ಟಂತೆ ಕಾಣ್ತಿರೋ ಭೂತಾಯಿ. ಬೆಳೆದು ನಿಂತಿರೋ ಕಡಲೆ ರೈತನ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕಂಗಾಲಾಗಿದ್ದ ಅನ್ನದಾತನ ಬದುಕಿನಲ್ಲಿ ಭರವಸೆ ಮೂಡಿಸಿದೆ. ಬೆಳೆ ನೋಡಿ ಖುಷಿಯಲ್ಲಿರೋ ರೈತನಿಗೆ ಹೊಲ ಬಿಟ್ಟು ಹೋಗಲು ಮನಸ್ಸಾಗ್ತಿಲ್ಲ.

ರೈತರ ಕೈಹಿಡಿದ ಹಿಂಗಾರು ಬೆಳೆ: ಹಿಂದೆಂದೂ ಕಂಡು ಕೇಳರಿಯದ ಪ್ರವಾಹಕ್ಕೆ ಬಾಗಲಕೋಟೆ ಜಿಲ್ಲೆ ನಲುಗಿ ಹೋಗಿತ್ತು. ಕೃಷ್ಣೆ, ಮಲಪ್ರಭೆ, ಘಟಪ್ರಭೆಯ ಅಬ್ಬರಕ್ಕೆ ಬೆಳೆಗಳೆಲ್ಲಾ ಕೊಚ್ಚಿ ಹೋಗಿದ್ದವು. ಈರುಳ್ಳಿ, ಮೆಕ್ಕೆಜೋಳ, ಶೇಂಗಾ ನೀರು ಪಾಲಾಗಿದ್ದವು. ಇದ್ರಿಂದ ರೈತರ ಬದುಕೇ ಬೀದಿಗೆ ಬಂದಿತ್ತು. ಆದ್ರೀಗ ಬೆನಕಟ್ಟಿ ಗ್ರಾಮದ ಸುತ್ತಮುತ್ತ ಹಿಂಗಾರು ರೈತರ ಕೈಹಿಡಿದಿದೆ. ಹಿಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ್ದ ಕಡಲೆ, ಜೋಳ ಹುಲುಸಾಗಿ ಬೆಳೆದಿದ್ದು ರೈತನ ಮೊಗದಲ್ಲಿ ನಗು ಅರಳುವಂತೆ ಮಾಡಿದೆ.

ಇನ್ನು ತೇವಾಂಶ ಹಾಗೂ ಚಳಿಯಿಂದಲೇ ಬೆಳೆಯುವ ಕಡಲೆ ರೈತರ ಕೈ ಹಿಡಿಯೋ ಲಕ್ಷಣ ಕಾಣ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಬರೋಬ್ಬರಿ 1 ಲಕ್ಷ ಹೆಕ್ಟೇರ್​ನಲ್ಲಿ ಕಡಲೆ ಬೆಳೆದಿದ್ದಾರೆ. ಆದ್ರೆ ಬೆಳೆ ಬೆಳೆಯುವಾಗ ಇರೋ ಬೆಲೆ ಬೆಳೆ ಕೈಗೆ ಬಂದಾಗ ಇರೋದಿಲ್ಲ ಅನ್ನೋದು ರೈತರ ಆತಂಕವಾಗಿದೆ. ಹೀಗಾಗಿ ಈ ಬಾರಿ ಖರೀದಿ ಕೇಂದ್ರ ತೆರೆಯಬೇಕು ಅಂತಾ ಆಗ್ರಹಿಸುತ್ತಿದ್ದಾರೆ. ಒಟ್ನಲ್ಲಿ ಪ್ರವಾಹದಿಂದ ನೊಂದು ಬೆಂದು ಹೋಗಿದ್ದ ರೈತರಿಗೆ ಹಿಂಗಾರು ಬೆಳೆ ಕೈಹಿಡಿದಿದೆ. ಆದ್ರೆ ಮಾರುಕಟ್ಟೆಯಲ್ಲಿ ಬೆಲೆಯೂ ಚೆನ್ನಾಗಿ ಸಿಕ್ರೆ ರೈತರ ಬದುಕು ಹಸನಾಗಲಿದೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್