ಪಿಕೆಪಿಎಸ್ ಚುನಾವಣೆ: ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವ ಘಟನೆ ಬಾಗಲಕೋಟೆಯ ರನ್ನಬೆಳಗಲಿ ಗ್ರಾಮದಲ್ಲಿ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿಪ್ರಹಾರ ನಡೆಸಿದ್ದು, ಅಕ್ಟೋಬರ್ 29ರಂದು ನಡೆದ ಘಟನೆ ವಿಡಿಯೋ ಈಗ ವೈರಲ್​ ಆಗಿದೆ.

ಪಿಕೆಪಿಎಸ್ ಚುನಾವಣೆ: ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಮಾರಾಮಾರಿ
ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ
Edited By:

Updated on: Nov 02, 2025 | 2:55 PM

ಬಾಗಲಕೋಟೆ, ನವೆಂಬರ್​ 02: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ಪಿಕೆಪಿಎಸ್) ಅಧ್ಯಕ್ಷ‌-ಉಪಾಧ್ಯಕ್ಷರ ಚುನಾವಣೆ ವೇಳೆ ಬಟ್ಟೆ ಹರಿಯುವ ರೀತಿ ಬಿಜೆಪಿ ಮತ್ತು ಕಾಂಗ್ರೆಸ್​ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಬಾಗಲಕೋಟೆಯ  ರನ್ನಬೆಳಗಲಿ ಗ್ರಾಮದಲ್ಲಿ ಅಕ್ಟೋಬರ್ 29ರಂದು ಘಟನೆ ನಡೆದಿದ್ದು, ಮಾರಾಮಾರಿಯ ವಿಡಿಯೋ ಈಗ ವೈರಲ್​ ಆಗಿದೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಅ.29ರಂದು ನಿಗದಿಯಾಗಿತ್ತು. ಒಟ್ಟು 13 ಜನ ಸದಸ್ಯರ ಬಲ ಹೊಂದಿರುವ ಪಿಕೆಪಿಎಸ್​ಗೆ 6 ಜನ ಬಿಜೆಪಿ ಬೆಂಬಲಿತ, 6 ಜನ ಕಾಂಗ್ರೆಸ್​ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಇತರೆ ಓರ್ವ ಅಖಾಡದಲ್ಲಿದ್ದರು. ಆ ಪೈಕಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಗದೀಶ್​ ಮಾಳಗಿ, ಹರಳಯ್ಯ ಎಂಬುವರನ್ನು ಬಿಜೆಪಿಯವರು ಆಪರೇಷನ್ ಮೂಲಕ ಸೆಳೆದಿದ್ದಾರೆ. ಇವರಿಬ್ಬರು ಮತದಾನ ಮಾಡಲು ಪಿಕೆಪಿಎಸ್ ಕಚೇರಿಗೆ ಬಂದಾಗ ಅವರನ್ನ ತಡೆಯಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದಾರೆ. ಇದೇ ವಿಚಾರಕ್ಕೆ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗಿ ಮಾರಾಮಾರಿ ನಡೆದಿದೆ.

ಇದನ್ನೂ ಓದಿ: ಮದುವೆಯಾಗು ಎಂದಿದ್ದಕ್ಕೆ ಮಹಿಳೆಯನ್ನ ಎಂಟು ಬಾರಿ ಚುಚ್ಚಿಕೊಂದ ಪ್ರೇಮಿ

ಕಟ್ಟಿಗೆ-ಕೋಲುಗಳಿಂದ ಪರಸ್ಪರ ಹಲ್ಲೆ

ಕಾಂಗ್ರೆಸ್​-ಬಿಜೆಪಿ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದು ಮಾತ್ರವಲ್ಲದೆ ಕಟ್ಟಿಗೆ-ಕೋಲುಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ. ಈ ವೇಳೆ ಉದ್ರಿಕ್ತರ ನಿಯಂತ್ರಣಕ್ಕೆ ಮುಧೋಳ ಪೊಲೀಸರು ಹರಸಾಹಸಪಟ್ಟಿದ್ದು, ಅಂತಿಮವಾಗಿ ಲಘುಲಾಠಿ ಪ್ರಹಾರ ಮಾಡಿ ಕಾರ್ಯಕರ್ತರನ್ನು ಚದುರಿಸಿದ್ದಾರೆ. ಈ ಎಲ್ಲ ಬೆಳವಣಿಗೆ ಹಿನ್ನಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯನ್ನ ಮುಂದೂಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:54 pm, Sun, 2 November 25