AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠ್ಯದಲ್ಲಿ ಮೊಹಮ್ಮದ್ ಅಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ?- ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪ್ರಶ್ನೆ

ಬಿವೈ ವಿಜಯೇಂದ್ರಗೆ ಎಂಎಲ್​ಸಿ ಟಿಕೆಟ್ ಕೈತಪ್ಪಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಪಕ್ಷದಲ್ಲಿ ಲಕ್ಷಾಂತರ ಜನರು ಟಿಕೆಟ್ ತಪ್ಪಿದವರು ಇದ್ದಾರೆ. ಕೇಂದ್ರದ ತೀರ್ಮಾನಕ್ಕೆ ವಿಜಯೇಂದ್ರ ಬದ್ಧ ಅಂತ ಹೇಳಿದ್ದಾರೆ.

ಪಠ್ಯದಲ್ಲಿ ಮೊಹಮ್ಮದ್ ಅಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ?- ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪ್ರಶ್ನೆ
ಮಾಜಿ ಸಚಿವ ಕೆಎಸ್ ಈಶ್ವರಪ್ಪ
TV9 Web
| Edited By: |

Updated on:May 26, 2022 | 9:04 AM

Share

ಬಾಗಲಕೋಟೆ: ನಾನೇನಾದ್ರೂ ತಪ್ಪು ಮಾಡಿದ್ದರೆ ಚೌಡೇಶ್ವರಿ ನನಗೆ ಶಿಕ್ಷೆ ಕೊಡಲಿ. ನಮ್ಮ ಮನೆ ದೇವರು ಚೌಡೇಶ್ವರಿ ದೇವಸ್ಥಾನಕ್ಕೆ ಹೋಗಿ ಬಂದಿದ್ದೇನೆ. ನಾನು ತಪ್ಪು ಮಾಡಿಲ್ಲ ಅಂದ್ರೆ ಬೇಗನೆ ಶಿಕ್ಷೆಯಿಂದ ಹೊರಬರಲಿ. ಇದು ದೇವರಲ್ಲಿ ನನ್ನ ಪ್ರಾರ್ಥನೆ ಎಂದು ಮಾಜಿ ಸಚಿವ ಈಶ್ವರಪ್ಪ (KS Eshwarappa) ಹೇಳಿಕೆ ನೀಡಿದ್ದಾರೆ. 15 ದಿನದಲ್ಲಿ ಇದಕ್ಕೊಂದು ರೂಪ ಬರುತ್ತೆ ಅಂತ ಅನ್ಕೊಂಡಿದ್ದೇನೆ. ಸಂಪುಟಕ್ಕೆ (Cabinet) ಸೇರಿಸಿಕೊಳ್ಳೋದು ಬಿಡೋದು ಹೈಕಮಾಂಡ್ಗೆ ಬಿಟ್ಟಿದ್ದು. ಕೇಂದ್ರದ ನಾಯಕರ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ನೂರಕ್ಕೆ ನೂರು ದೇವರ ಕೃಪೆಗೆ ಪಾತ್ರ ಆಗುತ್ತೇನೆ ಎಂದು ಮಾಜಿ ಸಚಿವರು ತಿಳಿಸಿದರು.

ಇದೇ ವೇಳೆ ಬಿವೈ ವಿಜಯೇಂದ್ರಗೆ ಎಂಎಲ್​ಸಿ ಟಿಕೆಟ್ ಕೈತಪ್ಪಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಪಕ್ಷದಲ್ಲಿ ಲಕ್ಷಾಂತರ ಜನರು ಟಿಕೆಟ್ ತಪ್ಪಿದವರು ಇದ್ದಾರೆ. ಕೇಂದ್ರದ ತೀರ್ಮಾನಕ್ಕೆ ವಿಜಯೇಂದ್ರ ಬದ್ಧ ಅಂತ ಹೇಳಿದ್ದಾರೆ. 30-40 ವರ್ಷಗಳ ಕಾಲ ದುಡಿದ ಕಾರ್ಯಕರ್ತರಿಗೆ ಸಿಕ್ಕಿಲ್ಲ. ಲಿಂಗರಾಜ ಪಾಟೀಲ್ ಕೂಡ ಟಿಕೆಟ್ ಸಿಗದಿದ್ದಕ್ಕೆ ಸುಮ್ಮನಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಪಠ್ಯಪುಸ್ತಕಗಳ ಪರಿಷ್ಕರಣೆ ವಿಚಾರ; ಸಿಎಂಗೆ ಪತ್ರ ಬರೆದ ಬರಗೂರು ರಾಮಚಂದ್ರಪ್ಪ, ನಾಡೋಜ ಡಾ.ಹಂಪ ನಾಗರಾಜಯ್ಯ

ಇದನ್ನೂ ಓದಿ
Image
ಇಂಗ್ಲಿಷ್‌ ಓದಲು ಕಷ್ಟವಾಗುತ್ತಿದೆ ಎಂದು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ: ಪ್ರಾಣಾಪಾಯದಿಂದ ಪಾರು
Image
8 Years of Modi Government ತುರ್ತು ಪರಿಸ್ಥಿತಿಯಲ್ಲಿ ಮಾರುವೇಷಕ್ಕೆ ಮೊರೆ, ಗುಪ್ತನಾಮವೂ ಇತ್ತು; ಇಲ್ಲಿವೆ ಮೋದಿ ಜೀವನದ ಬಗ್ಗೆ ಕೇಳಿರದ ಸಂಗತಿಗಳು
Image
ಕ್ಯಾಪ್ಟನ್ ಅಭಿಲಾಶಾ ಬರಾಕ್ ಆರ್ಮಿ ಎವಿಯೇಷನ್ ​​ಕಾರ್ಪ್ಸ್‌ನ ಮೊದಲ ಮಹಿಳಾ ಪೈಲೆಟ್
Image
Nayanthara: ಮತ್ತಷ್ಟು ಜೋರಾಯ್ತು ನಯನತಾರಾ ಮದುವೆಯ ವಿಚಾರ; ಎಲ್ಲಕ್ಕೂ ಕಾರಣ ಆ ಒಂದು ಭೇಟಿ!

ಪಠ್ಯದಲ್ಲಿ ಮೊಹಮ್ಮದ್ ಅಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ?- ಈಶ್ವರಪ್ಪ: ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಭಾಷಣ ಸೇರಿದ್ದಕ್ಕೆ ವಿರೋಧ ವ್ಯಕ್ತವಾಗಿರುವ ವಿಚಾರದ ಬಗ್ಗೆ ಮಾತನಾಡಿದ ಈಶ್ವರಪ್ಪ, ದೇಶದ ಸಂಸ್ಕೃತಿ ವಿಚಾರದಲ್ಲಿ ಭಾಷಣದ ಬಗ್ಗೆ ಸೇರಿಸಲಾಗಿದೆ. ಪಠ್ಯದಲ್ಲಿ ಮೊಹಮ್ಮದ್ ಅಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ? ಶಿವನ ಲಿಂಗ ಒಡೆದ ಔರಂಗಜೇಬನ ಹೆಸರು ಸೇರಿಸಬೇಕಿತ್ತಾ? ಪಠ್ಯದಲ್ಲಿ ಅಲೆಗ್ಸಾಂಡರ್ ದಿ ಗ್ರೇಟ್ ಅಂತಾ ಮಕ್ಕಳು ಓದುತ್ತಿದ್ದರು. ಯಾರು ನಮ್ಮ ದೇಶವನ್ನು ಹಾಳು ಮಾಡಿ ಸಂಸ್ಕೃತಿ ಒಡೆದ್ರೋ ಅಂಥವರ ವೈಭವೀಕರಣ ಈ ಮೊದಲು ನಮ್ಮ ಪಠ್ಯದಲ್ಲಿ ಇತ್ತು. ಭಗತ್ ಸಿಂಗ್, ನಾರಾಯಣ್ ಗುರು ಪಠ್ಯ ತೆಗೆದಿದ್ದು ಸುಳ್ಳು. ಹೆಡ್ಗೆವಾರ್ ವಿಚಾರಗಳನ್ನ ಹರಡದಿದ್ರೆ ದೇಶ ತುಂಡಾಗಿ ಹೋಗ್ತಿತ್ತು ಎಂದರು.

1925ರಲ್ಲಿ ಹಿಂದೂ ಸಮಾಜ ಒಗ್ಗೂಡಿಸುವ ಪ್ರಯತ್ನ ಮಾಡಿದ್ರು. ಹಿಂದೂತ್ವ ಇಷ್ಟೂ ಜಾಗೃತವಾಗಿರುವಾಗಲೇ ಉಗ್ರರು ಆಟ ಆಡ್ತಿದ್ದಾರೆ. ವಿಚಾರವಾದಿಗಳು ಅಂತಾ ಹೇಳಿಕೊಳ್ಳುವವರಿಗೆ ಅದೇ ಖುಷಿಯಾಗಿದೆ. ದೇಶ ಹಾಳು ಮಾಡಿರುವವರ ಪಠ್ಯ ಇರಬೇಕೆನ್ನುವ ಆಸೆ ಅವರದ್ದು. ಸಂವಿಧಾನ ಬದ್ಧವಾಗಿ ನಡೆಯುತ್ತಿರುವುದನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಸಂಸ್ಕೃತಿಯನ್ನು ಉಳಿಸಬೇಕು ಅಂತಾ ಸರ್ಕಾರ ತೀರ್ಮಾನ ಮಾಡಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: Nayanthara: ಮತ್ತಷ್ಟು ಜೋರಾಯ್ತು ನಯನತಾರಾ ಮದುವೆಯ ವಿಚಾರ; ಎಲ್ಲಕ್ಕೂ ಕಾರಣ ಆ ಒಂದು ಭೇಟಿ!

Published On - 9:01 am, Thu, 26 May 22

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​