ಸಾಲ ಮರುಪಾವತಿಸದ ಹಿನ್ನಲೆ ಹಲ್ಲೆ ಆರೋಪ: ಮಾಜಿ ಶಾಸಕ ಚರಂತಿಮಠ ಸೇರಿ ನಾಲ್ವರ ವಿರುದ್ಧ ದೂರು

ಬಾಗಲಕೋಟೆಯ ಮಾಜಿ ಬಿಜೆಪಿ ಶಾಸಕ ವೀರಣ್ಣ ಚರಂತಿಮಠ ಅವರು ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾಧ್ಯಕ್ಷ ಆನಂದ ಮುತ್ತಗಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. 35 ಲಕ್ಷ ರೂ. ಸಾಲ ಮರುಪಾವತಿ ಮಾಡದಿರುವುದಕ್ಕೆ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ. ಚರಂತಿಮಠ ಸೇರಿ ನಾಲ್ವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಾಲ ಮರುಪಾವತಿಸದ ಹಿನ್ನಲೆ ಹಲ್ಲೆ ಆರೋಪ: ಮಾಜಿ ಶಾಸಕ ಚರಂತಿಮಠ ಸೇರಿ ನಾಲ್ವರ ವಿರುದ್ಧ ದೂರು
ಸಾಲ ಮರುಪಾವತಿಸದ ಹಿನ್ನೆಲೆ ಹಲ್ಲೆ ಆರೋಪ: ಮಾಜಿ ಶಾಸಕ ಚರಂತಿಮಠ ಸೇರಿ ನಾಲ್ವರ ವಿರುದ್ಧ ದೂರು
Edited By:

Updated on: Jan 09, 2025 | 9:04 PM

ಬಾಗಲಕೋಟೆ, ಜನವರಿ 09: ಬ್ಯಾಂಕ್ ಸಾಲ ಮರುಪಾವತಿ ಮಾಡದ ಹಿನ್ನಲೆ ಹಿಂದೂ ಜಾಗರಣಾ ವೇದಿಕೆ ಜಿಲ್ಲಾಧ್ಯಕ್ಷ ಆನಂದ ಮುತ್ತಗಿ ಮೇಲೆ ಮಾಜಿ ಶಾಸಕ ವೀರಣ್ಣ ಚರಂತಿಮಠ (veeranna charantimath) ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಹಲ್ಲೆಗೊಳಗಾದ ಆನಂದ ಮುತ್ತಗಿಗೆ ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಾಸಕ ವೀರಣ್ಣ ಚರಂತಿಮಠ ಸೇರಿ ನಾಲ್ವರ ವಿರುದ್ಧ ಬಾಗಲಕೋಟೆ ಶಹರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಚರಂತಿಮಠ ಬೀಳೂರು ಗುರುಬಸವ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿದ್ದಾರೆ. ಇದೇ ಸಹಕಾರ ಸಂಘದಿಂದ ಆನಂದ ಮುತ್ತಗಿ 35 ಲಕ್ಷ ರೂಪಾಯಿ ಸಾಲ ಪಡೆದಿದ್ದರು. 2018ರಿಂದ ಸಾಲ ಮರುಪಾವತಿ ಮಾಡದೆ ಬಾಕಿ ಉಳಿಸಿಕೊಂಡಿದ್ದರು. ಇದೀಗ ಸಾಲದ ಹಣ ಕಟ್ಟದಿದ್ದಕ್ಕೆ ವೀರಣ್ಣ ಚರಂತಿಮಠ ಹಲ್ಲೆ ಮಾಡಿದ್ದಾರೆಂದು ಆರೋಪ ಮಾಡಿದ್ದಾರೆ.

ನನಗೆ, ನನ್ನ ಕುಟುಂಬದವರಿಗೆ ಏನಾದ್ರೂ ಆದರೆ ಚರಂತಿಮಠ ಕಾರಣ: ಆನಂದ ಮುತ್ತಗಿ

ಈ ಬಗ್ಗೆ ಆನಂದ ಮುತ್ತಗಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಬೀಳೂರು ಗುರುಬಸವ ಪತ್ತಿನ ಸಹಕಾರ ಸಂಘದಿಂದ ಸಾಲ ಪಡೆದಿದ್ದೆ. ಉದ್ಯಮದಲ್ಲಿ ನಷ್ಟವಾಗಿದ್ದರಿಂದ 35 ಲಕ್ಷ ರೂ. ಸಾಲ ಮರುಪಾವತಿಸಿರಲಿಲ್ಲ. ಜಮೀನು ಮಾರಾಟ ಮಾಡಿ ಸಾಲದ ಹಣ ಹಿಂದಿರುಗಿಸಲು ನಿರ್ಧರಿಸಿದ್ದೆ ಎಂದಿದ್ದಾರೆ.

ಇದನ್ನೂ ಓದಿ: ಕನ್ಯೆ ಸಿಗದ ಯುವ ರೈತರೇ ಇವರ ಟಾರ್ಗೆಟ್: ಉತ್ತರ ಕರ್ನಾಟಕದಲ್ಲಿ ಮದುವೆ ವಂಚನೆ ಜಾಲ?

ಸಹಕಾರ ಸಂಘದ ಸಿಬ್ಬಂದಿ ನನ್ನನ್ನು ಬಸವೇಶ್ವರ ಶಿಕ್ಷಣ ಸಂಸ್ಥೆ ಸಂಘದ ಕಚೇರಿಗೆ ಕರೆದುಕೊಂಡು ಹೋಗಿದ್ದರು. ನಾನು ಕಚೇರಿಗೆ ಹೋಗ್ತಿದ್ದಂತೆ ಅಧ್ಯಕ್ಷ ವೀರಣ್ಣ ಚರಂತಿಮಠ ನಿಂದಿಸಿದ್ದರು. ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕವಾಗಿ ಹಿಂಸಿಸಿ ಹಲ್ಲೆ ಮಾಡಿದ್ದರು. ಹಲ್ಲೆಯಿಂದ ನಾನು ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಮೇಲೆ ಹಲ್ಲೆ ನಡೆಸಿದ ವೀರಣ್ಣ ಚರಂತಿಮಠ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಿಸಿದ್ದೇನೆ. ನನಗೆ, ನನ್ನ ಕುಟುಂಬದವರಿಗೆ ಏನಾದ್ರೂ ಆದರೆ ಚರಂತಿಮಠ ಕಾರಣ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:02 pm, Thu, 9 January 25

ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us