AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಾಯಣಪುರ ಡ್ಯಾಂ ಹಿನ್ನೀರಿನಲ್ಲಿ ನಾಲ್ವರ ದುರ್ಮರಣ; ಓರ್ವನನ್ನು ರಕ್ಷಿಸಲು ಹೋಗಿ ಮಗ, ಅಳಿಯ ಮತ್ತು ಬೋಟ್ ಆಪರೇಟರ್ ಸಾವು

ಮಾನಸಿಕ ಅಸ್ವಸ್ಥ ಶಿವಪ್ಪ ಅಮಲೂರು ಎಂಬುವವರು ನದಿಯಲ್ಲಿ ಮುಳುಗಿದ್ದಾರೆ. ಈ ವೇಳೆ ಶಿವಪ್ಪನ ಮೃತದೇಹ ಹುಡುಕಲು ಶಿವಪ್ಪ ಅಮಲೂರು ಪುತ್ರ ಯಮನಪ್ಪ ಅಮಲೂರು ಮತ್ತು ಶಿವಪ್ಪ ಅಮಲೂರು ಅಳಿಯ ಶರಣಗೌಡ ಬಿರಾದರ್ ಇಬ್ಬರು ಬೋಟ್ನಲ್ಲಿ ತೆರಳಿದ್ದಾರೆ.

ನಾರಾಯಣಪುರ ಡ್ಯಾಂ ಹಿನ್ನೀರಿನಲ್ಲಿ ನಾಲ್ವರ ದುರ್ಮರಣ; ಓರ್ವನನ್ನು ರಕ್ಷಿಸಲು ಹೋಗಿ ಮಗ, ಅಳಿಯ ಮತ್ತು ಬೋಟ್ ಆಪರೇಟರ್ ಸಾವು
ನಾರಾಯಣಪುರ ಡ್ಯಾಂ ಹಿನ್ನೀರಿನಲ್ಲಿ ನಾಲ್ವರ ದುರ್ಮರಣ
TV9 Web
| Edited By: ಆಯೇಷಾ ಬಾನು|

Updated on:Oct 07, 2021 | 4:25 PM

Share

ಬಾಗಲಕೋಟೆ: ನಾರಾಯಣಪುರ ಡ್ಯಾಂ ಹಿನ್ನೀರಿನಲ್ಲಿ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರು ಬಳಿ ಓರ್ವನನ್ನು ರಕ್ಷಿಸಲು ಹೋಗಿ ನಾಲ್ವರು ಮೃತಪಟ್ಟಿದ್ದಾರೆ. ಶಿವಪ್ಪ ಅಮಲೂರು, ಯಮನಪ್ಪ ಅಮಲೂರು(45), ಶರಣಗೌಡ ಬಿರಾದರ್(30) ಮತ್ತು ಪರಶು ಎಂಬುವವರು ಮೃತ ದುರ್ದೈವಿಗಳು.

ಮಾನಸಿಕ ಅಸ್ವಸ್ಥ ಶಿವಪ್ಪ ಅಮಲೂರು ಎಂಬುವವರು ನದಿಯಲ್ಲಿ ಮುಳುಗಿದ್ದಾರೆ. ಈ ವೇಳೆ ಶಿವಪ್ಪನ ಮೃತದೇಹ ಹುಡುಕಲು ಶಿವಪ್ಪ ಅಮಲೂರು ಪುತ್ರ ಯಮನಪ್ಪ ಅಮಲೂರು ಮತ್ತು ಶಿವಪ್ಪ ಅಮಲೂರು ಅಳಿಯ ಶರಣಗೌಡ ಬಿರಾದರ್ ಸೇರಿ 11 ಜನ ಬೋಟ್​ನಲ್ಲಿ ತೆರಳಿದ್ದಾರೆ. ಆಗ ವಿದ್ಯುತ್ ಸ್ಪರ್ಶಿಸಿ ಶಿವಪ್ಪನ ಪುತ್ರ, ಅಳಿಯ ಮತ್ತು ಇವರ ಜೊತೆಗೆ ಇವರನ್ನು ಕರೆದೊಯ್ದಿದ್ದ ಬೋಟ್ ಆಪರೇಟರ್ ಪರಶು ಸೇರಿ ಮೂವರು ಮೃತಪಟ್ಟಿದ್ದಾರೆ. ಅದೃಷ್ಟವಷಾತ್​ ಬೋಟ್​ನಲ್ಲಿದ್ದ ಇತರೆ 8 ಜನರು ಪಾರಾಗಿದ್ದಾರೆ. ಮೃತರು ವಿಜಯಪುರ ಜಿಲ್ಲೆ ತಾಳಿಕೋಟಿ ತಾಲ್ಲೂಕಿನ ಹರನಾಳ ಮೂಲದವರು ಎಂದು ತಿಳಿದು ಬಂದಿದೆ.

ಶಿವಪ್ಪ ಅಮಲೂರರ ಶವ ಹುಡುಕೋದಕ್ಕೆ ಬೋಟ್ ಮೂಲಕ ಹೋದ ಮಗ, ಅಳಿಯ, ಬೋಟ್ ಆಪರೇಟರ್ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ಹುನಗುಂದ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ಧೈರ್ಯ ಇದ್ದರೆ ನನ್ನ ಮುಂದೆ ಬನ್ನಿ, ಚರ್ಚಿಸೋಣ; ಉಗ್ರರಿಗೆ ಸವಾಲು ಹಾಕಿದ ಶ್ರದ್ಧಾ ಬಿಂದ್ರೂ

Published On - 4:21 pm, Thu, 7 October 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್