AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ಕಿ ಹರಿಯುತ್ತಿರೋ ಘಟಪ್ರಭಾ ನದಿ; ಮುಧೋಳ, ರಬಕವಿ ಬನಹಟ್ಟಿ ತಾಲ್ಲೂಕಿನಲ್ಲಿ ಹೆಚ್ಚಿದ ಆತಂಕ

ಇತ್ತೀಚೆಗೆ ತಾನೆ ಪ್ರವಾಹದಿಂದ ಮುಕ್ತವಾಗಿದ್ದ ಘಟಪ್ರಭಾ ನದಿ ತೀರದ ಜನರು. ಪ್ರವಾಹ ನಿಂತಿದೆ ಎಂದು ನಿಟ್ಟುಸಿರು ಬಿಡುವಷ್ಟರಲ್ಲಿ ಮತ್ತೆ ಆ ನದಿ ಆರ್ಭಟ ಜೋರಾಗಿದೆ. ದೇವರಿಗೆ ದಿಗ್ಬಂಧನ ಹಾಕಿದ ನದಿ, ಬೆಳೆಗಳನ್ನು ನುಂಗಿ ಹಾಕುತ್ತಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಉಕ್ಕಿ ಹರಿಯುತ್ತಿರೋ ಘಟಪ್ರಭಾ ನದಿ; ಮುಧೋಳ, ರಬಕವಿ ಬನಹಟ್ಟಿ ತಾಲ್ಲೂಕಿನಲ್ಲಿ ಹೆಚ್ಚಿದ ಆತಂಕ
ಉಕ್ಕಿ ಹರಿಯುತ್ತಿರೋ ಘಟಪ್ರಭಾ ನದಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Aug 30, 2024 | 8:49 PM

Share

ಬಾಗಲಕೋಟೆ, ಆ.30: ಜಿಲ್ಲೆಯ ಮುಧೋಳ, ರಬಕವಿ ಬನಹಟ್ಟಿ ತಾಲ್ಲೂಕಿನ ಘಟಪ್ರಭಾ ತೀರದಲ್ಲಿ ಮತ್ತೆ ಪ್ರವಾಹ ಆತಂಕ ಶುರುವಾಗಿದೆ. ಹೌದು, ಮಹಾರಾಷ್ಟ್ರದಲ್ಲಿ ಆಗುತ್ತಿರುವ ‌ಮಳೆಯಿಂದ ಘಟಪ್ರಭಾ ‌ನದಿ(Ghataprabha River) ಉಕ್ಕಿ ಹರಿಯುತ್ತಿದ್ದು, ಘಟಪ್ರಭಾ ನದಿಯಲ್ಲಿ ನೀರಿನ ‌ಪ್ರಮಾಣ ಬಾರಿ ಹೆಚ್ಚಾಗಿದೆ. ಇದರಿಂದ ಮಾಚಕನೂರು ಗ್ರಾಮದಲ್ಲಿರುವ ಹೊಳೆಬಸವೇಶ್ವರ ದೇವಸ್ಥಾನಕ್ಕೆ ಜಲದಿಗ್ಬಂಧನ ಆಗಿದೆ. ಅಷ್ಟೇ ಅಲ್ಲ, ದೇವಸ್ಥಾನದೊಳಗೆ 10 ಅಡಿಯಷ್ಟು ನೀರಿದ್ದು, ದೇವರ ದರ್ಶನ ಬಂದ ಮಾಡಲಾಗಿದೆ.

ಹೀಗಾಗಿ ನದಿ ದಡದಲ್ಲಿ ಹೊಳೆಬಸವೇಶ್ವರ ಉತ್ಸವ ಮೂರ್ತಿ ಪ್ರತಿಷ್ಟಾಪನೆ ಮಾಡಿ‌ ಪೂಜಿಸಲಾಗುತ್ತಿದೆ. ಶ್ರಾವಣ ಕೊನೆ ಶುಕ್ರವಾರದ ಪೂಜೆ ನದಿ ದಡದಲ್ಲೆ‌ ನಡೆಯುತ್ತಿದೆ. ಇನ್ನು ತುಂಬಿದ ನದಿಯಲ್ಲಿ ಕೆಲವರು ಈಜಿ ದೇವಸ್ಥಾನ ಕಡೆ ಹೊರಡೋದು. ಉಕ್ಕಿ ಹರಿಯುವ ನದಿಯಲ್ಲಿ ಮಕ್ಕಳು ನೀರಾಟ ಆಡುತ್ತಾ ದುಸ್ಸಾಹಸ ಮೆರೆಯುತ್ತಿದ್ದಾರೆ.

ಇದನ್ನೂ ಓದಿ:ಬಾಗಲಕೋಟೆ: ಘಟಪ್ರಭಾ ‌ನದಿ ಘರ್ಜನೆ, ರೈತರ ಬೆಳೆಗೆ ಕಂಟಕ ತಂದ ಪ್ರವಾಹ

ನೂರಾರು ಎಕರೆ ಬೆಳೆ ಜಲಾವೃತ

ಇದು ಒಂದು ಕಡೆ ಆದರೆ, ಬೊರ್ಗರೆದು ಹರಿಯುತ್ತಿರುವ ಘಟಪ್ರಭಾ ‌ನದಿಯಿಂದ ಅಕ್ಕ-ಪಕ್ಕದ ನೂರಾರು ಎಕರೆ ಬೆಳೆ ಜಲಾವೃತವಾಗಿದೆ. ಇದೆ ತಿಂಗಳ ಆರಂಭದಲ್ಲಿ ನಿರಂತರ ಹದಿನೈದು ದಿನಗಳ ಕಾಲ ನೀರಲ್ಲಿ ನಿಂತು ಹಾಳಾದ ಕಬ್ಬು ಈಗ ಮತ್ತೆ ಮುಳುಗಡೆಯಾಗಿದೆ‌. ಮೇಲಿಂದ‌ ಮೇಲೆ ಪ್ರವಾಹದ ಹೊಡೆತ‌ದಿಂದ ರೈತರು ಕಂಗಾಲಾಗಿದ್ದಾರೆ. ಕಳೆದ ಬಾರಿ ಪ್ರವಾಹದ ಕಲೆ ಮಾಸುವ ಮುನ್ನ ಮತ್ತೆ ಪ್ರವಾಹ ಆತಂಕ ಶುರುವಾಗಿದೆ.

ಘಟಪ್ರಭಾ ನದಿಯಲ್ಲಿ ಕ್ಷಣ ಕ್ಷಣಕ್ಕೂ ನೀರಿನ ವೇಗ ಹೆಚ್ಚುತ್ತಿದ್ದು, ಮಾಚಕನೂರು ಚಿಕ್ಕೂರು ಮಧ್ಯದ ಘಟಪ್ರಭಾ ಸೇತುವೆ ಜಲಾವೃತ ಹಂತಕ್ಕೆ ಬಂದಿದೆ. ಮುಳುಗಡೆಯಾಗಲು ಅರ್ಧ ಅಡಿಯಿಂದ ಒಂದು ಅಡಿ ಮಾತ್ರ‌ ಬಾಕಿ ಇದೆ. ಸೇತುವೆ ಮುಳುಗಿದರೆ ಮಾಚಕನೂರು ಚಿಕ್ಕೂರು ಬಂಟನೂರ ಲೋಕಾಪುರ ಸಂಪರ್ಕ ಕಡಿತವಾಗಲಿದೆ. ನದಿ ಅಕ್ಕಪಕ್ಕದ ರೈತರ ಮೋಟರ್ ಪಂಪ್ ಗಳು ಕೂಡ ಜಲಾವೃತವಾಗಿವೆ. ಮೇಲಿಂದ ಮೇಲೆ ಬೆಳೆ ಹಾನಿ ಅನುಭವಿಸುತ್ತಿದ್ದೇವೆ. ನಮಗೆ ಶಾಶ್ವತ ಪರಿಹಾರ ನೀಡಿ ಎಂದು ರೈತರು ಆಗ್ರಹ ಮಾಡುತ್ತಿದ್ದಾರೆ.

ಪ್ರವಾಹ ಅಂತ್ಯವಾಯಿತು ಎಂದು ಸುಧಾರಿಸಿಕೊಳ್ಳುವಷ್ಟರಲ್ಲಿ ಮತ್ತೆ ಪ್ರವಾಹ ಆರಂಭದ ಲಕ್ಷಣಗಳು ಶುರುವಾಗಿವೆ.ಇದರಿಂದ ಘಟಪ್ರಭಾ ತೀರದಲ್ಲಿ ಪುನಃ ಪ್ರವಾಹ ಆತಂಕ ಎದುರಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು