AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಡಿಕ್ಕಿಯಾಗಿ ಗೂಡ್ಸ್‌ ವಾಹನ ನದಿಗೆ ಪಲ್ಟಿ: ಓರ್ವ ಸಾವು

ಹುನಗುಂದ ತಾಲೂಕಿನ ಬೆಳಗಲ್ ರಾಷ್ಟ್ರೀಯ ಹೆದ್ದಾರಿ 50ರ ಸೇತುವೆ ಮೇಲೆ ಗೂಡ್ಸ್‌ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ.

ಕಾರು ಡಿಕ್ಕಿಯಾಗಿ ಗೂಡ್ಸ್‌ ವಾಹನ ನದಿಗೆ ಪಲ್ಟಿ: ಓರ್ವ ಸಾವು
ಸಾಂಧರ್ಬಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on:Sep 17, 2022 | 8:03 PM

Share

ಬಾಗಲಕೋಟೆ: ಹುನಗುಂದ ತಾಲೂಕಿನ ಬೆಳಗಲ್ ರಾಷ್ಟ್ರೀಯ ಹೆದ್ದಾರಿ 50ರ ಸೇತುವೆ ಮೇಲೆ ಗೂಡ್ಸ್‌ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಗೂಡ್ಸ್​ ವಾಹನ ಸೇತುವೆ ಮೇಲಿಂದ ನದಿಗೆ ಬಿದ್ದಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹುನಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕಾರಿನಲ್ಲಿದ್ದ ದಂಪತಿ, ಇಬ್ಬರು ಮಕ್ಕಳು ಮತ್ತು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದ ಮಹಿಂದ್ರಾ ಜಿತೊ ವಾಹನಕ್ಕೆ ಹುನಗುಂದ ಹಾಗೂ ಕೂಡಲಸಂಗಮ ಮದ್ಯದಲ್ಲಿರುವ ಸೇತುವೆ ಮೇಲೆ ಮಹಿಂದ್ರಾ ಎಕ್ಸಯೂವಿ 500 ಕಾರು ಹಿಂಬದಿ ಗುದ್ದಿದೆ. ಪರಿಣಾಮ ಮಹಿಂದ್ರಾ ಗೂಡ್ಸ್​​ ವಾಹನ ಸೇತುವೆ ಮೇಲಿಂದ 30 ಅಡಿ ಕೆಳಗೆ ನದಿಯಲ್ಲಿ ಬಿದ್ದಿದೆ. ಹುನುಗುಂದ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 ಹೋಟೆಲ್‌ಗೆ ನುಗ್ಗಿದ ಕಂಟೈನರ್, ಇಬ್ಬರು ಸ್ಥಳದಲ್ಲೇ ಸಾವು: ಗರ್ಭಿಣಿ ಸ್ಥಿತಿ ಗಂಭೀರ, ಮಗು ಬಚಾವ್

ಚಿಕ್ಕಬಳ್ಳಾಪುರ: ಅದು ರಾಷ್ಟ್ರೀಯ ಹೆದ್ದಾರಿ-44ಕ್ಕೆ ಹೊಂದಿಕೊಂಡಿರುವ ಹೋಟೆಲ್. ಆ ಹೋಟೆಲ್‌ನಲ್ಲಿ ತಿಂಡಿ, ಕಾಫಿ, ಚೆನ್ನಾಗಿರುತ್ತೆ ಅಂತ ವಾಹನ ಸವಾರರು ಬೆಳ್ಳಂಬೆಳಿಗ್ಗೆ ಅಲ್ಲಿ ಕಾರು ನಿಲ್ಲಿಸಿ, ಕಾಫಿ ಕುಡಿಯುತ್ತಿದ್ದರು ಅಷ್ಟೇ. ಹೋಟೆಲ್ ಬಳಿ ಇದ್ದ ಗ್ರಾಹಕರನ್ನೇ ಹುಡುಕಿಕೊಂಡು ಬಂದ ಜವರಾಯ ಕ್ಷಣಾರ್ಧದಲ್ಲಿ ಇಬ್ಬರ ಪ್ರಾಣ ಪಡೆದು, ಇನ್ನು ಕೆಲವರು ಆಸ್ಪತ್ರೆ ಸೇರುವಂತೆ ಮಾಡಿದ್ದಾನೆ. ರಾಷ್ಟ್ರೀಯ ಹೆದ್ದಾರಿ-44, ಹೈದರಾಬಾದ್-ಬೆಂಗಳೂರಿಗೆ ಸಂಪರ್ಕ ಕಲ್ಪಿಸುತ್ತೆ. ಹೆದ್ದಾರಿಯ ಚಿಕ್ಕಬಳ್ಳಾಪುರ ತಾಲ್ಲೂಕು, ರಾಮದೇವರಗುಡಿ ಗೇಟ್ ಬಳಿ ಪ್ರಣವ್​ ಎನ್ನುವ ಹೋಟೆಲ್‌ವೊಂದಿದೆ. ಆ ಹೋಟೆಲ್‌ನಲ್ಲಿ ಟೀ, ಕಾಫಿ, ತಿಂಡಿ ರುಚಿಕರವಾಗಿರುತ್ತೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುವವರು ಕೆಲವೊತ್ತು ಹೋಟೆಲ್ ಬಳಿ ಕಾರುಗಳನ್ನು ನಿಲ್ಲಿಸಿ ಟೀ, ಕಾಫಿ ಕುಡಿಯುವುದು ವಾಡಿಕೆ. ಹೀಗೆ ಇಂದು ಬೆಳ್ಳಂಬೆಳಿಗ್ಗೆ 7-40ರ ಸಮಯ ಹೋಟೆಲ್‌ನ ಪಾರ್ಕಿಂಗ್‌ನಲ್ಲಿ ಕಾರುಗಳನ್ನು ನಿಲ್ಲಿಸಿ ಕೆಲವರು ಟೀ, ಕಾಫಿ ಕುಡಿಯುತ್ತಿದ್ದರು.

ಇನ್ನೂ ಕೆಲವರು ಪಾರ್ಕಿಂಗ್‌ನಲ್ಲಿ ಮಕ್ಕಳ ಜೊತೆ ಆಟವಾಡಿಕೊಂಡಿದ್ದರು. ಕಂಟೈನರ್ ರೂಪದಲ್ಲಿ ಅಲ್ಲಿಗೆ ಬಂದ ಜವರಾಯ ಹೋಟೆಲ್‌ನ ಭದ್ರತಾ ಸಿಬ್ಬಂದಿ ನಾರಾಯಣಸ್ವಾಮಿ ಹಾಗೂ ಹೋಟೆಲ್ ಬಳಿ ಸರ್ವೀಸ್ ರಸ್ತೆಯಲ್ಲಿ ಬೈಕ್‌ನಲ್ಲಿ ಬರುತ್ತಿದ್ದ ಬೈಕ್ ಸವಾರ ಜರ್ನಾಧನ ಮೇಲೆ ಕಂಟೈನರ್ ಹರಿದು ಹೋಟೆಲ್‌ನತ್ತ ನುಗ್ಗಿದೆ. ಸರ್ವೀಸ್ ರಸ್ತೆಯಲ್ಲಿ ಜನಾರ್ಧನ್ ಹೋಟೆಲ್ ಬಳಿ ನಾರಾಯಣಸ್ವಾಮಿಯನ್ನು ಬಲಿ ಪಡೆದ ಕಂಟೈನರ್, ಹೋಟೆಲ್‌ನ ಪಾರ್ಕಿಂಗ್ ಸ್ಥಳಕ್ಕೆ ನುಗ್ಗಿದ್ದೇ ತಡ ಒಂದಲ್ಲ, ಎರಡಲ್ಲ ಐದು ಕಾರುಗಳು ಜಖಂಗೊಂಡಿವೆ. ಅಲ್ಲೇ ಪಾರ್ಕಿಂಗ್‌ನಲ್ಲಿದ್ದ ಬೆಂಗಳೂರಿನ ಆಡುಗೋಡಿ ನಿವಾಸಿ 4 ತಿಂಗಳ ಗರ್ಭಿಣಿ ಮಾನಸ, ಪತಿ ಹರ್ಷ ದೇಶಪಾಂಡೆ ಹಾಗೂ ಮಾನಸ ತಂದೆ ನರಸಿಂಹ ಸೇರಿದಂತೆ ದಂಪತಿಯ 5 ವರ್ಷದ ಮಗೂ ಸಹಾ ಇತ್ತು.

ಕಂಟೈನರ್ ಲಾರಿ ಹೋಟೆಲ್‌ಗೆ ನುಗ್ಗುವುದನ್ನು ಗಮನಿಸಿದ ದಂಪತಿ ಮಗುವನ್ನು ಎತ್ತಿಕೊಂಡು ಓಡುವಷ್ಟರಲ್ಲಿ ಲಾರಿ ಗರ್ಭಿಣಿಯ ಕಾಲು ಮೇಲೆ ಹರಿದು, ಚಿಂತಾಜನಕಳಾಗಿದ್ದು ಬೆಂಗಳೂರಿನ ಹಾಸ್ಮೇಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಹೈದರಾಬಾದ್‌ನತ್ತ ಹೊರಟಿದ್ದ ಕಂಟೈನರ್ ಲಾರಿ ಓವರ್ ಸ್ಪೀಡ್‌ನಲ್ಲಿತ್ತು. ಲಾರಿಯ ಮುಂದಿದ್ದ ಎಕೋಸ್ಪೋರ್ಟ್ಸ್ ಕಾರೊಂದು ಸಡನ್ನಾಗಿ ಎಡದಿಂದ ಬಲಕ್ಕೆ ಹೋಟೆಲ್‌ನತ್ತ ತಿರುಗಿದೆ. ಇದರಿಂದ ಗಾಬರಿಗೊಂಡ ಲಾರಿ ಚಾಲಕ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ್ದಾನೆ. ಇದರಿಂದ ಅವಘಡ ನಡೆದಿದ್ದು, ತಮಿಳುನಾಡು ಮೂಲದ ಲಾರಿ ಚಾಲಕ ಅಜಿತ್‌ನನ್ನು ಬಂಧಿಸಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:01 pm, Sat, 17 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ