AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟಗುಡ್ಡ ಪ್ರಾಥಮಿಕ ಆರೋಗ್ಯ ಕೇಂದ್ರ ಇಡೀ ಬಾಗಲಕೋಟೆ ಜಿಲ್ಲೆಗೇ ಮಾದರಿ! ಏನದರ ವಿಶೇಷ?

ಸರ್ಕಾರಿ ಆಸ್ಪತ್ರೆ ಅಂದ್ರೆ ಸಾಕು ಜನರು ನೋಡುವ ದೃಷ್ಟಿಯೇ ಬೇರೆ. ತೀರಾ ಬಡವರು ಹಾಗೂ ಅನಿವಾರ್ಯದ ಸ್ಥಿತಿಯಲ್ಲಿದ್ದವರು ಮಾತ್ರ ಸರ್ಕಾರಿ ಆಸ್ಪತ್ರೆ ಕಡೆ ಹೋಗೋದು ಸಾಮಾನ್ಯ. ಆದ್ರೆ ಆ ಸರ್ಕಾರಿ ಆಸ್ಪತ್ರೆ ಖಾಸಗಿ ಆಸ್ಪತ್ರೆಗಳಿಗೆ ಸೆಡ್ಡು ಹೊಡೆದು‌ ನಿಂತಿದೆ.

ಮೆಟಗುಡ್ಡ ಪ್ರಾಥಮಿಕ ಆರೋಗ್ಯ ಕೇಂದ್ರ ಇಡೀ ಬಾಗಲಕೋಟೆ ಜಿಲ್ಲೆಗೇ ಮಾದರಿ! ಏನದರ ವಿಶೇಷ?
ಮಾದರಿಯಾದ ಮೆಟಗುಡ್ಡ ಪ್ರಾಥಮಿಕ ಆರೋಗ್ಯ ಕೇಂದ್ರ
ಆಯೇಷಾ ಬಾನು
| Edited By: |

Updated on:Jan 20, 2021 | 3:00 PM

Share

ಬಾಗಲಕೋಟೆ: ಆವರಣದಲ್ಲಿ ಸ್ವಚ್ಛತೆ, ಶುಚಿತ್ವದಿಂದ ಕೂಡಿದ ಬೆಡ್, ಬಾಣಂತಿಯರಿಗೆ, ಅವಶ್ಯಕತೆಯಿದ್ದವರಿಗೆ ಸೊಳ್ಳೆ ಪರದೆಯ ವ್ಯವಸ್ಥೆ, ಸುಸಜ್ಜಿತ ಔಷಧ ವಿಭಾಗ, ರೋಗಿಗಳಿಗೆ ಉತ್ತಮ ಚಿಕಿತ್ಸೆ ಸೇರಿದಂತೆ ಈ ರೀತಿ ಸರ್ಕಾರಿ ಆಸ್ಪತ್ರೆಯೊಂದು ತನ್ನ ಗುಣಮಟ್ಟ ಕಾಪಾಡಿಕೊಂಡು ಮಾದರಿ ಆಸ್ಪತ್ರೆಯಾಗಿದೆ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮೆಟಗುಡ್ಡ ಪ್ರಾಥಮಿಕ ಆರೋಗ್ಯ ಕೇಂದ್ರದ ಸರ್ಕಾರಿ ಆಸ್ಪತ್ರೆ ಯಾವುದೇ ಖಾಸಗಿ ಆಸ್ಪತ್ರೆಗೆ  ಕಮ್ಮಿ ಇಲ್ಲ. ಇಲ್ಲಿ  ಸ್ವಚ್ಛತೆ, ಶುಚಿತ್ವಕ್ಕೆ ಕೊರತೆಯೇ ಇಲ್ಲ. ಗುಣಮಟ್ಟದ ಚಿಕಿತ್ಸೆ ಸೌಲಭ್ಯವಿದೆ. ಇಲ್ಲಿನ ಸಿಬ್ಬಂದಿ ಕೂಡ ಹಗಲಿರುಳು ಸೇವೆ ಸಲ್ಲಿಸುತ್ತಿದ್ದಾರೆ. ಈ ಎಲ್ಲಾ ಸೇವೆ ಗಮನಿಸಿ ಸರ್ಕಾರ ಈ ಮೆಟಗುಡ್ಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾಯಕಲ್ಪ ಪ್ರಶಸ್ತಿ ನೀಡಿ ಗೌರವಿಸುತ್ತಿದೆ‌‌.

ಮೆಟಗುಡ್ಡ ಗ್ರಾಮದಲ್ಲಿನ ಈ ಆರೋಗ್ಯ ಕೇಂದ್ರ ಹತ್ತಾರು ಹಳ್ಳಿಗಳಿಗೆ ಸಂಜೀವಿನಿಯಾಗಿದೆ. ಬಡವರ ಜೀವ ಕಾಪಾಡುವ ಸುರಕ್ಷತಾ ಆಸ್ಪತ್ರೆಯಾಗಿದೆ. ಎಲ್ಲ ರೀತಿಯ ಚಿಕಿತ್ಸೆ ಸೌಲಭ್ಯ ಇಲ್ಲಿ ನಿರಂತರ ನಡೆಯುತ್ತಿದೆ. ಇಡೀ ಗ್ರಾಮದ ಜನರು ಹಾಗೂ ಸುತ್ತಲಿನ ಹಳ್ಳಿಯ ಜನರಿಗೆ ಈ ಆಸ್ಪತ್ರೆ ಅಂದ್ರೆ ಅಚ್ಚುಮೆಚ್ಚು. ಒಟ್ಟಾರೆ ಸರ್ಕಾರಿ ಆಸ್ಪತ್ರೆ ಅಂದರೆ ಮೂಗು ಮುರಿಯುವ ಈ ಕಾಲದಲ್ಲಿ ಈ ಆಸ್ಪತ್ರೆ ಮಾತ್ರ ಎಲ್ಲರಿಗೂ ಮಾದರಿಯಾಗಿದೆ.

Published On - 2:54 pm, Wed, 20 January 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ