AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಹಳೆ ವಿದ್ಯಾರ್ಥಿಗಳಿಂದ ಹೊಸ ರೂಪ ಪಡೆದ ಸರ್ಕಾರಿ ಶಾಲೆ; ಮಕ್ಕಳನ್ನು ಆಕರ್ಷಿಸುತ್ತಿದೆ ಸ್ಮಾರ್ಟ್​ ಕ್ಲಾಸ್​ ಪಾಠ

ಅಮೀನಗಡ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸದ್ಯ 189 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಇಲ್ಲಿ ದೊರೆಯುತ್ತದೆ. ಆದರೆ ಸ್ಮಾರ್ಟ್ ಕ್ಲಾಸ್ ಇಲ್ಲಿ ಇದ್ದಿರಲಿಲ್ಲ. ಇದನ್ನರಿತ  1996-97 ನೇ ಸಾಲಿನ ವಿದ್ಯಾರ್ಥಿಗಳು ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿ ಸ್ಮಾರ್ಟ್ ಕ್ಲಾಸ್ ಆರಂಭವಾಗುವಂತೆ ಮಾಡಿದ್ದಾರೆ.

ಬಾಗಲಕೋಟೆ: ಹಳೆ ವಿದ್ಯಾರ್ಥಿಗಳಿಂದ ಹೊಸ ರೂಪ ಪಡೆದ ಸರ್ಕಾರಿ ಶಾಲೆ; ಮಕ್ಕಳನ್ನು ಆಕರ್ಷಿಸುತ್ತಿದೆ ಸ್ಮಾರ್ಟ್​ ಕ್ಲಾಸ್​ ಪಾಠ
ಅಮೀನಗಡ ಸರಕಾರಿ ಮಾದರಿ ಪ್ರಾಥಮಿಕ ಶಾಲೆ
Follow us
TV9 Web
| Updated By: preethi shettigar

Updated on: Sep 21, 2021 | 11:19 AM

ಬಾಗಲಕೋಟೆ: ಸರಕಾರಿ ಶಾಲೆಗಳು ಅಂದರೆ ಜನರು ನೋಡುವ ದೃಷ್ಟಿಕೋನವೇ ಬೇರೆ. ಇದಕ್ಕೆ ಕಾರಣ ಇತ್ತೀಚೆಗೆ ಖಾಸಗಿ ಶಾಲೆಗಳ ಕಡೆಗಿನ ಒಲವು ಹೆಚ್ಚಾಗಿದೆ. ಆದರೂ ಕೆಲವೊಂದು ಸರಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವ ರೀತಿ ಇರುತ್ತವೆ. ಅಂತಹ ಶಾಲೆಗಳ ಪಟ್ಟಿಯಲ್ಲಿ ಇಲ್ಲೊಂದು ಶಾಲೆ ಕೂಡ ಸೇರ್ಪಡೆಯಾಗಿದೆ. ತಾವು ಕಲಿತ ಶಾಲೆ ಎನ್ನುವ ಅಭಿಮಾನದಿಂದ ಮಾಡಿದ ಕಾರ್ಯದಿಂದ ಈ ಶಾಲೆ ಓದುವ ಹಂಬಲವಿರುವ ಮಕ್ಕಳನ್ನು ತನ್ನತ್ತ ಕೈ ಬೀಸಿ ಕರೆಯುತ್ತಿದೆ.

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಅಮೀನಗಡ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ಅಭಿವೃದ್ಧಿಯತ್ತ ಸಾಗುತ್ತಿದೆ. ಒಂದು ಕ್ಷಣ ನೋಡಿದರೆ ಸಾಕು ಶಾಲೆಯನ್ನು ಮತ್ತೆ ಮತ್ತೆ ನೋಡಬೇಕೆನ್ನಿಸುವ ಸೌಂದರ್ಯ ಕಣ್ಮನ ಸೆಳೆಯುತ್ತದೆ. ಶಾಲೆ ಕಪೌಂಡ್​ಗೆ ಲೇಪಿಸಿದ ಬಣ್ಣ, ಬರೆದ ಬರಹಗಳು, ಚಿತ್ರಗಳು ಆಕರ್ಷಿಸುತ್ತವೆ. ಜೊತೆಗೆ ಶಾಲೆಯ ಕಟ್ಟಡಗಳು  ಬಣ್ಣದಿಂದ ಕಂಗೊಳಿಸುತ್ತಿವೆ. ಹಾಗಂತ ಈ ಶಾಲೆಗೆ ಸರಕಾರದಿಂದ ವಿಶೇಷ ಅನುದಾನ ಬಂದಿಲ್ಲ.ಇಷ್ಟೆಲ್ಲ ಅಭಿವೃದ್ಧಿ, ಅಂದ ಚೆಂದಕ್ಕೆ ಕಾರಣ ಈ ಶಾಲೆಯ ಹಳೆಯ ವಿದ್ಯಾರ್ಥಿಗಳು.

ತಾವು ಕಲಿತ ಶಾಲೆ ಮೊದಲು ಬಹಳ ಅಧೋಗತಿಗೆ ತಲುಪಿತ್ತು. ಜನರು ಮನಬಂದಂತೆ ವರ್ತಿಸಿ ಶಾಲೆಯ ಪರಿಸರ ಹಾಳು ಮಾಡಿದ್ದರು. ಇದರಿಂದ ಶಾಲೆಯ ಹಳೆ ವಿದ್ಯಾರ್ಥಿಗಳು ತಾವು ಕಲಿತ ಶಾಲೆ ಎಂಬ ಅಭಿಮಾನದಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸರಕಾರಿ ಶಾಲೆ ಎಲ್ಲರನ್ನು ಸೆಳೆಯುವಂತೆ ಮಾಡಿದ್ದೇವೆ ಎಂದು ಹಳೆಯ ವಿದ್ಯಾರ್ಥಿ ಯಮನೂರ ತಿಳಿಸಿದ್ದಾರೆ.

ಅಮೀನಗಡ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸದ್ಯ 189 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಇಲ್ಲಿ ದೊರೆಯುತ್ತದೆ. ಆದರೆ ಸ್ಮಾರ್ಟ್ ಕ್ಲಾಸ್ ಇಲ್ಲಿ ಇದ್ದಿರಲಿಲ್ಲ. ಇದನ್ನರಿತ  1996-97 ನೇ ಸಾಲಿನ ವಿದ್ಯಾರ್ಥಿಗಳು ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿ ಸ್ಮಾರ್ಟ್ ಕ್ಲಾಸ್ ಆರಂಭವಾಗುವಂತೆ ಮಾಡಿದ್ದಾರೆ. ಮಕ್ಕಳಿಗೆ ಎಲ್​ಇಡಿ ಕೊಡಿಸಿ ಅದರ ಮೂಲಕ ಚಿತ್ರಸಹಿತ ಪಾಠ ಮಾಡೋದಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.ಇದರಿಂದ ದಿನಾಲೂ‌ ಮಕ್ಕಳಿಗೆ ಸ್ಮಾರ್ಟ್ ಕ್ಲಾಸ್​ಗಳು ಇಲ್ಲಿ ನಡೆಯುತ್ತವೆ.

smart class

ಸ್ಮಾರ್ಟ್ ಕ್ಲಾಸ್

ಇನ್ನು ಶಾಲೆ ಹಾಗೂ ಶಾಲೆ ಕೊಠಡಿಗಳಿಗೆ ಬಣ್ಣ ಬಳಿಯಲು ಕೂಡ ಲಕ್ಷಕ್ಕೂ ಅಧಿಕ ಹಣ ಖರ್ಚಾಗಿದೆ. ಇದನ್ನು ಕೂಡ ಹಳೆಯ ವಿದ್ಯಾರ್ಥಿಗಳು ಹಳೆಯ ವಿದ್ಯಾರ್ಥಿಗಳನ್ನೊಳಗೊಂಡ ಸಂದೇಶ ಸೇವಾ ಸಂಸ್ಥೆ ಹಾಗೂ ಇನ್ನಿತರ ಹಳೆಯ ವಿದ್ಯಾರ್ಥಿಗಳು ಬಣ್ಣ ಹಚ್ಚಿ ತಮ್ಮ ಶಾಲೆ ಸೌಂದರ್ಯವನ್ನು ಇಮ್ಮಡಿಗೊಳಿಸಿದ್ದಾರೆ. ಯಾವುದೇ ಸರಕಾರಿ ಅನುದಾನಕ್ಕಾಗಿ ಕಾಯದೆ ವಿದ್ಯಾರ್ಥಿಗಳ ಸಹಕಾರದಿಂದ ಈ ಶಾಲೆ ಇಂದು ಎಲ್ಲರನ್ನು ಸೆಳೆಯುತ್ತಿದ್ದು, ವಿದ್ಯಾರ್ಥಿಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ.

ಶಾಲೆಯ ಎಲ್ಲಾ ಶಿಕ್ಷಕರು ಕೂಡ ತಲಾ ಐದು ಸಾವಿರ ರೂಪಾಯಿ ಸೇರಿಸಿ ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯಕ್ಕೆ ಮುಂದಾಗಿದ್ದಾರೆ. ಹಳೆಯ ವಿದ್ಯಾರ್ಥಿಗಳ ಕಾರ್ಯಕ್ಕೆ ಶಿಕ್ಷಕವೃಂದ ಹರ್ಷ ವ್ಯಕ್ತ ಪಡಿಸುತ್ತಿದೆ. ಎಲ್ಲರೂ ತಮ್ಮ ತಮ್ಮ ಶಾಲೆ ಮೇಲಿನ ಅಭಿಮಾನದಿಂದ ಈ ರೀತಿ ಸಹಾಯ ಹಸ್ತ ಚಾಚಿದರೆ ಯಾವುದೇ ಸರಕಾರಿ ಶಾಲೆ ಖಾಸಗಿ ಶಾಲೆಗಳಿಗಿಂತ ಕಮ್ಮಿ ಇರುವುದಿಲ್ಲ.ಇವರ ಕಾರ್ಯ ಎಲ್ಲರಿಗೂ ಮಾದರಿ ಎಂದು ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಅಮೀನಗಡದ ಮುಖ್ಯ ಶಿಕ್ಷಕರು ತಿಳಿಸಿದ್ದಾರೆ.

ಒಟ್ಟಾರೆ ಸರಕಾರಿ ಶಾಲೆಯೊಂದು ಹಳೆ ವಿದ್ಯಾರ್ಥಿಗಳ ಅಭಿಮಾನದಿಂದ ಹೈಟೆಕ್ ಆಗಿದೆ. ಅಭಿಮಾನ ಎನ್ನುವುದು ಒಂದಿದ್ದರೆ ಏನೆಲ್ಲ ಬದಲಾವಣೆ ಆಗಬಹುದು ಎಂಬುವುದಕ್ಕೆ ಈ ಶಾಲೆ ಸಾಕ್ಷಿಯಾಗಿದೆ.

ವರದಿ: ರವಿ ಮೂಕಿ 

ಇದನ್ನೂ ಓದಿ: ಆದಿವಾಸಿ ಮಕ್ಕಳ ಕಲಿಕೆಗಾಗಿ ಮೈಸೂರಿನ 6 ಹಾಡಿಗಳಲ್ಲಿ ಚಿಗುರು ಶಾಲೆ ಆರಂಭ

ಬೋಟಿನಲ್ಲಿ ಪಾಠ ಶಾಲೆ; ವರ್ಷಕ್ಕೆ 6 ತಿಂಗಳು ಪ್ರವಾಹದಲ್ಲಿ ಮುಳುಗುವ ಪ್ರದೇಶದಲ್ಲಿ ಯುವಕರಿಂದ ‘ಶಿಕ್ಷಣದ ನಾವೆಗೆ’ ಚಾಲನೆ

ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ