AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಆ ಒಂದು ಕೊಲೆಯಿಂದ ಬಂದೂಕು ತರಬೇತಿ ಪಡೆಯಲು ಮುಂದಾದ ಕುರಿಗಾಹಿಗಳು

ಬಾಗಲಕೋಟೆಯ ಕುರಿಗಾಹಿ ಶರಣಪ್ಪ ಎಂಬುವರು ಇಡೀ ಕುಟುಂಬಕ್ಕೆ ಆಸರೆಯಾಗಿದ್ದರು. ಆದರೆ, ಕುರಿ ಕಳ್ಳರಿಂದ ಕೊಲೆಯಾಗಿ ಜೀವ ಕಳೆದುಕೊಂಡಿದ್ದಾರೆ. ಇವರ ಕೊಲೆ, ಕುರುಬ ಸಮುದಾಯ ಹೊಸದೊಂದು ಪ್ರಯತ್ನಕ್ಕೆ ಕೈ ಹಾಕುವಂತೆ ಮಾಡಿದೆ. ಇವರ ಪ್ರಯತ್ನಕ್ಕೆ ಬಾಗಲಕೋಟೆ ಎಸ್​ಪಿ ಸಾಥ್ ನೀಡಿದ್ದಾರೆ. ಏನದು ಹೊಸ ಪ್ರಯತ್ನ? ಇಲ್ಲಿದೆ ಓದಿ

ಬಾಗಲಕೋಟೆ: ಆ ಒಂದು ಕೊಲೆಯಿಂದ ಬಂದೂಕು ತರಬೇತಿ ಪಡೆಯಲು ಮುಂದಾದ ಕುರಿಗಾಹಿಗಳು
ಕುರಿಗಾಹಿಗಳ ಪ್ರತಿಭಟನೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: ವಿವೇಕ ಬಿರಾದಾರ|

Updated on:Mar 31, 2025 | 10:34 PM

Share

ಬಾಗಲಕೋಟೆ, ಮಾರ್ಚ್​ 31: ಬಾದಾಮಿ (Badami) ತಾಲ್ಲೂಕಿನ ಹಳಗೇರಿ ವ್ಯಾಪ್ತಿಯ ಹೊಲದಲ್ಲಿ ಮಾರ್ಚ್ 9 ರಂದು ರಾತ್ರಿ ‌9 ಗಂಟೆಗೆ ಅವಧಿಯಲ್ಲಿ ಶರಣಪ್ಪ ಜಮ್ಮನಕಟ್ಟಿ ಎಂಬ ಕುರಿಗಾಹಿ ಕೊಲೆಯಾಗಿತ್ತು. ಶರಣಪ್ಪ ಅವರ ಕುರಿ ದೊಡ್ಡಿಗೆ ಕುರಿಕಳ್ಳತನಕ್ಕೆ ಯಾಕುಬ್, ಸಲ್ಮಾನ್, ಸಚಿನ್ ಎಂಬ ಕುರಿಗಳ್ಳರು ಬಂದಿದ್ದರು. ಶರಣಪ್ಪ ಅವರು ಈ ಕುರಿ ಕಳ್ಳರನ್ನು ಹಿಡಿಯಲು ಹೋದರು. ಆಗ, ಈ ಕುರಿ ಕಳ್ಳಲು ಶರಣಪ್ಪ ಅವರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದರು. ಹೀಗಾಗಿ, ಕುರಿಗಾಹಿಗಳಿಗೆ ರಕ್ಷಣೆ ನೀಡಬೇಕು, ನಮ್ಮ ಆತ್ಮರಕ್ಷಣೆಗೆ ಬಂದೂಕು (Gun) ನೀಡಬೇಕೆಂದು ಕುರಿಗಾಹಿಗಳು ಹಾಗೂ ಕುರುಬ ಸಮುದಾಯದ (Kurub Community) ಜನರು ಪ್ರತಿಭಟನೆ ನಡೆಸಿದ್ದರು.

ಇದರಿಂದ ಬಾಗಲಕೋಟೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಅವರು ಎಪ್ರಿಲ್ 7 ರಿಂದ ಕುರಿಗಾಹಿಗಳಿಗೆ ಬಂದೂಕು ತರಬೇತಿ ನೀಡಲು ಮುಂದಾಗಿದ್ದಾರೆ. ಈಗಾಗಲೇ 300 ಅರ್ಜಿ ಬಂದಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಕೊಲೆಯಾದ ಕುರಿಗಾಹಿ ಶರಣಪ್ಪ ಬಾದಾಮಿ ತಾಲ್ಲೂಕಿನ ಉಗಲವಾಟ ಗ್ರಾಮದವರಾಗಿದ್ದರು. ಇವರ ಕೊಲೆ ಪ್ರಕರಣ ಇಡೀ ಕುರಿಗಾಹಿಗಳಿಗೆ ಬಂದೂಕು ತರಬೇತಿ ಪಡೆಯುವಲ್ಲಿ ಮಾರ್ಗ ತೋರಿದೆ. ಎಸ್ ಪಿ ಅಮರನಾಥ ರೆಡ್ಡಿ ಕುರಿಗಾಹಿಗಳ ರಕ್ಷಣೆಗೆ ವಿಶೇಷ ಆಸಕ್ತಿ ತೋರಿದ್ದಾರೆ. ರಾತ್ರಿ ಕುರಿ ದೊಡ್ಡಿಗಳಿಗೆ ಭೇಟಿ ನೀಡಿ ಅವರ ಜೀವನವನ್ನು ಅರ್ಥ ಮಾಡಿಕೊಂಡಿದ್ದಾರೆ. ಅವರಿಂದ ಮಾಹಿತಿ ಪಡೆದು ಎಪ್ರಿಲ್ 7 ರಿಂದ ಎಪ್ರಿಲ್ 15 ರವರೆಗೆ ಎಸ್​ಬಿಬಿಎಲ್ ಹಾಗೂ ಡಿಬಿಬಿಎಲ್‌ ಬಂದೂಕತು ತರಬೇತಿ ನೀಡಲು ಮುಂದಾಗಿದ್ದಾರೆ. ಪೊಲೀಸ್ ಪರೇಡ್ ಗ್ರೌಂಡ್​ನಲ್ಲಿ ಎಪ್ರಿಲ್ 7 ರಿಂದ ಬೆಳಿಗ್ಗೆ 6.30 ಕ್ಕೆ ತರಬೇತಿ ಆರಂಭವಾಗಲಿದೆ. ಜೊತೆಗೆ ಅರ್ಜಿ ಹಾಕುವ ವಿಧಾನವನ್ನು ಸರಳೀಕರಣ ಮಾಡಿದ್ದಾರೆ.

ಇದನ್ನೂ ಓದಿ
Image
ಸಾಲ ಕೊಡದಿದ್ದಕ್ಕೆ ನ್ಯಾಮತಿ ಬ್ಯಾಂಕ್ ದರೋಡೆ: ಸಹೋದರರ ಬಂಧನ!
Image
ಪ್ರೇಯಸಿಯನ್ನು ಕೊಂದು ಹೊಲದಲ್ಲಿ ಹೂತು ಹಾಕಿದ ವ್ಯಕ್ತಿ
Image
ಎಣ್ಣೆ ಪಾರ್ಟಿ ಮಾಡ್ತಿದ್ದಾಗಲೇ ಕೊಲೆ: ಯುಗಾದಿಯಂದೇ ಹೆಣವಾದ ರೌಡಿಶೀಟರ್​​
Image
ಹೆಂಡ್ತಿ ಜೀವನಾಂಶ ಕೇಳಿದ್ದಕ್ಕೆ ಯುಗಾದಿಯಂದೇ ಗಂಡ ರಾಕ್ಷಸ ಅವತಾರ!

ಇದನ್ನೂ ಓದಿ: ಕರ್ನಾಟಕದಲ್ಲಿ ಬಂದೂಕು ಲೈಸೆನ್ಸ್​ ಪಡೆಯುವುದು ಹೇಗೆ? ಅರ್ಜಿ ಸಲ್ಲಿಕೆ ಪ್ರಕ್ರಿಯೆ, ನಿಯಮಗಳೇನು? ಇಲ್ಲಿದೆ ಮಾಹಿತಿ

ತರಬೇತಿ ನಂತರ ಪರವಾನಗಿ ಪಡೆದು ಬಂದೂಕು ಖರೀದಿಸಬಹುದಾಗಿದೆ. ಇನ್ನು, ಈ ಬಗ್ಗೆ ಕುರುಬ ಸಮುದಾಯದ ಮುಖಂಡರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆತ್ಮರಕ್ಷಣೆಗೆ ಬಂದೂಕು ತರಬೇತಿ ನೀಡುತ್ತಿರುವುದು ಒಳ್ಳೆಯದು. ಆದರೆ, ಅದು ದುರುಪಯೋಗವಾಗದಂತೆ ನೋಡಿಕೊಳ್ಳಬೇಕು. ಜೊತೆಗೆ ಸರಕಾರ ಕುರಿಗಾಹಿಗಳಿಗೆ ಉಚಿತವಾಗಿ ಸೋಲಾರ್‌ ಸಿಸಿ ಕ್ಯಾಮೆರಾ ನೀಡಬೇಕೆಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:33 pm, Mon, 31 March 25

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು