AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಕಾಯಿಸುವ ವಿಚಾರಕ್ಕೆ ಮುಖ್ಯಶಿಕ್ಷಕ, ಸೆಕ್ಯೂರಿಟಿ ಗಾರ್ಡ್ ಮಧ್ಯೆ ಜಗಳ: ಕೊಲೆಯಲ್ಲಿ ಅಂತ್ಯ

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ನೀರು ಕಾಯಿಸುವ ವಿಚಾರದಲ್ಲಿ ಮುಖ್ಯ ಶಿಕ್ಷಕ ಮತ್ತು ಸೆಕ್ಯೂರಿಟಿ ಗಾರ್ಡ್ ನಡುವೆ ಜಗಳ ನಡೆದು, ಕಟ್ಟಿಗೆಯಿಂದ ಹೊಡೆದು ಸೆಕ್ಯೂರಿಟಿ ಗಾರ್ಡ್​ನನ್ನ ಕೊಲೆ ಮಾಡಲಾಗಿದೆ. ಆಸ್ಪತ್ರೆಗೆ ಸಾಗಿಸುವಾಗ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನೀರು ಕಾಯಿಸುವ ವಿಚಾರಕ್ಕೆ ಮುಖ್ಯಶಿಕ್ಷಕ, ಸೆಕ್ಯೂರಿಟಿ ಗಾರ್ಡ್ ಮಧ್ಯೆ ಜಗಳ: ಕೊಲೆಯಲ್ಲಿ ಅಂತ್ಯ
ನೀರು ಕಾಯಿಸುವ ವಿಚಾರಕ್ಕೆ ಮುಖ್ಯಶಿಕ್ಷಕ, ಸೆಕ್ಯೂರಿಟಿ ಗಾರ್ಡ್ ಮಧ್ಯೆ ಜಗಳ: ಕೊಲೆಯಲ್ಲಿ ಅಂತ್ಯ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Jan 12, 2025 | 6:04 PM

Share

ಬಾಗಲಕೋಟೆ, ಜನವರಿ 12: ಕಟ್ಟಿಗೆಯಿಂದ ಹೊಡೆದು ಸೆಕ್ಯೂರಿಟಿ ಗಾರ್ಡ್​ನನ್ನು ಮುಖ್ಯ ಶಿಕ್ಷಕ ಕೊಲೆ (death) ಮಾಡಿರುವಂತಹ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ನಾಗರಾಳ ಗ್ರಾಮದ ರಾಧಾಕೃಷ್ಣ ಖಾಸಗಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ನಾಗಪ್ಪ ತೋಳಮಟ್ಟಿ ಮೃತ ಸೆಕ್ಯೂರಿಟಿ ಗಾರ್ಡ್. ಘಟನಾ ಸ್ಥಳಕ್ಕೆ ಬೀಳಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನೀರು ಕಾಯಿಸುವ ವಿಚಾರಕ್ಕೆ ಮುಖ್ಯಶಿಕ್ಷಕ ಧನರಾಜ ರಾಠೋಡ್​ ಹಾಗೂ ಸೆಕ್ಯೂರಿಟಿ ಗಾರ್ಡ್ ನಾಗಪ್ಪ ತೋಳಮಟ್ಟಿ ನಡುವೆ ಜಗಳವಾಗಿದೆ. ಈ ವೇಳೆ ನಾಗಪ್ಪ ತೋಳಮಟ್ಟಿಗೆ ಧನರಾಜ ರಾಠೋಡ್​ ಕಟ್ಟಿಗೆಯಿಂದ ಥಳಿಸಿದ್ದಾರೆ. ಬಳಿಕ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ನಾಗಪ್ಪ ತೋಳಮಟ್ಟಿ ಮೃತಪಟ್ಟಿದ್ದಾರೆ.

ಎರಡು ದಿನಗಳಿಂದ ಆಟೋ ಚಾಲಕ ನಾಪತ್ತೆ: ಕೊಲೆ ಶಂಕೆ

ಎರಡು ದಿನಗಳಿಂದ ನಾಪತ್ತೆಯಾಗಿದ್ದ ಆಟೋ ಚಾಲಕ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಜನವರಿ 10 ರ ಶುಕ್ರವಾರ ಆಟೋ ಚಾಲಕ ಶಿವಕುಮಾರ್ ನನ್ನ ಗೆಳೆಯರು ಕರೆದುಕೊಂಡು ಹೋಗಿದ್ದರು. ಮಧ್ಯಾಹ್ನದ ವೇಳೆಗೆ ಕಂಠಪೂರ್ತಿ ಕುಡಿಸಿ ಹತ್ಯೆ ಗೈದು ಶಿರಾಡಿಘಾಟ್​ನಲ್ಲಿ ಶವ ಬಿಸಾಡಿರುವ ಆರೋಪ ಕೇಳಿಬಂದಿದೆ. ಶಿವಕುಮಾರ್ ಜೊತೆಗೆ ತೆರಳಿದ್ದ ದಿಲೀಪ್ ನೀಡಿದ ಮಾಹಿತಿ ಆಧರಿಸಿ ತನಿಖೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಪ್ರೀತಿಸಿ ಮದ್ವೆಯಾಗಿದ್ದ ಪತ್ನಿಯನ್ನೇ ಹತ್ಯೆಗೈದ ಪತಿ: ಜಾತ್ರೆಯಲ್ಲಿ ಹುಟ್ಟಿದ ಲವ್ ಜಾತ್ರೆಯಲ್ಲೇ ಅಂತ್ಯ

ಹಾಸನ ತಾಲ್ಲೂಕಿನ ಹರಳಹಳ್ಳಿ ಗ್ರಾಮದ ಶಿವಕುಮಾರ್, ಇದೇ ಗ್ರಾಮದ ಶರತ್ ಹಾಗೂ ಪ್ರತಾಪ್ ಎಂಬುವವರಿಂದ ಕೃತ್ಯವೆಸಗಲಾಗಿದೆ ಎನ್ನಲಾಗುತ್ತಿದೆ. ಶರತ್ ಹಾಗೂ ಪ್ರತಾಪ್ ಅವರ ಕಳ್ಳತನವೊಂದರ ಬಗ್ಗೆ ಶಿವಕುಮಾರ್ ಮಾಹಿತಿ ಹೊಂದಿದ್ದ.

ತಮ್ಮ ವಿಚಾರವನ್ನು ಶಿವಕುಮಾರ್ ಬಹಿರಂಗ ಮಾಡುತ್ತಾನೆಂದು ಹಲ್ಲೆ ನಡೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಶವ ಎಸೆಯಲು ಕರೆದೊಯ್ದಿದ್ದ ವೇಳೆ ಹಂತಕರಿಂದ ತಪ್ಪಿಸಿಕೊಂಡು ದಿಲೀಪ್ ಬಂದಿದ್ದ. ದಿಲೀಪ್ ನೀಡಿದ ಮಾಹಿತಿ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಚಿಕ್ಕೋಡಿ: ಅಂಗನವಾಡಿಗೆ ನುಗ್ಗಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ಸದ್ಯ ಶಿವಕುಮಾರ್ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ತಪ್ಪಿಸಿಕೊಂಡು ಬಂದಿರುವ ದಿಲೀಪ್ ನೀಡಿದ ಮಾಹಿತಿ ಆಧರಿಸಿ ಶವ ಪತ್ತೆಗೆ ಪೊಲೀಸರು ಮುಂದಾಗಿದ್ದು, ಘಟನೆ ಬಳಿಕ ಶರತ್ ಹಾಗೂ ಪ್ರತಾಪ್ ತಲೆ ಮರೆಸಿಕೊಂಡಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ