Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalkot News: ಬಾದಾಮಿ ಪಟ್ಟಣದ ಹೊರವಲಯದಲ್ಲಿ ಗೋ ಹತ್ಯೆಗೈದವರ ಬಂಧನಕ್ಕೆ ಹಿಂದೂ ಪರ ಕಾರ್ಯಕರ್ತರ ಆಗ್ರಹ

ಬಕ್ರೀದ್ ಹಬ್ಬ ಹಿನ್ನೆಲೆ ಬಾದಾಮಿ ಪಟ್ಟಣದ ಹೊರವಲಯದಲ್ಲಿ ಗೋವುಗಳನ್ನು ಹತ್ಯೆ ಮಾಡಿದ ವ್ಯಕ್ತಿಯನ್ನು ಹಿಂದೂ ಪರ ಕಾರ್ಯಕರ್ತರು ಗಿಡಕ್ಕೆ ಕಟ್ಟಿ ಅವಾಚ್ಯ ಶಬ್ದದಿಂದ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ.

Bagalkot News: ಬಾದಾಮಿ ಪಟ್ಟಣದ ಹೊರವಲಯದಲ್ಲಿ ಗೋ ಹತ್ಯೆಗೈದವರ ಬಂಧನಕ್ಕೆ ಹಿಂದೂ ಪರ ಕಾರ್ಯಕರ್ತರ ಆಗ್ರಹ
ಹಿಂದೂ ಕಾರ್ಯಕರ್ತರ ಪ್ರತಿಭಟನೆ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ವಿವೇಕ ಬಿರಾದಾರ

Updated on:Jun 29, 2023 | 8:19 PM

ಬಾಗಲಕೋಟೆ: ಬಕ್ರೀದ್ (Eid al-Adha) ಹಬ್ಬ ಹಿನ್ನೆಲೆ ಬಾದಾಮಿ (Badami) ಪಟ್ಟಣದ ಹೊರವಲಯದಲ್ಲಿ ಗೋವುಗಳನ್ನು (Cow) ಹತ್ಯೆ ಮಾಡಿದ ವ್ಯಕ್ತಿಯನ್ನು ಹಿಂದೂ ಪರ ಕಾರ್ಯಕರ್ತರು (Hindu Activist) ಗಿಡಕ್ಕೆ ಕಟ್ಟಿ ಅವಾಚ್ಯ ಶಬ್ದದಿಂದ ನಿಂದಿಸಿರುವ ಆರೋಪ ಕೇಳಿಬಂದಿದೆ. ಅಲ್ಲದೇ ಗೋವುಗಳನ್ನು ಹತ್ಯೆ ಮಾಡಿದ ವಿರುದ್ಧವಾಗಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಗೋ ಹತ್ಯೆಗೈದವರನ್ನು ಕೂಡಲೆ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ಸಹಸ್ರಾರು ಹಿಂದೂ ಕಾರ್ಯಕರ್ತರು ಬಾದಾಮಿ ಪಟ್ಟಣದಲ್ಲಿ ಸೇರಿ ಬಾದಾಮಿಯ ರಾಮದುರ್ಗ ಸರ್ಕಲ್​ನಿಂದ ಬಸವೇಶ್ವರ ಸರ್ಕಲ್​ವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಿದರು. ಸ್ಥಳಕ್ಕೆ ಬಾಗಲಕೋಟೆ ಎಸ್​ಪಿ ಜಯಪ್ರಕಾಶ್ ಭೇಟಿ ನೀಡಿ ಪ್ರತಿಭಟನಾಕಾರರ ಜೊತೆ ಚರ್ಚೆ ನಡೆಸಿದರು.

ಇನ್ನು ಪ್ರಕರಣ ಸಂಬಂಧ ಪೊಲೀಸರು  ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತು ಎರಡು ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಒಂದು ಗೋವನ್ನು ಹತ್ಯೆ ಮಾಡಲಾಗಿದೆ.  ಒಟ್ಟು ಮೂರು ಗೋವುಗಳನ್ನು ಹತ್ಯೆ ಮಾಡಲು ಮುಂದಾಗಿದ್ದರು. ಈ ವೇಳೆ ಪೊಲೀಸರು ತೆರಳಿ ಎರಡು ಗೋವುಗಳನ್ನು ರಕ್ಷಣೆ ಮಾಡಿ, ಗೋಶಾಲೆಗೆ ಬಿಟ್ಟಿದ್ದಾರೆ. ತೇರದಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಾಂಸಹಾರ ತ್ಯಜಿಸಿ ಬಕ್ರೀದ್​​ ಆಚರಿಸಿದ ಮುಸ್ಲಿಂ ಬಾಂಧವರು

ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬಿಡ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಮಾಂಸಹಾರ ತ್ಯಜಿಸಿ ಬಕ್ರೀದ್​ ಆಚರಣೆ ಮಾಡಿದ್ದಾರೆ. ಗ್ರಾಮಸ್ಥರ ನಿರ್ಣಯದಂತೆ ಮುಸ್ಲಿಮರು ಮಾಂಸಹಾರ ತ್ಯಜಿಸಿ ಸಿಹಿ ತಿಂದು ಬಕ್ರೀದ್​​ ಹಬ್ಬವನ್ನು ಆಚರಿಸಿದ್ದಾರೆ. ಒಂದೇ ತಿಂಗಳಲ್ಲಿ ಗ್ರಾಮದ ಐವರು ಯುವಕರು ಮೃತಪಟ್ಟ ಹಿನ್ನೆಲೆ ಗ್ರಾಮಸ್ಥರು ಧರ್ಮಾತೀತವಾಗಿ ಮಾಂಸಹಾರ ತ್ಯಜಿಸಲು ನಿರ್ಣಯಿಸಿದ್ದರು.

12 ದಿನ ಮಾಂಸಹಾರ ತ್ಯಜಿಸಿ  ಗ್ರಾಮ ದೇವತೆಗೆ ವಿಶೇಷ ಪೂಜೆ ಸಲ್ಲಿಸಲು ನಿರ್ಣಯಿಸಿದ್ದರು. ಹೀಗಾಗಿ ಕಳೆದ 10 ದಿನಗಳಿಂದ ಗ್ರಾಮಸ್ಥರು ಮಾಂಸಹಾರ ತ್ಯಜಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Thu, 29 June 23

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ