AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತ್ರಸ್ತರಿಗೆ ಮೀಸಲಿಟ್ಟ ಸರಕಾರಿ‌ ಜಾಗದಲ್ಲಿ ‘ತಬ್ಲಿಘಿ ಬಡೆ ಇಜ್ತೆಮಾ’ ಕಾರ್ಯಕ್ರಮ; ಹಿಂದೂ ಸಂಘಟನೆಯಿಂದ ವಿರೋಧ

ಅದು ಆಲಮಟ್ಟಿ ಜಲಾಶಯ ಮುಳುಗಡೆ ಸಂತ್ರಸ್ತರಿಗೆ ಎಂದು ಮೀಸಲಿಟ್ಟ ಸರಕಾರಿ‌ ಜಾಗ. ಆದರೆ, ಆ ಜಾಗದಲ್ಲಿ ಈಗ ಮುಸ್ಲಿಂ ಸಂಘಟನೆಗಳಿಂದ "ತಬ್ಲಿಘಿ ಬಡೆ ಇಜ್ತೆಮಾ" ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದು ಹಿಂದು ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಬಾರಿ ಪ್ರತಿಭಟನೆ ಮೂಲಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಸಂತ್ರಸ್ತರಿಗೆ ಮೀಸಲಿಟ್ಟ ಸರಕಾರಿ‌ ಜಾಗದಲ್ಲಿ ‘ತಬ್ಲಿಘಿ ಬಡೆ ಇಜ್ತೆಮಾ' ಕಾರ್ಯಕ್ರಮ; ಹಿಂದೂ ಸಂಘಟನೆಯಿಂದ ವಿರೋಧ
ಬಾಗಲಕೋಟೆಯಲ್ಲಿ ಹಿಂದೂ ಜಾಗರಣ ವೇಧಿಕೆಯಿಂದ ಪ್ರತಿಭಟನೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Feb 10, 2024 | 6:40 PM

Share

ಬಾಗಲಕೋಟೆ, ಫೆ.10: ಬಾಗಲಕೋಟೆ(Bagalakote)ಯ ನವನಗರದ ಸೆಕ್ಟರ್ ನಂ.112 ರಲ್ಲಿ ಮುಸ್ಲಿಂ ಸಮುದಾಯದಿಂದ “ತಬ್ಲಿಘಿ ಬಡೆ ಇಜ್ತೆಮಾ”ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಡೆ ಇಜ್ತೆಮಾ ಮೂಲಕ ರಾಜ್ಯ-ಅಂತರ್​ರಾಜ್ಯದಿಂದ ಮೌಲ್ವಿಗಳು ಸೇರಿದಂತೆ ಲಕ್ಷಾಂತರ ಮುಸ್ಲಿಂ ಜನರ ಸಮ್ಮುಖದಲ್ಲಿ ಧಾರ್ಮಿಕ ‌ಕಾರ್ಯಕ್ರಮ ನಡೆಸಲಾಗುತ್ತದೆ. ಫೆಬ್ರವರಿ 14 ರಿಂದ 15 ರಂದು ಎರಡು ದಿನ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಅದು ಒಂದು ಮತೀಯ ಕಾರ್ಯಕ್ರಮ ಆಗಿದ್ದು, ಮತೀಯ ಭಾವನೆ‌ ಕೆರಳಿಸುವಂತ ಚರ್ಚೆಗಳು ಅಲ್ಲಿ ನಡೆಯುತ್ತವೆ. ಬೇರೆ ಬೇರೆ ರಾಜ್ಯದ ಮೌಲ್ವಿಗಳು ಬರುತ್ತಾರೆ, ಮುಸ್ಲಿಂರನ್ನು ಪ್ರಚೋಧಿಸುತ್ತಾರೆ. ಇಂತಹ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದೆಂದು ಆಗ್ರಹ ಮಾಡುತ್ತಿದ್ದಾರೆ. ಇದಕ್ಕೆ ಅನುಮತಿ‌ ಕೊಟ್ಟಿದ್ದನ್ನು ಹಿಂಪಡೆಯಬೇಕೆಂದು ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಇಂದು ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆ ‌ಮಾಡಿದರು.

ಹಿಂದೂ ಕಾರ್ಯಕರ್ತರಿಂದ ಪ್ರತಿಭಟನಾ ಮೆರವಣಿಗೆ

ನಗರದ ಕಿಲ್ಲಾ ಓಣಿಯ ಅಂಬಾ ಭವಾನಿ‌ ದೇವಸ್ಥಾನದಿಂದ ಹಿಂದು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಆರಂಭಿಸಿದರು. ನಂತರ ಎಮ್​ಜಿ ರಸ್ತೆ, ವಲ್ಲಭಭಾಯಿ ವೃತ್ತ ಮಾರ್ಗವಾಗಿ ಬಸವೇಶ್ವರ ವೃತ್ತಕ್ಕೆ ಬಂದು ಸೇರಿದರು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ‌ಸರಕಾರದ ವಿರುದ್ಧ ಘೋಷಣೆ ‌ಕೂಗಿದರು. ಮತೀಯ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಒಂದು ಕಡೆ ನಡೆಯುತ್ತಿದ್ದರೆ, ಇನ್ನೊಂದು ಕಡೆ ‘ತಬ್ಲಿಘಿ ಬಡೆ ಇಜ್ತೆಮಾ’ ಕಾರ್ಯಕ್ರಮ ಸಿದ್ದತಾ ಕಾರ್ಯ ಮಾತ್ರ ಬರದಿಂದ ಸಾಗುತ್ತಿದೆ.

ಇದನ್ನೂ ಓದಿ:ಪ್ರತ್ಯೇಕ ಲವ್ ಜಿಹಾದ್ ವಿರೋಧಿ ಪೋಲೀಸ್ ಪಡೆ ರಚನೆಗೆ ಹಿಂದೂ ಸಂಘಟನೆಗಳ ಒತ್ತಾಯ

ಹತ್ತು ಎಕರೆಗೂ ಅಧಿಕ ಜಾಗದಲ್ಲಿ ಟೆಂಟ್ ನಿರ್ಮಾಣ

ನವನಗರ ಸೆಕ್ಟರ್ ನಂ 112 ರಲ್ಲಿ ಹತ್ತು ಎಕರೆಗೂ ಅಧಿಕ ಜಾಗದಲ್ಲಿ ಟೆಂಟ್ ಹಾಕಲಾಗುತ್ತಿದೆ. ಈಗಾಗಲೇ ಹಿಂದುಪರ ಸಂಘಟನೆ ಕಾರ್ಯಕರ್ತರು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುಮತಿ ಹಿಂಪಡೆಯಬೇಕೆಂದು ಮನವಿ ಕೊಟ್ಟಿದ್ದಾರೆ. ಆದರೆ, ಬಡೆ ಇಜ್ತೆಮಾ ಟೆಂಟ್ ಕಾರ್ಯ ಮಾತ್ರ ಮುಂದುವರೆಯುತ್ತಲೇ ಇದೆ. ಇನ್ನು ಈ ಬಗ್ಗೆ ಬಾಗಲಕೋಟೆ ಶಾಸಕ ಹಾಗೂ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹೆಚ್ ವೈ ಮೇಟಿ ಅವರನ್ನು ಕೇಳಿದರೆ, ‘ಅವರವರ ಧರ್ಮದ ಕಾರ್ಯಕ್ರಮ ಮಾಡ್ತಾರೆ, ಆ ಬಗ್ಗೆ ನಾನು ಮಾತಾಡೋದಿಲ್ಲ ಎಂದು ಸಮರ್ಪಕ ಉತ್ತರ ನೀಡದೆ ಎಸ್ಕೇಪ್ ಫಲಾಯನಗೈದಿದ್ದಾರೆ. ಒಟ್ಟಿನಲ್ಲಿ ಹಿಂದು ಪರ ಸಂಘಟನೆ ವಿರೋಧದ ಮಧ್ಯೆ ಬಡೆ ಇಜ್ತಿಮಾ ಕಾರ್ಯಕ್ರಮ ಸಿದ್ದತೆ ಬರದಿಂದ ಸಾಗುತ್ತಿದೆ. ಬಡೆ ಇಜ್ತಿಮಾ ಕಾರ್ಯಕ್ರಮ ಯಾವುದೇ ಕಲಹಕ್ಕೆ ಎಡೆ ಮಾಡಿ ಕೊಡದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್