ಬಕ್ರೀದ್ ಹಬ್ಬದ ವೇಳೆ ಗೋಹತ್ಯೆ ತಡೆಗೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ: ಕಸಾಯಿಖಾನೆಗಳ ಬಂದ್​​ಗೆ ಒತ್ತಾಯ

ಬಾಗಲಕೋಟೆಯಲ್ಲಿ ಬಕ್ರೀದ್ ಹಬ್ಬದ ವೇಳೆ ಗೋಹತ್ಯೆ ನಿಷೇಧಕ್ಕೆ ಹಿಂದೂಪರ ಸಂಘಟನೆಗಳು ತೀವ್ರ ಆಗ್ರಹಿಸಿವೆ. ಶ್ರೀರಾಮ ಸೇನೆ ಹಾಗೂ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ಮಾಡಿ ಬಳಿಕ ಡಿಸಿಗೆ ಮನವಿ ಸಲ್ಲಿಸಿದ್ದಾರೆ. ಅಕ್ರಮ ಕಸಾಯಿಖಾನೆಗಳು ಮತ್ತು ಗೋಸಾಗಾಟ ತಡೆಯಲು ಪೊಲೀಸ್ ಇಲಾಖೆ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಬಕ್ರೀದ್ ಹಬ್ಬದ ವೇಳೆ ಗೋಹತ್ಯೆ ತಡೆಗೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ: ಕಸಾಯಿಖಾನೆಗಳ ಬಂದ್​​ಗೆ ಒತ್ತಾಯ
ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
Image Credit source: tv9 kannada
Edited By:

Updated on: May 27, 2026 | 9:09 PM

ಬಾಗಲಕೋಟೆ, ಮೇ 27: ನಾಳೆ (ಮೇ 28) ನಾಡಿನಾದ್ಯಂತ ಬಕ್ರೀದ್ (Bakrid) ಹಬ್ಬದ ಸಂಭ್ರಮ. ಮುಸ್ಲಿಂ ಸಮಾಜದ ಬಾಂಧವರು ಸಂಭ್ರಮದಿಂದ ಬಕ್ರೀದ್ ಆಚರಣೆಗೆ ಸಿದ್ದರಾಗಿದ್ದಾರೆ. ಆದರೆ ಈ ವೇಳೆ ಯಾವುದೇ ಕಾರಣಕ್ಕೂ ಗೋತ್ಯೆಗೆ ಅವಕಾಶ ನೀಡಬಾರದು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಪ್ರತಿಭಟನೆ ಮೂಲಕ ಪೊಲೀಸ್ ಮೇಲಾಧಿಕಾರಿಗಳಿಗೆ ಮನವಿ ನೀಡಿದ್ದು, ಆ ಮೂಲಕ ಗೋಹತ್ಯೆ ತಡೆಗೆ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಕಸಾಯಿಖಾನೆಗಳ ಪಟ್ಟಿ ಮಾಡಿ ಬಂದ್​​ಗೆ ಒತ್ತಾಯಿಸಿದ್ದಾರೆ.

ಮುಖ್ಯಾಂಶಗಳು

  • ಬಕ್ರೀದ ಹಬ್ಬ ಬೆನ್ನಲ್ಲೇ ಕಸಾಯಿಖಾನೆಗಳ ವಿರುದ್ಧ ಧ್ವನಿ ಎತ್ತಿದ ಹಿಂದೂ ಪರಸಂಘಟನೆ ಕಾರ್ಯಕರ್ತರು
  • ಬಾಗಲಕೋಟೆ ಜಿಲ್ಲೆಯಲ್ಲಿನಲ್ಲಿ ಕಸಾಯಿಖಾನೆಗಳ ಬಂದ್​​ಗೆ ಒತ್ತಾಯ
  • ಶ್ರೀರಾಮ ಸೇನೆ ಹಾಗೂ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಂದ ಆಗ್ರಹ

ನಾಳೆ ಎಲ್ಲೆಡೆ ಬಕ್ರೀದ್ ಹಬ್ಬದ ಸಂಭ್ರಮ. ಮುಸ್ಲಿಂ ಸಮುದಾಯದವರು ಅದ್ಧೂರಿಯಾಗಿ ಹಬ್ಬ ಆಚರಣೆಗೆ ಮುಂದಾಗಿದ್ದಾರೆ. ಬಾಗಲಕೋಟೆಯಲ್ಲಿ ಹಿಂದೂಪರ ಸಂಘಟನೆಗಳು ಬಕ್ರೀದ್ ಹಬ್ಬದ ವೇಳೆ ಯಾವುದೇ ಕಾರಣಕ್ಕೂ ಗೋ ಹತ್ಯೆಗೆ ಅವಕಾಶ ನೀಡಬಾರದು ಎಂದು ಪ್ರತಿಭಟಿಸಿದ್ದಾರೆ. ಶ್ರೀರಾಮ ಸೇನೆಯ ಸಂಘಟನೆಯ ಕಾರ್ಯಕರ್ತರು ಡಿಸಿ ಕಚೇರಿ ಎದುರು ಪ್ರತಿಭಟನೆ ಮಾಡಿ ಡಿಸಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಹಿಂದೂ ಜಾಗರಣವೇದಿಕೆ ಕಾರ್ಯಕರ್ತರು ಗೋ ಅಕ್ರಮ ಸಾಗಾಣಿಕೆ ವಿಡಿಯೋ ಕೂಡ ಬಿಡುಗಡೆ ಮಾಡಿದ್ದಾರೆ. 2023ರ ಗೋಹತ್ಯೆ ನಿಷೇಧ ಕಾಯ್ದೆ ಬಾಗಲಕೋಟೆಯಲ್ಲಿ ಪಾಲನೆಯಾಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಪೊಲೀಸರು ವಿರುದ್ಧ ಆಕ್ರೋಶ

ಇನ್ನು ಗಿರೀಶ್ ಫೌಂಡೇಶನ್ ಎಂಬ ಎನ್‌ಜಿಒ ಮೂಲಕ ಎಸ್​​ಪಿ ಅವರಿಗೆ ಗೋ ಹತ್ಯೆ ತಡೆಯುವಂತೆ ಮನವಿ ಸಲ್ಲಿಸಲಾಗಿದೆ. ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಬಾಗಲಕೋಟೆ ಜಿಲ್ಲಾದ್ಯಂತ ಕಸಾಯಿಖಾನೆಗಳಿಗೆ ಸಾಗಿಸುವ ಗೋವುಗಳ ವಿಡಿಯೋಗಳನ್ನು ಹರಿಬಿಟ್ಟಿದ್ದಾರೆ. ಬಾಗಲಕೋಟೆ ಜಿಲ್ಲಾದ್ಯಂತ 60ಕ್ಕೂ ಹೆಚ್ಚು ಕಸಾಯಿಖಾನೆಗಳಿವೆ. ಅದರ ಜೊತೆಗೆ ಪರ ಜಿಲ್ಲೆ, ಪರ ರಾಜ್ಯಗಳಿಗೆ ಕೂಡ ಗೋವುಗಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ‌ ಆಗ್ರಹಿಸಿ ಮುಸ್ಲಿಂ ಸಂಘಟನೆಯಿಂದ ಪ್ರತಿಭಟನೆ

ಈ ಬಗ್ಗೆ ವಿಡಿಯೋ ಸಾಕ್ಷಿ ಸಮೇತ ಕೊಟ್ಟರು ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ, ಕಾಟಾಚಾರಕ್ಕೆ ಭೇಟಿ ನೀಡ್ತಾರೆ ಎಂದು ಕೂಡ ಆಕ್ರೋಶ ಹೊರಹಾಕಿದ್ದಾರೆ. ಆಯಾ ಠಾಣೆ ವ್ಯಾಪ್ತಿಯ ಪೊಲೀಸರಿಗೆ ಪೊಲೀಸ್ ಮೇಲಾಧಿಕಾರಿಗಳು ಸ್ಪಷ್ಟವಾಗಿ ನಿರ್ದೇಶನ ಕೊಡಬೇಕು. ದೂರು ನೀಡಿದ ತಕ್ಷಣ ಗೋ ಹತ್ಯೆ ತಡೆಯುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಬಾಗಲಕೋಟೆ ಎಸ್​​ಪಿ ಸಿದ್ದಾರ್ಥ್ ಗೋಯೆಲ್ ಹೇಳಿದ್ದಿಷ್ಟು 

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಾಗಲಕೋಟೆ ಎಸ್​​ಪಿ ಸಿದ್ದಾರ್ಥ್ ಗೋಯೆಲ್​​, ಗೋ ಸಾಗಾಣಿಕೆ ತಡೆಯಲು 26 ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ದಾಖಲಾತಿ ಇಲ್ಲದೆ ಗೋಸಾಗಾಣಿಕೆ ಹಿನ್ನೆಲೆ ಎರಡು ಕೇಸ್ ದಾಖಲಿಸಲಾಗಿದೆ. ಗೋಸಾಗಾಣಿಕೆ ಬಗ್ಗೆ ಕಂಟ್ರೋಲ್ ರೂಮ್​ಗೂ ಕರೆ ಮಾಡಬಹುದು. ಕೂಡಲೇ ಕ್ರಮಕೈಗೊಳ್ಳುತ್ತೇವೆ‌‌. ಇನ್ನು ಬಕ್ರೀದ್​ ಹಬ್ಬದ ಭದ್ರತೆಗೆ 600 ಜನ ಪೊಲೀಸ್, 300 ಜನ ಹೋಮ್ ಗಾರ್ಡ್, 3 ಕೆಎಸ್​ಆರ್​ಪಿ, 10 ಡಿಎಆರ್ ತುಕಡಿ ನಿಯೋಜಿಸಲಾಗಿದೆ. 147 ಕಡೆ ಪ್ರಾರ್ಥನೆ ನಡೆಯಲಿದ್ದು, 18 ಕಡೆ‌ ಮೆರವಣಿಗೆ ಇದೆ. 6 ಕಡೆ ಸೂಕ್ಷ್ಮ ಸ್ಥಳ ಎಂದು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಗೋ ಹತ್ಯೆ ಮಾಡುವವರನ್ನು ಗುಂಡಿಕ್ಕಬೇಕು: ಸಚಿವ ಮಂಕಾಳು ವೈದ್ಯ ಹೇಳಿಕೆಗೆ ಪರಮೇಶ್ವರ ಹೇಳಿದ್ದಿಷ್ಟು

ಒಟ್ಟಿನಲ್ಲಿ ಒಂದು ಕಡೆ ಬಕ್ರೀದ್​ ಹಬ್ಬಕ್ಕೆ ಮುಸ್ಲಿಮರು ಸಜ್ಜಾಗಿದ್ದರೆ, ಹಿಂದೂ ಕಾರ್ಯಕರ್ತರು ಬಕ್ರೀದ್ ವೇಳೆ ಗೋಹತ್ಯೆಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us