ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ, ಕತ್ತು ಕುಯ್ದ ಪುತ್ರ

ಬಾಗಲಕೋಟೆಯ ತುಳಸಿಗೇರಿಯಲ್ಲಿ ಮದ್ಯ ಸೇವನೆಗೆ ಹಣ ನೀಡದ ತಾಯಿಯನ್ನು ಪುತ್ರನೇ ಕೊಲೆ ಮಾಡಿದ ದಾರುಣ ಘಟನೆ ನಡೆದಿದೆ. 28 ವರ್ಷದ ವೆಂಕಟೇಶ್ ತನ್ನ 58 ವರ್ಷದ ತಾಯಿ ಶಾವಕ್ಕ ಗಿರಿಸಾಗರ್ ಕೈಕಾಲು ಕಟ್ಟಿ, ಕತ್ತು ಕುಯ್ದು ಕೊಲೆ ಮಾಡಿದ್ದಲ್ಲದೆ, ಆಮೇಲೆ ಬಾರೊಂದಕ್ಕೆ ತೆರಳಿ ಆರಾಮವಾಗಿ ಕುಡಿಯುತ್ತಾ ಕುಳಿತಿದ್ದ! ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ, ಕತ್ತು ಕುಯ್ದ ಪುತ್ರ
ವೆಂಕಟೇಶ್ ಗಿರಿಸಾಗರ್
Edited By:

Updated on: Oct 17, 2025 | 9:25 AM

ಬಾಗಲಕೋಟೆ, ಅಕ್ಟೋಬರ್ 17: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ ಹಾಕಿ, ಕತ್ತು ಕುಯ್ದು ಕೊಲೆ ಮಾಡಿದ ದಾರುಣ ಘಟನೆ ಬಾಗಲಕೋಟೆ (Bagalkot) ತಾಲೂಕಿನ ತುಳಸಿಗೇರಿ ಗ್ರಾಮದಲ್ಲಿ ನಡೆದಿದೆ. 28 ವರ್ಷದ ವೆಂಕಟೇಶ್ ಗಿರಿಸಾಗರ್ ಎಂಬಾತ ತನ್ನ 58 ವರ್ಷದ ತಾಯಿ ಶಾವಕ್ಕ ಗಿರಿಸಾಗರ್ ಕೈ ಕಾಲು ಕಟ್ಟಿ ಬಾಯಲ್ಲಿ ಬಟ್ಟೆ ತುರುಕಿ ಕುತ್ತಿಗೆ ಕೊಯ್ದು ಪರಾರಿಯಾಗಿದ್ದಾನೆ. ಶಾವಕ್ಕ ಗಿರಿಸಾಗರ್ತಾಯಿ ಮನೆಯಲ್ಲಿ ನರಳಾಡಿ ಪ್ರಾಣ ಬಿಟ್ಟಿದ್ದಾರೆ.

ಶಾವಕ್ಕ ಗಿರಿಸಾಗರ ಪತಿ ಹಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಇನ್ನು ಮಗಳನ್ನು ಕೂಡ ಮದುವೆ ಮಾಡಿ ಬೇರೆ ಊರಿಗೆ ಕೊಡಲಾಗಿತ್ತು. ಮನೆಯಲ್ಲಿ ಮಗ ವೆಂಕಟೇಶ್ ಹಾಗೂ ಶಾವಕ್ಕ ವಾಸ ಮಾಡುತ್ತಿದ್ದರು. ಕಳೆದ 15 ವರ್ಷಗಳಿಂದ ತುಳಸಿಗೇರಿ ಗ್ರಾಮದಲ್ಲಿ ಒಂದು ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಆದರೆ ಮಗ ವೆಂಕಟೇಶ್ ಯಾವುದೇ ಕೆಲಸ ಕಾರ್ಯ ಮಾಡದೆ ಕುಡಿತದ ದಾಸನಾಗಿದ್ದ. ತಾಯಿ ಶಾವಕ್ಕ ಕೂಲಿ ನಾಲೆ ಮಾಡಿ ಮಗನನ್ನು ಸಾಕಿ ಸಲುತ್ತಿದ್ದಳು .ಆದರೆ ವೆಂಕಟೇಶ್ ನಿತ್ಯ ಕುಡಿದು ಬಂದು ತಾಯಿ ಜೊತೆ ಮಗ ಜಗಳವಾಡುತ್ತಿದ್ದ. ಜೊತೆಗೆ ಮದ್ಯಪಾನ ಮಾಡಲು ಹಣ ಕೊಡು ಎಂದು ಪೀಡಿಸುತ್ತಿದ್ದ.

ಗುರುವಾರ ಕೂಡ ಎಂದಿನಂತೆಯೇ ಕುಡಿಯಲು ಹಣ ಕೊಡು ಎಂದು ಪೀಡಿಸಿದ್ದಾನೆ. ತಾಯಿ ನಿರಾಕರಿಸಿದಾಗ, ಬಟ್ಟೆಯಿಂದ ಆಕೆಯ ಕೈ ಕಾಲು ಕಟ್ಟಿ, ಬಾಯಲ್ಲಿ ಬಟ್ಟೆ ತುರುಕಿ ಕತ್ತು ಕೊಯ್ದು ಕೊಲೆ ಮಾಡಿ ಓಡಿಹೋಗಿದ್ದಾನೆ.

ಸಂಜೆಯಾದರೂ ಕೂಡ ಶಾವಕ್ಕ ಕಾಣಿಸದೆ ಇದ್ದಾಗ ಅಕ್ಕಪಕ್ಕದವರು ಮನೆ ಬಾಗಿಲು ಸಂಧಿಯಲ್ಲಿ ಇಣುಕಿ ನೋಡಿದ್ದಾರೆ‌. ಆಗ ರಕ್ತದ ಮಡುವಿನಲ್ಲಿ ಸಾವಕ್ಕ ಶವವಾಗಿ ಬಿದ್ದಿದ್ದಳು. ತಕ್ಷಣ ಸ್ಥಳೀಯರು ಕಲಾದಗಿ ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ. ಸ್ಥಳಕ್ಕೆ ಕಲಾದಗಿ ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಕೊಲೆ ಮಾಡಿರುವುದು ಗೊತ್ತಾಗಿದೆ. ತಾಯಿಯನ್ನು ಕೊಂದಂತಹ ಪಾಪಿ ಮಗ ಗದ್ದನಕೇರಿ ಕ್ರಾಸ್​ನ ಒಂದು ಬಾರ್​ನಲ್ಲಿ ಕುಡಿಯುತ್ತಾ ಕೂತಿದ್ದ‌. ಸದ್ಯ ಕಲಾದಗಿ ಪೊಲೀಸರು ದುಷ್ಟ ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕತ್ತು ಕೊಯ್ದು ವಿದ್ಯಾರ್ಥಿನಿಯ ಬರ್ಬರ ಹತ್ಯೆ, ಪರೀಕ್ಷೆ ಬರೆದು ಮನೆಗೆ ಹೋಗುತ್ತಿದ್ದವಳು ದುರಂತ ಅಂತ್ಯ

9 ತಿಂಗಳು ಹೊತ್ತು, ಹೆತ್ತು, ಸಾಕಿ ಸಲುಹಿದ ಜನನಿಯ ಜೀವವನ್ನೇ ಮದ್ಯಪಾನಕ್ಕಾಗಿ ಈ ಪಾಪಿ ಕೊನೆಗೊಳಿಸಿದ್ದಾನೆ. ಕ್ರೂರಿ ಮಗನ ವಿಕೃತಿಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:53 am, Fri, 17 October 25

ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us