AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯನಿರತ ಕಂಡಕ್ಟರ್ ಮೇಲೆ ಬಿಜೆಪಿ ಶಾಸಕನ ಬೆಂಬಲಿಗನ ದರ್ಪ

ಬಾಗಲಕೋಟೆ: ಬಿಜೆಪಿ ಶಾಸಕನ ಬೆಂಬಲಿಗ ಕರ್ತವ್ಯನಿರತ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಕಂಡಕ್ಟರ್ ಮೈತುಂಬಾ ರಕ್ತ ಸೋರ್ತಿದೆ. ತಲೆಗೊಂದು ದೊಡ್ಡ ಬ್ಯಾಂಡೇಜ್ ಬಿದ್ದಿದೆ. ಮೈಮೇಲೆ ಹಾಕಿರೋ ಖಾಕಿ ಶರ್ಟ್ ಕೂಡ ಕಿತ್ತೋಗಿದೆ. ನೋವಿನಲ್ಲೇ ನರಳಾಡ್ತಿದ್ದಾರೆ. ಒಂದ್ ಹೆಜ್ಜೆ ಇಡೋಕು ಆಗದೆ ಕಣ್ಣೀರಿಡ್ತಿದ್ದಾರೆ. ಕಂಡಕ್ಟರ್ ಮೇಲೆ ಬಿಜೆಪಿ ಶಾಸಕರ ಬೆಂಬಲಿಗನ ರೌಡಿಸಂ! ಅಂದ್ಹಾಗೆ ಹೀಗೆ ನೋವಿನಲ್ಲಿ ನರಳಾಡ್ತಿರೋ ಈತನ ಹೆಸರು ಮುರುಗೇಶ್ ಹುಲ್ಲಳ್ಳಿ. ವೃತ್ತಿಯಲ್ಲಿ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಆಗಿರೋ ಮುರುಗೇಶ್ ಟಿಕೆಟ್ […]

ಕರ್ತವ್ಯನಿರತ ಕಂಡಕ್ಟರ್ ಮೇಲೆ ಬಿಜೆಪಿ ಶಾಸಕನ ಬೆಂಬಲಿಗನ ದರ್ಪ
ಸಾಧು ಶ್ರೀನಾಥ್​
|

Updated on: Feb 04, 2020 | 12:36 PM

Share

ಬಾಗಲಕೋಟೆ: ಬಿಜೆಪಿ ಶಾಸಕನ ಬೆಂಬಲಿಗ ಕರ್ತವ್ಯನಿರತ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಕಂಡಕ್ಟರ್ ಮೈತುಂಬಾ ರಕ್ತ ಸೋರ್ತಿದೆ. ತಲೆಗೊಂದು ದೊಡ್ಡ ಬ್ಯಾಂಡೇಜ್ ಬಿದ್ದಿದೆ. ಮೈಮೇಲೆ ಹಾಕಿರೋ ಖಾಕಿ ಶರ್ಟ್ ಕೂಡ ಕಿತ್ತೋಗಿದೆ. ನೋವಿನಲ್ಲೇ ನರಳಾಡ್ತಿದ್ದಾರೆ. ಒಂದ್ ಹೆಜ್ಜೆ ಇಡೋಕು ಆಗದೆ ಕಣ್ಣೀರಿಡ್ತಿದ್ದಾರೆ.

ಕಂಡಕ್ಟರ್ ಮೇಲೆ ಬಿಜೆಪಿ ಶಾಸಕರ ಬೆಂಬಲಿಗನ ರೌಡಿಸಂ! ಅಂದ್ಹಾಗೆ ಹೀಗೆ ನೋವಿನಲ್ಲಿ ನರಳಾಡ್ತಿರೋ ಈತನ ಹೆಸರು ಮುರುಗೇಶ್ ಹುಲ್ಲಳ್ಳಿ. ವೃತ್ತಿಯಲ್ಲಿ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಆಗಿರೋ ಮುರುಗೇಶ್ ಟಿಕೆಟ್ ಕೊಡೋದ್ರಲ್ಲಿ ಬ್ಯುಸಿಯಾಗಿದ್ರು. ಹುನಗುಂದ ತಾಲ್ಲೂಕಿನ ಮರೋಳ ಗ್ರಾಮದ ಬಳಿ ಕೆಎಸ್​ಆರ್​ಟಿಸಿ ಬಸ್ ಹೋಗ್ತಿತ್ತಂತೆ.

ಈ ವೇಳೆ ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್​ ಬೆಂಬಲಿಗ ಅಶೋಕ್ ಬಂಡರಗಲ್ ಬೆಂಬಲಿಗರು ಎಂಟ್ರಿ ಕೊಟ್ಟಿದ್ದಾರೆ. ಏಕಾಏಕಿ ಬಸ್​ನ್ನ ನಿಲ್ಲಿಸಿ ನಿರ್ವಾಹಕ ಮುರುಗೇಶ್ ಕಣ್ಣಿಗೆ ಖಾರದಪುಡಿ ಎರಚಿದ್ದಾರೆ. ಬಳಿಕ ಮುರುಗೇಶ್​​ ಅವರನ್ನ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಅಂತ ಕುಟುಂಬಸ್ಥರು ಆರೋಪಿಸ್ತಿದ್ದಾರೆ.

ಇನ್ನು, ಶಾಸಕ ದೊಡ್ಡನಗೌಡ ಪಾಟೀಲ್ ಬೆಂಬಲಿಗ ಅಶೋಕ್ ಬಂಡರಗಲ್ ರೌಡಿಶೀಟರ್ ಅಂತೆ. ಜೊತೆಗೆ ಮುರುಗೇಶ್ ಮೇಲೆ ದಾಳಿಯಾಗಿರೋದಕ್ಕೆ ಸಾಕ್ಷಿ ಎಂಬಂತೆ ಬಸ್​ನಲ್ಲಿ ಖಾರದಪುಡಿ ಎಲ್ಲೆಲ್ಲೂ ಚೆಲ್ಲಾಡಿದೆ. ಅಲ್ಲದೇ, ಹಲ್ಲೆಗೊಳಗಾಗಿರೋ ನಿರ್ವಾಹಕ ಮುರುಗೇಶ್ ಹುಲ್ಲಳ್ಳಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

ಜೊತೆಗೆ ಈ ಹಲ್ಲೆಗೆ ಹಳೆಯ ರಾಜಕೀಯ ದ್ವೇಷವೇ ಕಾರಣ ಎನ್ನಲಾಗಿದೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಬೇಕು ಅಂತ ಹಲ್ಲೆಗೊಳಗಾಗಿರೋ ಮುರುಗೇಶ್ ಪತ್ನಿ ಕಣ್ಣೀರಿಟ್ಟಿದ್ದಾರೆ. ಒಟ್ನಲ್ಲಿ ಶಾಸಕರ ಬೆಂಬಲಿಗ ಅಂದ್ಕೊಂಡು ಕರ್ತವ್ಯನಿರತ ನಿರ್ವಾಹಕನ ಮೇಲೆ ಹಲ್ಲೆ ಮಾಡಿರೋದು ಖಂಡನೀಯ.

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ