ಕೊಡಲಿಯಿಂದ ಹೆಂಡ್ತಿಯನ್ನು ಕೊಚ್ಚಿ ಕೊಂದ ಪತಿ: ಆರೋಪಿಗೆ ಜಾಮೀನಾಗಬಾರದೆಂದು ಗ್ರಾಮದಲ್ಲಿ ಡಂಗುರ

ಜಿಲ್ಲೆಯ ಬೀಳಗಿ ತಾಲ್ಲೂಕಿನ ಬಿಸ್ನಾಳ ಗ್ರಾಮದಲ್ಲಿ ವರದಕ್ಷಿಣೆ ಕಿರುಕುಳ ನೀಡಿ ಪರಸಪ್ಪ ಬೀಳಗಿ ಎಂಬಾತ ಮೃತ ಪತ್ನಿ ರೇಖಾ ಬೀಳಗಿ(24)ಅವರನ್ನ ಕೊಡಲಿಯಿದ ಕೊಚ್ಚಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರೆಲ್ಲರೂ ಸೇರಿ ಅಪರೂಪದ ನಿರ್ಣಯವನ್ನ ಕೈಗೊಂಡಿದ್ದಾರೆ. ಏನದು ಅಂತೀರಾ? ಇಲ್ಲಿದೆ ನೋಡಿ.

ಕೊಡಲಿಯಿಂದ ಹೆಂಡ್ತಿಯನ್ನು ಕೊಚ್ಚಿ ಕೊಂದ ಪತಿ: ಆರೋಪಿಗೆ ಜಾಮೀನಾಗಬಾರದೆಂದು ಗ್ರಾಮದಲ್ಲಿ ಡಂಗುರ
ಆರೋಪಿ ವಿರುದ್ದ ಗ್ರಾಮದಲ್ಲಿ ಡಂಗುರ
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 05, 2023 | 2:07 PM

ಬಾಗಲಕೋಟೆ: ಜಿಲ್ಲೆಯ ಬೀಳಗಿ(Bilagi) ತಾಲ್ಲೂಕಿನ ಬಿಸ್ನಾಳ ಗ್ರಾಮದಲ್ಲಿ ವರದಕ್ಷಿಣೆ ಕಿರುಕುಳ ನೀಡಿ ಪರಸಪ್ಪ ಬೀಳಗಿ ಎಂಬಾತ ಪತ್ನಿ ರೇಖಾ ಬೀಳಗಿ(24)ಅವರನ್ನ ಕೊಡಲಿಯಿದ ಕೊಚ್ಚಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರೆಲ್ಲರೂ ಸೇರಿ ಅಪರೂಪದ ನಿರ್ಣಯವನ್ನ ಕೈಗೊಂಡಿದ್ದಾರೆ. ತಪ್ಪು ಮಾಡಿದವರು ಯಾರೇ ಆದರೂ, ಆತನಿಗೆ ತಕ್ಕ ಶಿಕ್ಷೆಯಾಗಬೇಕೆಂಬ ನಿಲುವಿನೊಂದಿಗೆ ಒಂದೊಳ್ಳೆ ನಿರ್ಧಾರ ಮಾಡಿದ್ದಾರೆ. ಹೌದು ಕೊಲೆ ಮಾಡಿದ ಪಾಪಿ ಪತಿ ಪರಸಪ್ಪ ಹಾಗೂ ಆತನ ಕುಟುಂಬಸ್ಥರಿಗೆ ಯಾರೂ ಜಾಮೀನಾಗಬಾರದೆಂದು, ಊರಿನ ತುಂಬ ಹಿರಿಯರು ಸೇರಿ ಡಂಗುರ ಹೊಡೆಸಿದ್ದಾರೆ. ಇನ್ನು ಈ ಕೊಲೆ ಕೇಸ್​ ಸಂಬಂಧ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಹಲಗೆ ಬಾರಿಸಿ ಡಂಗುರ ಸಾರಿದ ವ್ಯಕ್ತಿ

ಎರಡು ವರ್ಷದ ಹಿಂದೆ ಮದುವೆಯಾಗಿದ್ದ. ಜೊತೆಗೆ ಒಂದು ವರ್ಷದ ಮಗು ಕೂಡ ಇತ್ತು. ಈ ಮಧ್ಯೆ ವರದಕ್ಷಿಣೆ ಕೊಡಲಿಲ್ಲವೆಂದು ಪತ್ನಿಯನ್ನೇ ಕೊಲೆ ಮಾಡಿದ ಆರೋಪಿಗೆ ಯಾರು ಸಹಾಯ ಮಾಡಬಾರದು ಎಂಬ ನಿರ್ಣಯವನ್ನು ಕೈಗೊಂಡ ಗ್ರಾಮಸ್ಥರು, ಯಾರು ಅವರ ಸಹಾಯಕ್ಕೆ ಹೋಗಬಾರದು ಎಂದು ನಿರ್ಧರಿಸಿದ್ದಾರೆ. ಒಂದು ವೇಳೆ ಜಾಮೀನು ನೀಡುವ ಮೂಲಕ ಅವರಿಗೆ ಸಹಾಯ ಮಾಡಿದ್ದು ಕಂಡುಬಂದರೆ. ಅವರನ್ನೇ ಠಾಣೆಗೆ ಒಪ್ಪಿಸುತ್ತೇವೆ ಎಂದು ಡಂಗುರ ಸಾರಿದ್ದಾರೆ.

ಇದನ್ನೂ ಓದಿ:ವರದಕ್ಷಿಣೆ ಕಿರುಕುಳ, ಕೊಲೆಗೆ ಯತ್ನ ಆರೋಪ: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತನ ಮೇಲೆ FIR

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಆನೇಕಲ್ ತಾಲ್ಲೂಕಿನ ಚಂದಾಪುರದ ಹೆನ್ನಾಗರ ಬಳಿಯ A2B ಹೋಟೆಲ್ ಬಳಿ ಕಾರಿನ ಗ್ಲಾಸ್ ಹೊಡೆದು ಹಣ,
ಚಿನ್ನಾಭರಣ, ಲ್ಯಾಪ್ಟಾಪ್​ನ್ನು ಕಳ್ಳರು ಎಗರಿಸಿದ ಘಟನೆ ನಿನ್ನೆ(ಜು.4) ಸಂಜೆ ನಡೆದಿದೆ. ಉದ್ಯಮಿ ನವೀನ್ ಎಂಬವರಿಗೆ ಸೇರಿದ ಕಾರು ಇದಾಗಿದ್ದು, 2 ರೂ ಲಕ್ಷ ಮೌಲ್ಯದ ವಸ್ತುಗಳು ಕಳ್ಳತನವಾಗಿದೆ. ರಾತ್ರಿ 7 ಗಂಟೆಯ ಸಮಯದಲ್ಲಿ ಊಟ ಮಾಡಲು ಹೋಟೆಲ್​ಗೆ ತೆರಳಿದ್ದಾಗ, ಕಳ್ಳರು  ಕ್ಷಣಮಾತ್ರದಲ್ಲಿ ಕೈಚಳಕ ತೋರಿಸಿ ಎಸ್ಕೇಪ್ ಆಗಿದ್ದಾರೆ. ಊಟ ಮುಗಿಸಿ ಕಾರ್ ಪಾರ್ಕಿಂಗ್​ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:57 pm, Wed, 5 July 23

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us