AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಕೂಡ ಮುಖ್ಯಮಂತ್ರಿ ಆಗಬಹುದು, ಇದೇ ಅವಧಿಯಲ್ಲೇ ಸಿಎಂ ಆಗ್ತೀನಿ: ಸಚಿವ ಉಮೇಶ್ ಕತ್ತಿ

ಜೀವಂತ ಇದ್ದರೇ ಇದೇ ಅವಧಿಯಲ್ಲಿ, ಸತ್ತರೇ ಮುಂದಿನ ಅವಧಿಯಲ್ಲಿ ಸಿಎಂ ಆಗುವೆ. ಸತ್ತರೆ ನನ್ನ ಕಡೆಯಿಂದ ಏನೂ ಮಾಡೋಕೆ ಆಗಲ್ಲವೆಂದು ಗಹಿಗಹಿಸಿ ನಕ್ಕಿ ಸ್ಫೋಟಕ ಹೇಳಿಕೆ ನಡುವೆ ಸಚಿವ ಉಮೇಶ್ ಕತ್ತಿ ಹಾಸ್ಯ ಮಾಡಿದ್ದಾರೆ. ನಗು ನಗುತ್ತಲೇ ಸಿಎಂ ಆಗೋ ಆಸೆ ತೇಲಿಬಿಟ್ಟಿದ್ದಾರೆ.

ನಾನು ಕೂಡ ಮುಖ್ಯಮಂತ್ರಿ ಆಗಬಹುದು, ಇದೇ ಅವಧಿಯಲ್ಲೇ ಸಿಎಂ ಆಗ್ತೀನಿ: ಸಚಿವ ಉಮೇಶ್ ಕತ್ತಿ
ಸಚಿವ ಉಮೇಶ್ ಕತ್ತಿ
TV9 Web
| Edited By: |

Updated on:Aug 15, 2021 | 12:05 PM

Share

ಬಾಗಲಕೋಟೆ: ಕೇಸರಿ ಮನೆಯಲ್ಲಿ ಖಾತೆ ಕ್ಯಾತೆ ನಡುವೆ ಕತ್ತಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬರುವ ದಿನಗಳಲ್ಲಿ ನಾನು ಕೂಡ ಮುಖ್ಯಮಂತ್ರಿ ಆಗಬಹುದು. ಇದೇ ಅವಧಿಯಲ್ಲೇ ಸಿಎಂ ಆಗ್ತೀನಿ ಎಂದು ಆಹಾರ ಸಚಿವ ಉಮೇಶ್ ಕತ್ತಿ(Umesh Katti) ಬಾಗಲಕೋಟೆಯಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

ಜೀವಂತ ಇದ್ದರೇ ಇದೇ ಅವಧಿಯಲ್ಲಿ, ಸತ್ತರೇ ಮುಂದಿನ ಅವಧಿಯಲ್ಲಿ ಸಿಎಂ ಆಗುವೆ. ಸತ್ತರೆ ನನ್ನ ಕಡೆಯಿಂದ ಏನೂ ಮಾಡೋಕೆ ಆಗಲ್ಲವೆಂದು ಗಹಿಗಹಿಸಿ ನಕ್ಕಿ ಸ್ಫೋಟಕ ಹೇಳಿಕೆ ನಡುವೆ ಹಾಸ್ಯ ಮಾಡಿದ್ದಾರೆ. ನಗು ನಗುತ್ತಲೇ ಸಿಎಂ ಆಗೋ ಆಸೆ ತೇಲಿಬಿಟ್ಟಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಹಿನ್ನೆಲೆಯಲ್ಲಿ ಬಾಗಲಕೋಟೆಯ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ  ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಧ್ವಜಾರೋಹಣ‌ ನೆರವೇರಿಸಿದರು.

ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಷಣೆ ಮಾಡಿದ್ರು. ಕಾರ್ಯಕ್ರಮದಲ್ಲಿ ಬಾಗಲಕೋಟೆ ಶಾಸಕ ಡಾ.ವೀರಣ್ಣ ಚರಂತಿಮಠ, ಜಿಲ್ಲಾಧಿಕಾರಿ ಕ್ಯಾ.ಡಾ.ಕೆ.ರಾಜೇಂದ್ರ, ಜಿ.ಪಂ.ಸಿಇಓ ಟಿ.ಭೂಬಾಲನದ ಸೇರಿದಂತೆ ಜಿಲ್ಲೆಯ ಅಧಿಕಾರಿಗಳು, ಮುಖಂಡರು ಭಾಗಿಯಾಗಿದ್ದರು.

ಇದೇ ವೇಳೆ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಉಮೇಶ್ ಕತ್ತಿ ಸಿ.ಟಿ ರವಿಯವರು ಇಂದಿರಾ ಬದಲು ಅನ್ನಪೂರ್ಣೇಶ್ವರಿ ಹೆಸರಿಡಿ ಎಂದಿದ್ದಾರೆ. ಇದು ಯಾವ ಪಕ್ಷದ್ದಲ್ಲ, ಈ ಬಗ್ಗೆ ಜನರಲ್ಲಿ ಚರ್ಚೆಯಾಗಲಿ. ರಾಜ್ಯದ ಜನ ಚರ್ಚೆ ಮಾಡಿ, ಒಂದು ತೀರ್ಮಾನಕ್ಕೆ ಬರಲಿ. ಜನ ಏನು ತೀರ್ಮಾನ ತೆಗೆದುಕೊಳ್ತಾರೆ ಅದನ್ನು ಮಾಡೋಣ ಎಂದು ಹೇಳಿದ್ದಾರೆ.

ಇದನ್ನೂ ಓದಿ: Martin: ಸ್ವಾತಂತ್ರ್ಯ ದಿನಾಚರಣೆಗೆ ಧ್ರುವ ಸರ್ಜಾ ಕೊಟ್ರು ಭರ್ಜರಿ ಗಿಫ್ಟ್; ಹೊಸ ಚಿತ್ರದ ಟೈಟಲ್, ಫಸ್ಟ್ ಲುಕ್ ರಿಲೀಸ್

Published On - 11:51 am, Sun, 15 August 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್