AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯಲ್ಲೇ ಮತ್ತೊಂದು ಹಗರಣ, ಪ್ರವಾಸೋದ್ಯಮ ಇಲಾಖೆಯ ಹಣ ಅಕ್ರಮ ವರ್ಗಾವಣೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣ ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈ ಹಗರಣದ ತನಿಖೆ ಪ್ರಗತಿಯಲ್ಲಿರುವಾಗಲೇ ಪ್ರವಾಸೋದ್ಯಮ ಇಲಾಖೆಯಲ್ಲಿ ಅಂಥದ್ದೇ ಹಗರಣ ನಡೆದಿರುವುದು ಬಯಲಾಗಿದೆ. ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ 2,47,73,999 ರೂ. ಹಣ ಅಕ್ರಮ ವರ್ಗಾವಣೆ ಆಗಿದೆ. ಹಗರಣದ ವಿವರ ತಿಳಿಯಲು ಮುಂದೆ ಓದಿ.

ಬಾಗಲಕೋಟೆ: ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯಲ್ಲೇ ಮತ್ತೊಂದು ಹಗರಣ, ಪ್ರವಾಸೋದ್ಯಮ ಇಲಾಖೆಯ ಹಣ ಅಕ್ರಮ ವರ್ಗಾವಣೆ
ಬಾಗಲಕೋಟೆ ಸಿಇಎನ್ ಪೊಲೀಸ್ ಠಾಣೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jul 13, 2024 | 10:23 AM

Share

ಬಾಗಲಕೋಟೆ, ಜುಲೈ.13: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮಾದರಿಯಲ್ಲಿ ಬಾಗಲಕೋಟೆಯಲ್ಲಿ (Bagalkote) ಮತ್ತೊಂದು ವಂಚನೆ ಬಯಲಾಗಿದೆ. ಪ್ರವಾಸೋದ್ಯಮ ಇಲಾಖೆಯ 2,47,73,999 ರೂ. ಹಣ ಅಕ್ರಮ ವರ್ಗಾವಣೆ ಆಗಿದೆ. ಪ್ರವಾಸೋದ್ಯಮ ಇಲಾಖೆಯ ಹಣ ಐಡಿಬಿಐ ಬ್ಯಾಂಕ್‌ ಖಾತೆ ಮೂಲಕ ವಿವಿಧ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬಾಗಲಕೋಟೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಬಾಗಲಕೋಟೆ ಐಡಿಬಿಐ ಬ್ಯಾಂಕ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ FIR ದಾಖಲಾಗಿದೆ.

ಜುಲೈ 11 ರಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಗೋಪಾಲ ಹಿತ್ತಲಮನಿ ಎಂಬುವವರು ಬಾಗಲಕೋಟೆ ಐಡಿಬಿಐ ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದಾರೆ. 28-10-2021 ರಿಂದ 22/2/2024ರ ವರೆಗೆ ಡಿಸಿ, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರ ಹೆಸರಲ್ಲಿ ಐಡಿಬಿಐ ಬ್ಯಾಂಕ್​ ಖಾತೆ ಮೂಲಕ ವಂಚನೆ ನಡೆದಿದೆ. ಮೊದಲಿಗೆ ಬ್ಯಾಂಕ್​ನಲ್ಲಿ ಖಾತೆ ತೆರೆದು ಮೂರು ಅಕೌಂಟ್ ನಂ ನಿಂದ ವಿವಿಧ ಅಕೌಂಟ್ ಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಾಗಿದೆ.

ಇದನ್ನೂ ಓದಿ: Crime News: ಅಪ್ರಾಪ್ತ ಬಾಲಕನಿಗೆ ಬಿಯರ್ ಬಾಟಲಿಯಲ್ಲಿ ಮೂತ್ರ ಕುಡಿಸಿದ ಯುವಕರು

ಇನ್ನು ಐಡಿಬಿಐ ಬ್ಯಾಂಕ್ ಖಾತೆ ನಂಬರ್ 1 071104000160063 ಮೂಲಕ 28.10.2021 ರಿಂದ 22/2024ರ ವರೆಗೆ ಒಟ್ಟು 1,35,96,500 ರೂ, ಖಾತೆ ನಂ 1071104000165228 ಮೂಲಕ 4-5-2022 ರಿಂದ 7-11-2022 ವರೆಗೆ 1,01,33,750 ರೂ, ಮೂರನೇ ಖಾತೆ 1071104000165501 ಖಾತೆ ಮೂಲಕ 11.10.2022 ರಂದು 10, 43,749 ರೂ. ಸೇರಿ ಒಟ್ಟು 2,47,73,999 ರೂ. ಹಣವನ್ನು 28.10.2021 ರಿಂದ 22-2-2024ರ ವರೆಗೆ ಹಂತ ಹಂತವಾಗಿ ಹಣ ವರ್ಗಾವಣೆ ಮಾಡಲಾಗಿದೆ. ಪ್ರವಾಸೋದ್ಯಮ ಇಲಾಖೆ ಅನುಮತಿಯಿಲ್ಲದೆ, ಇಲಾಖೆ ಅಧಿಕಾರಿಗಳಿಗೆ ಗೊತ್ತಿಲ್ಲದಂತೆ, ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಹಣವನ್ನು ಆರೋಪಿತರು ತಮಗೆ ಬೇಕಾದ ರೀತಿಯಲ್ಲಿ ವರ್ಗಾವಣೆ ಮಾಡಿದ್ದಾರೆ. ಇಲಾಖೆ ಹಣ ತೆಗೆದುಕೊಂಡು ಸರಕಾರಕ್ಕೆ ಮೋಸ ಮಾಡಿದ್ದಾರೆ ಎಂದು ಎಫ್​ಐಆರ್​ನಲ್ಲಿ ಉಲ್ಲೇಖಿಸಲಾಗಿದೆ. ಐಪಿಸಿ 1860(us 403,406,409,420) ಸೆಕ್ಷನ್ ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:09 am, Sat, 13 July 24

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?