AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಕಾರಿ ಐಬಿಯಲ್ಲೇ ಅಧಿಕಾರಿಗಳಿಂದ ಎಣ್ಣೆ ಪಾರ್ಟಿ ಪ್ರಕರಣ; ಶೋಕಾಸ್ ನೋಟಿಸ್ ಜಾರಿ

ನೀತಿ‌ಸಂಹಿತೆ ಮಧ್ಯೆ ಜಮಖಂಡಿ ಸರಕಾರಿ ಐಬಿ(Jamkhandi Government IB)ಯಲ್ಲೇ ಅಧಿಕಾರಿಗಳು ಎಣ್ಣೆ ಪಾರ್ಟಿ ಮಾಡಿದ ಘಟನೆ ಕುರಿತು ಟಿವಿ9 ಕನ್ನಡ ಡಿಜಿಟಲ್​ ಸುದ್ದಿ ಬಿತ್ತರಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ಎಂ ಜಾನಕಿ ಅವರು ಶೋಕಾಸ್​ ನೋಟಿಸ್​ ಜಾರಿ ಮಾಡಿದ್ದಾರೆ.

ಸರಕಾರಿ ಐಬಿಯಲ್ಲೇ ಅಧಿಕಾರಿಗಳಿಂದ ಎಣ್ಣೆ ಪಾರ್ಟಿ ಪ್ರಕರಣ; ಶೋಕಾಸ್ ನೋಟಿಸ್ ಜಾರಿ
ಬಾಗಲಕೋಟೆಯಲ್ಲಿ ಎಣ್ಣೆ ಪಾರ್ಟಿ ಪ್ರಕರಣ; ಶೋಕಾಸ್ ನೋಟಿಸ್ ಜಾರಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:May 23, 2024 | 9:40 PM

Share

ಬಾಗಲಕೋಟೆ, ಮೇ.23: ನೀತಿಸಂಹಿತೆ ನಡುವೆಯೇ ಜಮಖಂಡಿ ವಿಭಾಗದ ಜಿಲ್ಲಾ ಪಂಚಾಯತಿ ಇಂಜಿನಿಯರ್​ಗಳು ಕಚೇರಿಗೆ ಚಕ್ಕರ್ ಹೊಡೆದು ಗುತ್ತಿಗೆದಾರರೊಂದಿಗೆ ಸೇರಿಕೊಂಡು ಹಾಡಹಗಲೇ ಮದ್ಯಸೇವಿಸಿ ಮೋಜು ಮಸ್ತಿ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಎಇಇ​ ಎಂ.ಎಸ್​.ನಾಯಕ್, ಇಂಜಿನಿಯರ್​ಗಳಾದ ರಾಮಪ್ಪ​ ರಾಠೋಡ್, ಗಜಾನನ ಪಾಟೀಲ್, ಜಗದೀಶ್ ನಾಡಗೌಡ, ಶ್ರೀಶೈಲ್​ ಹೂಗಾರ್​ ಸೇರಿದಂತೆ ಇನ್ನಿತರರಿಗೆ ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ಎಂ ಜಾನಕಿ ಅವರು ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

ಕೆಲಸಕ್ಕೆ ಚಕ್ಕರ್​ ಹೊಡೆದು ಗುತ್ತಿಗೆದಾರರ ಜೊತೆ ಸೇರಿ ಮದ್ಯಸೇವನೆ ಬಗ್ಗೆ ವಿಡಿಯೋ ಸಾಕ್ಷಿ ಸಮೇತ ದೂರುಗಳು ಸ್ವೀಕೃತವಾಗಿವೆ. ಮಾದರಿ ನೀತಿ ಸಂಹಿತೆ ಹಿನ್ನೆಲೆ ಸರ್ಕಾರಿ ವಸತಿ ಗೃಹಗಳಲ್ಲಿ ಹೊರಗಿನವರಿಗೆ ಅವಕಾಶ ಇರುವುದಿಲ್ಲ. ಆದರೂ ಸರ್ಕಾರಿ ವಸತಿ ಗೃಹಗಳನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದೀರಿ. ನಿಮ್ಮ ಅನುಮತಿ ಇಲ್ಲದೇ ಜಿಲ್ಲಾ ಪಂಚಾಯತಿ ಕಾರ್ಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೇಗೆ ಸರ್ಕಾರಿ ವಸತಿ ಗೃಹಕ್ಕೆ ಹೋಗಿದ್ದಾರೆ?. 1951ರ ಕಲಂ 134ರ ಪ್ರಕಾರ ಯಾಕೆ ಕ್ರಮ ಜರುಗಿಸಬಾರದು. ಹೀಗಾಗಿ ನೋಟಿಸ್​​ ತಲುಪಿದ 24 ತಾಸಿನೊಳಗೆ ಉತ್ತರ ನೀಡಿ. ತಪ್ಪಿದ್ದಲ್ಲಿ ನಿಮ್ಮ ಮೇಲೆ‌ ಶಿಸ್ತು ಕ್ರಮ‌ಕೈಗೊಳ್ಳುವುದಾಗಿ ನೋಟಿಸ್ ನೀಡಿದ್ದಾರೆ.

ಇದನ್ನೂ ಓದಿ:ನೀತಿ‌ಸಂಹಿತೆ ಮಧ್ಯೆ ಸರಕಾರಿ ಐಬಿಯಲ್ಲೇ ಅಧಿಕಾರಿಗಳಿಂದ ಎಣ್ಣೆ ಪಾರ್ಟಿ; ವಿಡಿಯೋ ವೈರಲ್​

ಘಟನೆ ವಿವರ

ಸರಕಾರಿ ವಸತಿ ಗೃಹದಲ್ಲಿ ನಿನ್ನೆ(ಮೇ.22) ಮಧ್ಯಾಹ್ನ 3 ಗಂಟೆ ಸುಮಾರಿಗೆ ಸರಕಾರಿ ಐಬಿ ರಮಾ ನಿವಾಸದಲ್ಲಿ ಜಿಲ್ಲಾ ಪಂಚಾಯತಿ ವಿಭಾಗ ಜಮಖಂಡಿ ಎಇಇ ಎಮ್​ಎಸ್​ ನಾಯಕ, ಇಂಜಿನಿಯರ್​ಗಳಾದ ರಾಮಪ್ಪ ರಾಠೋಡ್, ಜಗದೀಶ್ ನಾಡಗೌಡ, ಗಜಾನನ ಪಾಟೀಲ್, ಶ್ರೀಶೈಲ್ ಹೂಗಾರ ಹಾಗೂ ಗುತ್ತಿಗೆದಾರರಾದ ಸಾಗರ, ಶೀತಲ ಹರಿಜನ ಸೇರಿದಂತೆ ಆರು ಜನ ಗುತ್ತಿಗೆದಾರರು ಸೇರಿಕೊಂಡು ಮದ್ಯಸೇವನೆ ಮಾಡಿದ್ದರು. ಈ ಹಿನ್ನಲೆ ಶೋಕಾಸ್​ ನೋಟಿಸ್​ ಜಾರಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:20 pm, Thu, 23 May 24

Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು