Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೆಡ್​ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ: ತಾಯಿ, ಮಗಳು ಸಜೀವ ದಹನ, ಇಂದು ಮಗನೂ ಸಾವು

ಅವರು ಹೊಲದ ಶೆಡ್​ನಲ್ಲಿ ರಾತ್ರಿ ಗಾಢ ನಿದ್ರೆಗೆ ಜಾರಿದ್ದರು. ಆಗ ಶೆಡ್​ಗೆ ಪೆಟ್ರೋಲ್ ಸುರಿದ ದುಷ್ಕರ್ಮಿಗಳು ತಾಯಿ-ಮಗಳನ್ನ ಜೀವಂತ ದಹನ ಮಾಡಿದ್ದರು. ಅದರಲ್ಲಿ ಮೂವರು ಬದುಕಿ ಬಂದಿದ್ದರು. ಆದರೆ, ಸುಟ್ಟು ಗಂಭೀರ ಗಾಯಗೊಂಡಿದ್ದ ಮಗ ಇಂದು ಪ್ರಾಣಬಿಟ್ಟಿದ್ದಾನೆ. ಈ ಮೂಲಕ ತಾಯಿ-ಮಗಳು‌-ಮಗ ಮೃತಪಟ್ಟಿದ್ದು, ಮೃತರ ಸಂಖ್ಯೆ ಮೂರಕ್ಕೇರಿದೆ.

ಶೆಡ್​ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ: ತಾಯಿ, ಮಗಳು ಸಜೀವ ದಹನ, ಇಂದು ಮಗನೂ ಸಾವು
ಮೃತ ವ್ಯಕ್ತಿ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 18, 2024 | 4:57 PM

ಬಾಗಲಕೋಟೆ, ಜು.18: ಮುಧೋಳ(Mudhol) ತಾಲ್ಲೂಕಿನ ಬೆಳಗಲಿ ತೋಟದ ವಸತಿ ಪ್ರದೇಶದಲ್ಲಿ ನಡೆದಿದ್ದ ಅನಾಹುತದಲ್ಲಿ ಬೆಂಕಿಗೆ ತಾಯಿ-ಮಗಳು ಸುಟ್ಟು ಕರಕಲಾಗಿದ್ದರು. ಇತ್ತ ಸುಟ್ಟು ಗಂಭೀರ ಗಾಯಗೊಂಡಿದ್ದ ಮಗ ಇಂದು(ಜು.18) ಚಿಕಿತ್ಸೆ ‌ಫಲಿಸದೆ‌ ಮೃತನಾಗಿದ್ದಾನೆ. ಇದೇ ಜುಲೈ 16 ರಂದು ರಾತ್ರಿ 2.30 ರ ಸುಮಾರಿಗೆ ದುಷ್ಕರ್ಮಿಗಳು, ಈ ಶೆಡ್​ಗೆ ಬೆಂಕಿ ಹಚ್ಚಿದ್ದರು. ನೂರು ಲೀಟರ್​ ಸಾಮರ್ಥ್ಯದ ಸಿಂಟೆಕ್ಷ್​ನಲ್ಲಿ ಪೆಟ್ರೋಲ್ ತಂದು, 2 ಎಚ್​ಪಿ ಮೋಟರ್ ಅಳವಡಿಸಿ ಪೈಪ್ ಮೂಲಕ ದಸ್ತಗೀರಸಾಬ್ ಶೆಡ್​ಗೆ ಪೆಟ್ರೋಲ್ ಸಿಂಪಡಿಸಿ ನಂತರ ಬೆಂಕಿ ಹಚ್ಚಿದ್ದರು. ಶೆಡ್​ನಲ್ಲಿ 55 ವರ್ಷದ ಜೈಬಾನ್, 25 ವರ್ಷದ ಮಗಳು ಶಬಾನ್ ಸಜೀವ ದಹನವಾಗಿದ್ದರು. ದಸ್ತಗೀರಸಾಬ್, ಮಗಲ ಸುಬಾನ್, ಮೊಮ್ಮಗ ಸಿದ್ದಿಕ್‌ ಬದುಕಿ ಬಂದಿದ್ದರು. ಗಂಭೀರ ಗಾಯಗೊಂಡ ಸುಬಾನ್ ಪೆಂಡಾರಿಯನ್ನು ಬೆಳಗಾವಿ ಕೆಎಲ್​ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದು 27 ವರ್ಷದ ಸುಬಾನ್ ಮೃತಪಟ್ಟಿದ್ದಾನೆ. ಇದರಿಂದ ಸಾವಿನ ಸಂಖ್ಯೆ ಮೂರಕ್ಕೆ ಏರಿದೆ.

ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಮುಧೋಳ, ಮಹಾಲಿಂಗಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಶ್ವಾನದಳ , ಎಫ್​ಎಸ್​ಎಲ್ ತಂಡದೊಂದಿಗೆ ತನಿಖೆ ಮುಂದುವರೆಸಲಾಗಿದೆ. ಘಟನೆ ನಡೆದು ಮೂರು ದಿನಗಳಾದರೂ ಇಂದಿಗೂ ಆರೋಪಿಗಳ ಬಂಧನವಾಗಿಲ್ಲ. ಈ ಬಗ್ಗೆ ಪೊಲೀಸರು ಮೃತರ ಸಂಬಂಧಿಕರಲ್ಲೇ ನಾಲ್ವರನ್ನು ವಶಕ್ಕೆ ‌ಪಡೆದು ವಿಚಾರಣೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಐದು ತಂಡ ರಚನೆ ಮಾಡಿದ್ದಾರೆ.

ಇದನ್ನೂ ಓದಿ:ತೋಟದಲ್ಲಿ ನಿರ್ಮಿಸಿದ್ದ ಶೆಡ್​ಗೆ ಬೆಂಕಿ ಹೆಚ್ಚಿದ ದುಷ್ಕರ್ಮಿಗಳು; ತಾಯಿ-ಮಗಳು ಸಜೀವ ದಹನ, ಇಬ್ಬರಿಗೆ ಗಾಯ

ಕೃತ್ಯಕ್ಕೆ ಕಾರಣವೇನು?

ಪ್ರಾಥಮಿಕ ‌ಮಾಹಿತಿ ಪ್ರಕಾರ ಕೃತ್ಯಕ್ಕೆ ಇಂದು ಮೃತಟ್ಟ ಸುಬಾನ್ ಹೊಂದಿರುವ ಅನೈತಿಕ ಸಂಬಂಧ ಎಂದು ತಿಳಿದು ಬಂದಿದೆ. ಸುಟ್ಟು ಕರಕಲಾದವರನ್ನು ನೋಡಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶಬಾನ್ ಎಮ್​ಎ ಇಂಗ್ಲೀಷ್ ಫೈನಲ್‌ ಓದುತ್ತಿದ್ದು, ಪಿಎಸ್​ಐ ಆಗಬೇಕೆಂದು ಕನಸು ಕಂಡಿದ್ದಳು. ಆದರೆ, ಬೆಂಕಿಯಲ್ಲೇ ಕನಸು ಕಮರಿದೆ. ಇದನ್ನು ನೆನೆದು ಸಹೋದರಿ ರೇಷ್ಮಾ ಕಣ್ಣೀರು ಹಾಕಿದ್ದಾರೆ. ಖಾಕಿ ಹಾಕಿಕೊಂಡು ಬರ್ತಿನಿ ಅಂದಿದ್ದಳು. ಈಗ ಬಿಳಿ ಬಟ್ಟೆಯಲ್ಲಿ ಶವ ನೋಡುವಂತಾಯಿತು ಎಂದು ರೋಧಿಸಿದ್ದಾರೆ. ಈ ಕೃತ್ಯವೆಸಗಿದವರನ್ನು ತುಂಡು ತುಂಡಾಗಿ ಕತ್ತರಿಸಬೇಕೆಂದು ಆಕ್ರೋಶ ಹೊರ ಹಾಕಿದರು. ಇಂದು ಸುಬಾನ್ ಮೃತಪಟ್ಟಿದ್ದು, ಇಡೀ ಕುಟುಂಬ ಮುಗಿಸಬೇಕೆಂದಿದ್ದ ದುಷ್ಕರ್ಮಿಗಳು ಮೂವರನ್ನು ಬಲಿ ಪಡೆದಂತಾಗಿದೆ. ಪೊಲೀಸರು ನಿರಂತರ ತನಿಖೆ ಮುಂದುವರೆಸಿದ್ದು, ಆದಷ್ಟು ಬೇಗ ದುಷ್ಕರ್ಮಿಗಳ ಬಂಧಿಸಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್