AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣ; 11 ಆರೋಪಿಗಳ ವಿರುದ್ಧ ಎಫ್​ಐಆರ್

ನಿನ್ನೆ(ಜು.11) ಬಾಗಲಕೋಟೆ(Bagalakote) ಜಿಲ್ಲೆಯ ಮುಧೋಳ ನಗರದ ನಾಲ್ಕು ಲಾಡ್ಜ್​ಗಳ ಮೇಲೆ ಜಮಖಂಡಿ ಡಿವೈಎಸ್​ಪಿ ಶಾಂತವೀರ ನೇತೃತ್ವದಲ್ಲಿ ಮೇಲೆ ದಾಳಿ ನಡೆದಿತ್ತು‌. ಈ ವೇಳೆ ಹತ್ತು ಜನ ಯುವತಿಯರನ್ನು ರಕ್ಷಿಸಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನರ ವಿರುದ್ದ ಎಫ್​ಐಆರ್​ ದಾಖಲಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆ: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣ; 11 ಆರೋಪಿಗಳ ವಿರುದ್ಧ ಎಫ್​ಐಆರ್
ಮುದೋಳನಲ್ಲಿ ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Jul 12, 2024 | 9:12 PM

Share

ಬಾಗಲಕೋಟೆ, ಜು.12: ‘ಸ್ಪಾ’ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳ ವಿರುದ್ಧ ಮುಧೋಳ ಠಾಣೆಯಲ್ಲಿ ಎಫ್​ಐಆರ್(FIR) ದಾಖಲಾಗಿದೆ. ನಿನ್ನೆ(ಜು.11) ಬಾಗಲಕೋಟೆ(Bagalakote) ಜಿಲ್ಲೆಯ ಮುಧೋಳ ನಗರದ ಓಂಕಾರ, ಸಪ್ತಗಿರಿ, ಶಿವದುರ್ಗಾ ಹಾಗೂ ಸುರಭಿ ಹೆಸರಿನ ನಾಲ್ಕು ಲಾಡ್ಜ್​ಗಳ ಜಮಖಂಡಿ ಡಿವೈಎಸ್​ಪಿ ಶಾಂತವೀರ ನೇತೃತ್ವದಲ್ಲಿ ಮೇಲೆ ದಾಳಿ ನಡೆದಿತ್ತು‌. ಈ ವೇಳೆ ಹತ್ತು ಜನ ಯುವತಿಯರನ್ನು ರಕ್ಷಣೆ ಮಾಡಲಾಗಿತ್ತು.

11 ಜನರ ವಿರುದ್ಧ ದಾಖಲಾಯ್ತು ಎಫ್​ಐಆರ್

ಈ ದಾಳಿ ವೇಳೆ ರಕ್ಷಿಸಿದ ಯುವತಿಯರೆಲ್ಲರೂ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಅಸ್ಸಾಂ, ಮುಂಬೈ ಮೂಲದರಾಗಿದ್ದಾರೆ. ಇನ್ನು ಸುರಭಿ ಲಾಡ್ಜ್​​ನ ಶಿವಕುಮಾರ್ ಈಳಗಾರ, ನಿರಂಜನ್ ಪೂಜಾರಿ, ಶ್ರೀಕಾಂತ್ ಕಲಾಲ್, ಶಿವದುರ್ಗಾ ಲಾಡ್ಜ್ ಮ್ಯಾನೇಜರ್ ಚಂದು ಕಲಾಲ, ಓಂಕಾರ ಲಾಡ್ಜ್​ ಮಾಲೀಕ ಹಣಮಂತ ಮಾರುತಿ ಭಜಂತ್ರಿ, ಓಂಕಾರ ಲಾಡ್ಜ್ ಮ್ಯಾನೇಜರ್ ಲವಿತ್ ಮೇತ್ರಿ, ಸಪ್ತಗಿರಿ ಲಾಡ್ಜ್ ಮ್ಯಾನೇಜರ್ ಆನಂದ್ ಮಾಂಗ್, ಮಾಲೀಕ ಸೇರಿ ಒಟ್ಟು 11 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಅದರಲ್ಲಿ ಆನಂದ್​ ಮಾಂಗ್, ಚಂದು ಕಲಾಲ, ಶಿವಕುಮಾರ ಈಳಗೇರ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಸಿಲಿಕಾನ್​ ಸಿಟಿಯಲ್ಲಿ ಹರ್ಬಲ್​ ಉತ್ಪನ್ನಗಳನ್ನು ಮಾರುವ ಸೋಗಿನಲ್ಲಿ ವೇಶ್ಯಾವಾಟಿಕೆ ದಂಧೆ?

ಇನ್ನು ಇತ್ತೀಚೆಗೆ ಬೆಂಗಳೂರಿನ ಯಲಹಂಕ ನ್ಯೂಟೌನ್ ಪೊಲೀಸರು ರೋರಾ ಲಕ್ಸುರಿ ಥಾಯ್ ಸ್ಪಾ ಹೆಸರಿನ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಜೊತೆಗೆ ಏಳು ಜನ ಯುವತಿಯರನ್ನು ರಕ್ಷಿಸಿದ್ದರು. ಇನ್ನು ಬಂಧಿತ ಆರೋಪಿಗಳು ಥೈಲ್ಯಾಂಡ್ ಸೇರಿದಂತೆ ವಿವಿಧ ದೇಶದ ಮಹಿಳೆಯರನ್ನು ಟೂರಿಸ್ಟ್ ವೀಸಾ ಹಾಗೂ ಬ್ಯುಸಿನೆಸ್ ವೀಸಾ ಮೂಲಕ ಬೆಂಗಳೂರಿಗೆ ಕರೆತಂದು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದರು. ಇದೀಗ ಬಾಗಲಕೋಟೆ ಜಿಲ್ಲೆಯಲ್ಲಿ ಇಂತಹದೊಂದು ಪ್ರಕರಣ ಬೆಳಕಿಗೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ