AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣ; 11 ಆರೋಪಿಗಳ ವಿರುದ್ಧ ಎಫ್​ಐಆರ್

ನಿನ್ನೆ(ಜು.11) ಬಾಗಲಕೋಟೆ(Bagalakote) ಜಿಲ್ಲೆಯ ಮುಧೋಳ ನಗರದ ನಾಲ್ಕು ಲಾಡ್ಜ್​ಗಳ ಮೇಲೆ ಜಮಖಂಡಿ ಡಿವೈಎಸ್​ಪಿ ಶಾಂತವೀರ ನೇತೃತ್ವದಲ್ಲಿ ಮೇಲೆ ದಾಳಿ ನಡೆದಿತ್ತು‌. ಈ ವೇಳೆ ಹತ್ತು ಜನ ಯುವತಿಯರನ್ನು ರಕ್ಷಿಸಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನರ ವಿರುದ್ದ ಎಫ್​ಐಆರ್​ ದಾಖಲಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆ: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣ; 11 ಆರೋಪಿಗಳ ವಿರುದ್ಧ ಎಫ್​ಐಆರ್
ಮುದೋಳನಲ್ಲಿ ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ
ರವಿ ಹೆಚ್ ಮೂಕಿ, ಕಲಘಟಗಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jul 12, 2024 | 9:12 PM

Share

ಬಾಗಲಕೋಟೆ, ಜು.12: ‘ಸ್ಪಾ’ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳ ವಿರುದ್ಧ ಮುಧೋಳ ಠಾಣೆಯಲ್ಲಿ ಎಫ್​ಐಆರ್(FIR) ದಾಖಲಾಗಿದೆ. ನಿನ್ನೆ(ಜು.11) ಬಾಗಲಕೋಟೆ(Bagalakote) ಜಿಲ್ಲೆಯ ಮುಧೋಳ ನಗರದ ಓಂಕಾರ, ಸಪ್ತಗಿರಿ, ಶಿವದುರ್ಗಾ ಹಾಗೂ ಸುರಭಿ ಹೆಸರಿನ ನಾಲ್ಕು ಲಾಡ್ಜ್​ಗಳ ಜಮಖಂಡಿ ಡಿವೈಎಸ್​ಪಿ ಶಾಂತವೀರ ನೇತೃತ್ವದಲ್ಲಿ ಮೇಲೆ ದಾಳಿ ನಡೆದಿತ್ತು‌. ಈ ವೇಳೆ ಹತ್ತು ಜನ ಯುವತಿಯರನ್ನು ರಕ್ಷಣೆ ಮಾಡಲಾಗಿತ್ತು.

11 ಜನರ ವಿರುದ್ಧ ದಾಖಲಾಯ್ತು ಎಫ್​ಐಆರ್

ಈ ದಾಳಿ ವೇಳೆ ರಕ್ಷಿಸಿದ ಯುವತಿಯರೆಲ್ಲರೂ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಅಸ್ಸಾಂ, ಮುಂಬೈ ಮೂಲದರಾಗಿದ್ದಾರೆ. ಇನ್ನು ಸುರಭಿ ಲಾಡ್ಜ್​​ನ ಶಿವಕುಮಾರ್ ಈಳಗಾರ, ನಿರಂಜನ್ ಪೂಜಾರಿ, ಶ್ರೀಕಾಂತ್ ಕಲಾಲ್, ಶಿವದುರ್ಗಾ ಲಾಡ್ಜ್ ಮ್ಯಾನೇಜರ್ ಚಂದು ಕಲಾಲ, ಓಂಕಾರ ಲಾಡ್ಜ್​ ಮಾಲೀಕ ಹಣಮಂತ ಮಾರುತಿ ಭಜಂತ್ರಿ, ಓಂಕಾರ ಲಾಡ್ಜ್ ಮ್ಯಾನೇಜರ್ ಲವಿತ್ ಮೇತ್ರಿ, ಸಪ್ತಗಿರಿ ಲಾಡ್ಜ್ ಮ್ಯಾನೇಜರ್ ಆನಂದ್ ಮಾಂಗ್, ಮಾಲೀಕ ಸೇರಿ ಒಟ್ಟು 11 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಅದರಲ್ಲಿ ಆನಂದ್​ ಮಾಂಗ್, ಚಂದು ಕಲಾಲ, ಶಿವಕುಮಾರ ಈಳಗೇರ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಸಿಲಿಕಾನ್​ ಸಿಟಿಯಲ್ಲಿ ಹರ್ಬಲ್​ ಉತ್ಪನ್ನಗಳನ್ನು ಮಾರುವ ಸೋಗಿನಲ್ಲಿ ವೇಶ್ಯಾವಾಟಿಕೆ ದಂಧೆ?

ಇನ್ನು ಇತ್ತೀಚೆಗೆ ಬೆಂಗಳೂರಿನ ಯಲಹಂಕ ನ್ಯೂಟೌನ್ ಪೊಲೀಸರು ರೋರಾ ಲಕ್ಸುರಿ ಥಾಯ್ ಸ್ಪಾ ಹೆಸರಿನ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಜೊತೆಗೆ ಏಳು ಜನ ಯುವತಿಯರನ್ನು ರಕ್ಷಿಸಿದ್ದರು. ಇನ್ನು ಬಂಧಿತ ಆರೋಪಿಗಳು ಥೈಲ್ಯಾಂಡ್ ಸೇರಿದಂತೆ ವಿವಿಧ ದೇಶದ ಮಹಿಳೆಯರನ್ನು ಟೂರಿಸ್ಟ್ ವೀಸಾ ಹಾಗೂ ಬ್ಯುಸಿನೆಸ್ ವೀಸಾ ಮೂಲಕ ಬೆಂಗಳೂರಿಗೆ ಕರೆತಂದು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದರು. ಇದೀಗ ಬಾಗಲಕೋಟೆ ಜಿಲ್ಲೆಯಲ್ಲಿ ಇಂತಹದೊಂದು ಪ್ರಕರಣ ಬೆಳಕಿಗೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್