ಬಾಗಲಕೋಟೆ: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣ; 11 ಆರೋಪಿಗಳ ವಿರುದ್ಧ ಎಫ್​ಐಆರ್

ನಿನ್ನೆ(ಜು.11) ಬಾಗಲಕೋಟೆ(Bagalakote) ಜಿಲ್ಲೆಯ ಮುಧೋಳ ನಗರದ ನಾಲ್ಕು ಲಾಡ್ಜ್​ಗಳ ಮೇಲೆ ಜಮಖಂಡಿ ಡಿವೈಎಸ್​ಪಿ ಶಾಂತವೀರ ನೇತೃತ್ವದಲ್ಲಿ ಮೇಲೆ ದಾಳಿ ನಡೆದಿತ್ತು‌. ಈ ವೇಳೆ ಹತ್ತು ಜನ ಯುವತಿಯರನ್ನು ರಕ್ಷಿಸಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನರ ವಿರುದ್ದ ಎಫ್​ಐಆರ್​ ದಾಖಲಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆ: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣ; 11 ಆರೋಪಿಗಳ ವಿರುದ್ಧ ಎಫ್​ಐಆರ್
ಮುದೋಳನಲ್ಲಿ ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 12, 2024 | 9:12 PM

ಬಾಗಲಕೋಟೆ, ಜು.12: ‘ಸ್ಪಾ’ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳ ವಿರುದ್ಧ ಮುಧೋಳ ಠಾಣೆಯಲ್ಲಿ ಎಫ್​ಐಆರ್(FIR) ದಾಖಲಾಗಿದೆ. ನಿನ್ನೆ(ಜು.11) ಬಾಗಲಕೋಟೆ(Bagalakote) ಜಿಲ್ಲೆಯ ಮುಧೋಳ ನಗರದ ಓಂಕಾರ, ಸಪ್ತಗಿರಿ, ಶಿವದುರ್ಗಾ ಹಾಗೂ ಸುರಭಿ ಹೆಸರಿನ ನಾಲ್ಕು ಲಾಡ್ಜ್​ಗಳ ಜಮಖಂಡಿ ಡಿವೈಎಸ್​ಪಿ ಶಾಂತವೀರ ನೇತೃತ್ವದಲ್ಲಿ ಮೇಲೆ ದಾಳಿ ನಡೆದಿತ್ತು‌. ಈ ವೇಳೆ ಹತ್ತು ಜನ ಯುವತಿಯರನ್ನು ರಕ್ಷಣೆ ಮಾಡಲಾಗಿತ್ತು.

11 ಜನರ ವಿರುದ್ಧ ದಾಖಲಾಯ್ತು ಎಫ್​ಐಆರ್

ಈ ದಾಳಿ ವೇಳೆ ರಕ್ಷಿಸಿದ ಯುವತಿಯರೆಲ್ಲರೂ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಅಸ್ಸಾಂ, ಮುಂಬೈ ಮೂಲದರಾಗಿದ್ದಾರೆ. ಇನ್ನು ಸುರಭಿ ಲಾಡ್ಜ್​​ನ ಶಿವಕುಮಾರ್ ಈಳಗಾರ, ನಿರಂಜನ್ ಪೂಜಾರಿ, ಶ್ರೀಕಾಂತ್ ಕಲಾಲ್, ಶಿವದುರ್ಗಾ ಲಾಡ್ಜ್ ಮ್ಯಾನೇಜರ್ ಚಂದು ಕಲಾಲ, ಓಂಕಾರ ಲಾಡ್ಜ್​ ಮಾಲೀಕ ಹಣಮಂತ ಮಾರುತಿ ಭಜಂತ್ರಿ, ಓಂಕಾರ ಲಾಡ್ಜ್ ಮ್ಯಾನೇಜರ್ ಲವಿತ್ ಮೇತ್ರಿ, ಸಪ್ತಗಿರಿ ಲಾಡ್ಜ್ ಮ್ಯಾನೇಜರ್ ಆನಂದ್ ಮಾಂಗ್, ಮಾಲೀಕ ಸೇರಿ ಒಟ್ಟು 11 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಅದರಲ್ಲಿ
ಆನಂದ್​ ಮಾಂಗ್, ಚಂದು ಕಲಾಲ, ಶಿವಕುಮಾರ ಈಳಗೇರ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಸಿಲಿಕಾನ್​ ಸಿಟಿಯಲ್ಲಿ ಹರ್ಬಲ್​ ಉತ್ಪನ್ನಗಳನ್ನು ಮಾರುವ ಸೋಗಿನಲ್ಲಿ ವೇಶ್ಯಾವಾಟಿಕೆ ದಂಧೆ?

ಇನ್ನು ಇತ್ತೀಚೆಗೆ ಬೆಂಗಳೂರಿನ ಯಲಹಂಕ ನ್ಯೂಟೌನ್ ಪೊಲೀಸರು ರೋರಾ ಲಕ್ಸುರಿ ಥಾಯ್ ಸ್ಪಾ ಹೆಸರಿನ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಜೊತೆಗೆ ಏಳು ಜನ ಯುವತಿಯರನ್ನು ರಕ್ಷಿಸಿದ್ದರು. ಇನ್ನು ಬಂಧಿತ ಆರೋಪಿಗಳು ಥೈಲ್ಯಾಂಡ್ ಸೇರಿದಂತೆ ವಿವಿಧ ದೇಶದ ಮಹಿಳೆಯರನ್ನು ಟೂರಿಸ್ಟ್ ವೀಸಾ ಹಾಗೂ ಬ್ಯುಸಿನೆಸ್ ವೀಸಾ ಮೂಲಕ ಬೆಂಗಳೂರಿಗೆ ಕರೆತಂದು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದರು. ಇದೀಗ ಬಾಗಲಕೋಟೆ ಜಿಲ್ಲೆಯಲ್ಲಿ ಇಂತಹದೊಂದು ಪ್ರಕರಣ ಬೆಳಕಿಗೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us