AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀಳಗಿ ದೇವಸ್ಥಾನದಲ್ಲಿ ಇಂದು ಯೋಧ ಸಂತೋಷ ಬಾವಿಕಟ್ಟಿ ವಿಭಿನ್ನ ಮದುವೆ, ಯಾರೆಲ್ಲ ಬರುತ್ತಿದ್ದಾರೆ ಗೊತ್ತಾ?

ಯೋಧ ಸಂತೋಷ ಬಾವಿಕಟ್ಟಿ ಬೀಳಗಿ ಮೂಲದ ಮಾಜಿ ಯೋಧರಿಂದ ಯುದ್ಧ ಬಾಧಿತರಿಗೆ ಸನ್ಮಾನ ಮಾಡಿಸಲಿದ್ದಾರೆ. ನನ್ನ ಮದುವೆಗೆ ಹುತಾತ್ಮ ಯೋಧರ ಪತ್ನಿಯರು, ಗಾಯಾಳು ವೀರಯೋಧರನ್ನು ಕರೆಸಿ ಸನ್ಮಾನಿಸುವ ಕನಸು ಕಂಡಿದ್ದೆ. ಆ ಪ್ರಕಾರ ಮದುವೆ ಮಾಡಿಕೊಳ್ಳುತ್ತಿದ್ದೇನೆ - ಯೋಧ ಸಂತೋಷ ಬಾವಿಕಟ್ಟಿ.

ಬೀಳಗಿ ದೇವಸ್ಥಾನದಲ್ಲಿ ಇಂದು ಯೋಧ ಸಂತೋಷ ಬಾವಿಕಟ್ಟಿ ವಿಭಿನ್ನ ಮದುವೆ, ಯಾರೆಲ್ಲ ಬರುತ್ತಿದ್ದಾರೆ ಗೊತ್ತಾ?
ಬೀಳಗಿ ದೇವಸ್ಥಾನದಲ್ಲಿ ಇಂದು ಯೋಧನ ವಿಭಿನ್ನ ಮದುವೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Dec 14, 2023 | 10:30 AM

Share

ಬಾಗಲಕೋಟೆ, ಡಿಸೆಂಬರ್​ 14: ಬೀಳಗಿ ಮೂಲದ ಭಾರತೀಯ ಸೇನಾ (Indian Army Soldier) ಯೋಧ ಇಲ್ಲಿನ ಸಿದ್ದೇಶ್ವರ ದೇವಸ್ಥಾನದಲ್ಲಿ (Bilagi, Bagalkot) ಇಂದು ಗುರುವಾರ ಮಧ್ಯಾಹ್ನ12 ಗಂಟೆಗೆ ವಿಶೇಷವಾಗಿ, ವಿಭಿನ್ನವಾಗಿ ಮದುವೆ (Wedding) ಮಾಡಿಕೊಳ್ಳುತ್ತಿದ್ದಾರೆ. ಆ ಯೋಧನ ಹೆಸರು ಸಂತೋಷ ಬಾವಿಕಟ್ಟಿ. ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿ ಹೊಂದಿರುವ ಯೋಧ. ದೇಶಭಕ್ತಿ ಹಾಗೂ ವಿವಿಧ ವಿಷಯದ ಬಗ್ಗೆ ರೀಲ್ಸ್ (Reels) ಮಾಡುವ ಮೂಲಕ ಹೆಸರುವಾಸಿಯಾಗಿರುವ ಯೋಧ ಈತ.

ತನ್ನ ಮದುವೆಯಲ್ಲಿ ಹುತಾತ್ಮ ಯೋಧರ ಪತ್ನಿಯರಿಗೆ ಹಾಗೂ ಗಾಯಾಳು ಯೋಧರಿಗೆ ಸನ್ಮಾನ ಮಾಡಲಿದ್ದಾರೆ. ಪುಲ್ವಾಮಾ, ಸಿಯಾಚಿನ್ ಹುತಾತ್ಮ ಯೋಧರ ಪತ್ನಿಯರಿಗೆ ವಿಶೇಷವಾಗಿ ಯೋಧ ಸನ್ಮಾನ ಮಾಡಲಿದ್ದಾರೆ.

ಸಿಯಾಚಿನ್ ಹುತಾತ್ಮ ಯೋಧ ಹನುಮಂತಪ್ಪ ಕೊಪ್ಪದ ಪತ್ನಿ ಮಹಾದೇವಿ ಕೊಪ್ಪದ, ಕಾರ್ಗಿಲ್ ಯೋಧ ಕ್ಯಾಪ್ಟನ್ ನವೀನ್ ನಾಗಪ್ಪ,ಕಾರ್ಗಿಲ್ ಯುದ್ದದ ಗಾಯಾಳು ಯೋಧ ರಂಗಪ್ಪ ಆಲೂರು. ಪುಲ್ವಾಮಾ ಹುತಾತ್ಮ ಯೋಧ ಕಾಶಿರಾಯ ಬೊಮ್ಮನಹಳ್ಳಿ ಅವರ ಪತ್ನಿ ಸಂಗೀತಾ ಬೊಮ್ಮನಹಳ್ಳಿ ಸೇರಿದಂತೆ ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯ ಎಂಟು ಜನ ವೀರನಾರಿಯರಿಗೆ ಯೋಧ‌ ಸನ್ಮಾನ ಮಾಡಲಿದ್ದಾರೆ.

ಸಂತೋಷ ಬಾವಿಕಟ್ಟಿ ವಿಭಿನ್ನ ಮದುವೆ – ಸನ್ಮಾನ ಮಾಡುವುದು ಯಾರು ಗೊತ್ತಾ!?

ಯೋಧ ಸಂತೋಷ ಬಾವಿಕಟ್ಟಿ ಅವರು ಬೀಳಗಿ ಮೂಲದ ಮಾಜಿ ಯೋಧರಿಂದ ಯುದ್ಧಬಾಧಿತರಿಗೆ ಸನ್ಮಾನ ಮಾಡಿಸಲಿದ್ದಾರೆ. ನನ್ನ ಮದುವೆಗೆ ಹುತಾತ್ಮ ಯೋಧರ ಪತ್ನಿಯರು, ಗಾಯಾಳು ವೀರಯೋಧರನ್ನು ಕರೆಸಿ ಸನ್ಮಾನಿಸುವ ಕನಸು ಕಂಡಿದ್ದೆ. ಆ ಪ್ರಕಾರ ಮದುವೆ ಮಾಡಿಕೊಳ್ಳುತ್ತಿದ್ದೇನೆ. ಎಲ್ಲರೂ ಮದುವೆಗೆ ಬಂದು ಆಶೀರ್ವದಿಸಿ ಎಂದು ರೀಲ್ಸ್ ಮೂಲಕ ಆಹ್ವಾನ ನೀಡಿದ್ದಾರೆ ಯೋಧ ಸಂತೋಷ ಬಾವಿಕಟ್ಟಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:28 am, Thu, 14 December 23

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​