AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀಳಗಿ ದೇವಸ್ಥಾನದಲ್ಲಿ ಇಂದು ಯೋಧ ಸಂತೋಷ ಬಾವಿಕಟ್ಟಿ ವಿಭಿನ್ನ ಮದುವೆ, ಯಾರೆಲ್ಲ ಬರುತ್ತಿದ್ದಾರೆ ಗೊತ್ತಾ?

ಯೋಧ ಸಂತೋಷ ಬಾವಿಕಟ್ಟಿ ಬೀಳಗಿ ಮೂಲದ ಮಾಜಿ ಯೋಧರಿಂದ ಯುದ್ಧ ಬಾಧಿತರಿಗೆ ಸನ್ಮಾನ ಮಾಡಿಸಲಿದ್ದಾರೆ. ನನ್ನ ಮದುವೆಗೆ ಹುತಾತ್ಮ ಯೋಧರ ಪತ್ನಿಯರು, ಗಾಯಾಳು ವೀರಯೋಧರನ್ನು ಕರೆಸಿ ಸನ್ಮಾನಿಸುವ ಕನಸು ಕಂಡಿದ್ದೆ. ಆ ಪ್ರಕಾರ ಮದುವೆ ಮಾಡಿಕೊಳ್ಳುತ್ತಿದ್ದೇನೆ - ಯೋಧ ಸಂತೋಷ ಬಾವಿಕಟ್ಟಿ.

ಬೀಳಗಿ ದೇವಸ್ಥಾನದಲ್ಲಿ ಇಂದು ಯೋಧ ಸಂತೋಷ ಬಾವಿಕಟ್ಟಿ ವಿಭಿನ್ನ ಮದುವೆ, ಯಾರೆಲ್ಲ ಬರುತ್ತಿದ್ದಾರೆ ಗೊತ್ತಾ?
ಬೀಳಗಿ ದೇವಸ್ಥಾನದಲ್ಲಿ ಇಂದು ಯೋಧನ ವಿಭಿನ್ನ ಮದುವೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: ಸಾಧು ಶ್ರೀನಾಥ್​|

Updated on:Dec 14, 2023 | 10:30 AM

Share

ಬಾಗಲಕೋಟೆ, ಡಿಸೆಂಬರ್​ 14: ಬೀಳಗಿ ಮೂಲದ ಭಾರತೀಯ ಸೇನಾ (Indian Army Soldier) ಯೋಧ ಇಲ್ಲಿನ ಸಿದ್ದೇಶ್ವರ ದೇವಸ್ಥಾನದಲ್ಲಿ (Bilagi, Bagalkot) ಇಂದು ಗುರುವಾರ ಮಧ್ಯಾಹ್ನ12 ಗಂಟೆಗೆ ವಿಶೇಷವಾಗಿ, ವಿಭಿನ್ನವಾಗಿ ಮದುವೆ (Wedding) ಮಾಡಿಕೊಳ್ಳುತ್ತಿದ್ದಾರೆ. ಆ ಯೋಧನ ಹೆಸರು ಸಂತೋಷ ಬಾವಿಕಟ್ಟಿ. ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿ ಹೊಂದಿರುವ ಯೋಧ. ದೇಶಭಕ್ತಿ ಹಾಗೂ ವಿವಿಧ ವಿಷಯದ ಬಗ್ಗೆ ರೀಲ್ಸ್ (Reels) ಮಾಡುವ ಮೂಲಕ ಹೆಸರುವಾಸಿಯಾಗಿರುವ ಯೋಧ ಈತ.

ತನ್ನ ಮದುವೆಯಲ್ಲಿ ಹುತಾತ್ಮ ಯೋಧರ ಪತ್ನಿಯರಿಗೆ ಹಾಗೂ ಗಾಯಾಳು ಯೋಧರಿಗೆ ಸನ್ಮಾನ ಮಾಡಲಿದ್ದಾರೆ. ಪುಲ್ವಾಮಾ, ಸಿಯಾಚಿನ್ ಹುತಾತ್ಮ ಯೋಧರ ಪತ್ನಿಯರಿಗೆ ವಿಶೇಷವಾಗಿ ಯೋಧ ಸನ್ಮಾನ ಮಾಡಲಿದ್ದಾರೆ.

ಸಿಯಾಚಿನ್ ಹುತಾತ್ಮ ಯೋಧ ಹನುಮಂತಪ್ಪ ಕೊಪ್ಪದ ಪತ್ನಿ ಮಹಾದೇವಿ ಕೊಪ್ಪದ, ಕಾರ್ಗಿಲ್ ಯೋಧ ಕ್ಯಾಪ್ಟನ್ ನವೀನ್ ನಾಗಪ್ಪ,ಕಾರ್ಗಿಲ್ ಯುದ್ದದ ಗಾಯಾಳು ಯೋಧ ರಂಗಪ್ಪ ಆಲೂರು. ಪುಲ್ವಾಮಾ ಹುತಾತ್ಮ ಯೋಧ ಕಾಶಿರಾಯ ಬೊಮ್ಮನಹಳ್ಳಿ ಅವರ ಪತ್ನಿ ಸಂಗೀತಾ ಬೊಮ್ಮನಹಳ್ಳಿ ಸೇರಿದಂತೆ ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯ ಎಂಟು ಜನ ವೀರನಾರಿಯರಿಗೆ ಯೋಧ‌ ಸನ್ಮಾನ ಮಾಡಲಿದ್ದಾರೆ.

ಸಂತೋಷ ಬಾವಿಕಟ್ಟಿ ವಿಭಿನ್ನ ಮದುವೆ – ಸನ್ಮಾನ ಮಾಡುವುದು ಯಾರು ಗೊತ್ತಾ!?

ಯೋಧ ಸಂತೋಷ ಬಾವಿಕಟ್ಟಿ ಅವರು ಬೀಳಗಿ ಮೂಲದ ಮಾಜಿ ಯೋಧರಿಂದ ಯುದ್ಧಬಾಧಿತರಿಗೆ ಸನ್ಮಾನ ಮಾಡಿಸಲಿದ್ದಾರೆ. ನನ್ನ ಮದುವೆಗೆ ಹುತಾತ್ಮ ಯೋಧರ ಪತ್ನಿಯರು, ಗಾಯಾಳು ವೀರಯೋಧರನ್ನು ಕರೆಸಿ ಸನ್ಮಾನಿಸುವ ಕನಸು ಕಂಡಿದ್ದೆ. ಆ ಪ್ರಕಾರ ಮದುವೆ ಮಾಡಿಕೊಳ್ಳುತ್ತಿದ್ದೇನೆ. ಎಲ್ಲರೂ ಮದುವೆಗೆ ಬಂದು ಆಶೀರ್ವದಿಸಿ ಎಂದು ರೀಲ್ಸ್ ಮೂಲಕ ಆಹ್ವಾನ ನೀಡಿದ್ದಾರೆ ಯೋಧ ಸಂತೋಷ ಬಾವಿಕಟ್ಟಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:28 am, Thu, 14 December 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ