AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀಳಗಿ ದೇವಸ್ಥಾನದಲ್ಲಿ ಇಂದು ಯೋಧ ಸಂತೋಷ ಬಾವಿಕಟ್ಟಿ ವಿಭಿನ್ನ ಮದುವೆ, ಯಾರೆಲ್ಲ ಬರುತ್ತಿದ್ದಾರೆ ಗೊತ್ತಾ?

ಯೋಧ ಸಂತೋಷ ಬಾವಿಕಟ್ಟಿ ಬೀಳಗಿ ಮೂಲದ ಮಾಜಿ ಯೋಧರಿಂದ ಯುದ್ಧ ಬಾಧಿತರಿಗೆ ಸನ್ಮಾನ ಮಾಡಿಸಲಿದ್ದಾರೆ. ನನ್ನ ಮದುವೆಗೆ ಹುತಾತ್ಮ ಯೋಧರ ಪತ್ನಿಯರು, ಗಾಯಾಳು ವೀರಯೋಧರನ್ನು ಕರೆಸಿ ಸನ್ಮಾನಿಸುವ ಕನಸು ಕಂಡಿದ್ದೆ. ಆ ಪ್ರಕಾರ ಮದುವೆ ಮಾಡಿಕೊಳ್ಳುತ್ತಿದ್ದೇನೆ - ಯೋಧ ಸಂತೋಷ ಬಾವಿಕಟ್ಟಿ.

ಬೀಳಗಿ ದೇವಸ್ಥಾನದಲ್ಲಿ ಇಂದು ಯೋಧ ಸಂತೋಷ ಬಾವಿಕಟ್ಟಿ ವಿಭಿನ್ನ ಮದುವೆ, ಯಾರೆಲ್ಲ ಬರುತ್ತಿದ್ದಾರೆ ಗೊತ್ತಾ?
ಬೀಳಗಿ ದೇವಸ್ಥಾನದಲ್ಲಿ ಇಂದು ಯೋಧನ ವಿಭಿನ್ನ ಮದುವೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Dec 14, 2023 | 10:30 AM

Share

ಬಾಗಲಕೋಟೆ, ಡಿಸೆಂಬರ್​ 14: ಬೀಳಗಿ ಮೂಲದ ಭಾರತೀಯ ಸೇನಾ (Indian Army Soldier) ಯೋಧ ಇಲ್ಲಿನ ಸಿದ್ದೇಶ್ವರ ದೇವಸ್ಥಾನದಲ್ಲಿ (Bilagi, Bagalkot) ಇಂದು ಗುರುವಾರ ಮಧ್ಯಾಹ್ನ12 ಗಂಟೆಗೆ ವಿಶೇಷವಾಗಿ, ವಿಭಿನ್ನವಾಗಿ ಮದುವೆ (Wedding) ಮಾಡಿಕೊಳ್ಳುತ್ತಿದ್ದಾರೆ. ಆ ಯೋಧನ ಹೆಸರು ಸಂತೋಷ ಬಾವಿಕಟ್ಟಿ. ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿ ಹೊಂದಿರುವ ಯೋಧ. ದೇಶಭಕ್ತಿ ಹಾಗೂ ವಿವಿಧ ವಿಷಯದ ಬಗ್ಗೆ ರೀಲ್ಸ್ (Reels) ಮಾಡುವ ಮೂಲಕ ಹೆಸರುವಾಸಿಯಾಗಿರುವ ಯೋಧ ಈತ.

ತನ್ನ ಮದುವೆಯಲ್ಲಿ ಹುತಾತ್ಮ ಯೋಧರ ಪತ್ನಿಯರಿಗೆ ಹಾಗೂ ಗಾಯಾಳು ಯೋಧರಿಗೆ ಸನ್ಮಾನ ಮಾಡಲಿದ್ದಾರೆ. ಪುಲ್ವಾಮಾ, ಸಿಯಾಚಿನ್ ಹುತಾತ್ಮ ಯೋಧರ ಪತ್ನಿಯರಿಗೆ ವಿಶೇಷವಾಗಿ ಯೋಧ ಸನ್ಮಾನ ಮಾಡಲಿದ್ದಾರೆ.

ಸಿಯಾಚಿನ್ ಹುತಾತ್ಮ ಯೋಧ ಹನುಮಂತಪ್ಪ ಕೊಪ್ಪದ ಪತ್ನಿ ಮಹಾದೇವಿ ಕೊಪ್ಪದ, ಕಾರ್ಗಿಲ್ ಯೋಧ ಕ್ಯಾಪ್ಟನ್ ನವೀನ್ ನಾಗಪ್ಪ,ಕಾರ್ಗಿಲ್ ಯುದ್ದದ ಗಾಯಾಳು ಯೋಧ ರಂಗಪ್ಪ ಆಲೂರು. ಪುಲ್ವಾಮಾ ಹುತಾತ್ಮ ಯೋಧ ಕಾಶಿರಾಯ ಬೊಮ್ಮನಹಳ್ಳಿ ಅವರ ಪತ್ನಿ ಸಂಗೀತಾ ಬೊಮ್ಮನಹಳ್ಳಿ ಸೇರಿದಂತೆ ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯ ಎಂಟು ಜನ ವೀರನಾರಿಯರಿಗೆ ಯೋಧ‌ ಸನ್ಮಾನ ಮಾಡಲಿದ್ದಾರೆ.

ಸಂತೋಷ ಬಾವಿಕಟ್ಟಿ ವಿಭಿನ್ನ ಮದುವೆ – ಸನ್ಮಾನ ಮಾಡುವುದು ಯಾರು ಗೊತ್ತಾ!?

ಯೋಧ ಸಂತೋಷ ಬಾವಿಕಟ್ಟಿ ಅವರು ಬೀಳಗಿ ಮೂಲದ ಮಾಜಿ ಯೋಧರಿಂದ ಯುದ್ಧಬಾಧಿತರಿಗೆ ಸನ್ಮಾನ ಮಾಡಿಸಲಿದ್ದಾರೆ. ನನ್ನ ಮದುವೆಗೆ ಹುತಾತ್ಮ ಯೋಧರ ಪತ್ನಿಯರು, ಗಾಯಾಳು ವೀರಯೋಧರನ್ನು ಕರೆಸಿ ಸನ್ಮಾನಿಸುವ ಕನಸು ಕಂಡಿದ್ದೆ. ಆ ಪ್ರಕಾರ ಮದುವೆ ಮಾಡಿಕೊಳ್ಳುತ್ತಿದ್ದೇನೆ. ಎಲ್ಲರೂ ಮದುವೆಗೆ ಬಂದು ಆಶೀರ್ವದಿಸಿ ಎಂದು ರೀಲ್ಸ್ ಮೂಲಕ ಆಹ್ವಾನ ನೀಡಿದ್ದಾರೆ ಯೋಧ ಸಂತೋಷ ಬಾವಿಕಟ್ಟಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:28 am, Thu, 14 December 23

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ