AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀಳಗಿ ದೇವಸ್ಥಾನದಲ್ಲಿ ಇಂದು ಯೋಧ ಸಂತೋಷ ಬಾವಿಕಟ್ಟಿ ವಿಭಿನ್ನ ಮದುವೆ, ಯಾರೆಲ್ಲ ಬರುತ್ತಿದ್ದಾರೆ ಗೊತ್ತಾ?

ಯೋಧ ಸಂತೋಷ ಬಾವಿಕಟ್ಟಿ ಬೀಳಗಿ ಮೂಲದ ಮಾಜಿ ಯೋಧರಿಂದ ಯುದ್ಧ ಬಾಧಿತರಿಗೆ ಸನ್ಮಾನ ಮಾಡಿಸಲಿದ್ದಾರೆ. ನನ್ನ ಮದುವೆಗೆ ಹುತಾತ್ಮ ಯೋಧರ ಪತ್ನಿಯರು, ಗಾಯಾಳು ವೀರಯೋಧರನ್ನು ಕರೆಸಿ ಸನ್ಮಾನಿಸುವ ಕನಸು ಕಂಡಿದ್ದೆ. ಆ ಪ್ರಕಾರ ಮದುವೆ ಮಾಡಿಕೊಳ್ಳುತ್ತಿದ್ದೇನೆ - ಯೋಧ ಸಂತೋಷ ಬಾವಿಕಟ್ಟಿ.

ಬೀಳಗಿ ದೇವಸ್ಥಾನದಲ್ಲಿ ಇಂದು ಯೋಧ ಸಂತೋಷ ಬಾವಿಕಟ್ಟಿ ವಿಭಿನ್ನ ಮದುವೆ, ಯಾರೆಲ್ಲ ಬರುತ್ತಿದ್ದಾರೆ ಗೊತ್ತಾ?
ಬೀಳಗಿ ದೇವಸ್ಥಾನದಲ್ಲಿ ಇಂದು ಯೋಧನ ವಿಭಿನ್ನ ಮದುವೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: ಸಾಧು ಶ್ರೀನಾಥ್​|

Updated on:Dec 14, 2023 | 10:30 AM

Share

ಬಾಗಲಕೋಟೆ, ಡಿಸೆಂಬರ್​ 14: ಬೀಳಗಿ ಮೂಲದ ಭಾರತೀಯ ಸೇನಾ (Indian Army Soldier) ಯೋಧ ಇಲ್ಲಿನ ಸಿದ್ದೇಶ್ವರ ದೇವಸ್ಥಾನದಲ್ಲಿ (Bilagi, Bagalkot) ಇಂದು ಗುರುವಾರ ಮಧ್ಯಾಹ್ನ12 ಗಂಟೆಗೆ ವಿಶೇಷವಾಗಿ, ವಿಭಿನ್ನವಾಗಿ ಮದುವೆ (Wedding) ಮಾಡಿಕೊಳ್ಳುತ್ತಿದ್ದಾರೆ. ಆ ಯೋಧನ ಹೆಸರು ಸಂತೋಷ ಬಾವಿಕಟ್ಟಿ. ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿ ಹೊಂದಿರುವ ಯೋಧ. ದೇಶಭಕ್ತಿ ಹಾಗೂ ವಿವಿಧ ವಿಷಯದ ಬಗ್ಗೆ ರೀಲ್ಸ್ (Reels) ಮಾಡುವ ಮೂಲಕ ಹೆಸರುವಾಸಿಯಾಗಿರುವ ಯೋಧ ಈತ.

ತನ್ನ ಮದುವೆಯಲ್ಲಿ ಹುತಾತ್ಮ ಯೋಧರ ಪತ್ನಿಯರಿಗೆ ಹಾಗೂ ಗಾಯಾಳು ಯೋಧರಿಗೆ ಸನ್ಮಾನ ಮಾಡಲಿದ್ದಾರೆ. ಪುಲ್ವಾಮಾ, ಸಿಯಾಚಿನ್ ಹುತಾತ್ಮ ಯೋಧರ ಪತ್ನಿಯರಿಗೆ ವಿಶೇಷವಾಗಿ ಯೋಧ ಸನ್ಮಾನ ಮಾಡಲಿದ್ದಾರೆ.

ಸಿಯಾಚಿನ್ ಹುತಾತ್ಮ ಯೋಧ ಹನುಮಂತಪ್ಪ ಕೊಪ್ಪದ ಪತ್ನಿ ಮಹಾದೇವಿ ಕೊಪ್ಪದ, ಕಾರ್ಗಿಲ್ ಯೋಧ ಕ್ಯಾಪ್ಟನ್ ನವೀನ್ ನಾಗಪ್ಪ,ಕಾರ್ಗಿಲ್ ಯುದ್ದದ ಗಾಯಾಳು ಯೋಧ ರಂಗಪ್ಪ ಆಲೂರು. ಪುಲ್ವಾಮಾ ಹುತಾತ್ಮ ಯೋಧ ಕಾಶಿರಾಯ ಬೊಮ್ಮನಹಳ್ಳಿ ಅವರ ಪತ್ನಿ ಸಂಗೀತಾ ಬೊಮ್ಮನಹಳ್ಳಿ ಸೇರಿದಂತೆ ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯ ಎಂಟು ಜನ ವೀರನಾರಿಯರಿಗೆ ಯೋಧ‌ ಸನ್ಮಾನ ಮಾಡಲಿದ್ದಾರೆ.

ಸಂತೋಷ ಬಾವಿಕಟ್ಟಿ ವಿಭಿನ್ನ ಮದುವೆ – ಸನ್ಮಾನ ಮಾಡುವುದು ಯಾರು ಗೊತ್ತಾ!?

ಯೋಧ ಸಂತೋಷ ಬಾವಿಕಟ್ಟಿ ಅವರು ಬೀಳಗಿ ಮೂಲದ ಮಾಜಿ ಯೋಧರಿಂದ ಯುದ್ಧಬಾಧಿತರಿಗೆ ಸನ್ಮಾನ ಮಾಡಿಸಲಿದ್ದಾರೆ. ನನ್ನ ಮದುವೆಗೆ ಹುತಾತ್ಮ ಯೋಧರ ಪತ್ನಿಯರು, ಗಾಯಾಳು ವೀರಯೋಧರನ್ನು ಕರೆಸಿ ಸನ್ಮಾನಿಸುವ ಕನಸು ಕಂಡಿದ್ದೆ. ಆ ಪ್ರಕಾರ ಮದುವೆ ಮಾಡಿಕೊಳ್ಳುತ್ತಿದ್ದೇನೆ. ಎಲ್ಲರೂ ಮದುವೆಗೆ ಬಂದು ಆಶೀರ್ವದಿಸಿ ಎಂದು ರೀಲ್ಸ್ ಮೂಲಕ ಆಹ್ವಾನ ನೀಡಿದ್ದಾರೆ ಯೋಧ ಸಂತೋಷ ಬಾವಿಕಟ್ಟಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:28 am, Thu, 14 December 23

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More