Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದದಲ್ಲಿ ವಿಜಯಾನಂದ ಕಾಶಪ್ಪನವರ: 2ನೇ ಮದುವೆ ವಿಚಾರಕ್ಕೆ ಮತ್ತೆ ರೆಕ್ಕೆಪುಕ್ಕ

ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅವರ ಹೆಸರಿನ ಮಗು ಜನನ ಪ್ರಮಾಣಪತ್ರ ವೈರಲ್ ಆಗುತ್ತಿದ್ದು, ಅದರಲ್ಲಿ ತಂದೆ ವಿಜಯಾನಂದ ಕಾಶಪ್ಪನವರ್​ ತಾಯಿ ಪೂಜಾಶ್ರಿ ಎಸ್​ ಎಂದು ಉಲ್ಲೇಖವಾಗಿದೆ.

ವಿವಾದದಲ್ಲಿ ವಿಜಯಾನಂದ ಕಾಶಪ್ಪನವರ: 2ನೇ ಮದುವೆ ವಿಚಾರಕ್ಕೆ ಮತ್ತೆ ರೆಕ್ಕೆಪುಕ್ಕ
ವೈರಲ್​ ಆಗಿರುವ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 23, 2022 | 4:26 PM

ಬಾಗಲಕೋಟೆ: ತಂದೆಯ ಕಾಲಂ ಎದುರಿನಲ್ಲಿ ‘ವಿಜಯಾನಂದ ಕಾಶಪ್ಪನವರ’ ಎಂಬ ಉಲ್ಲೇಖವಿರುವ ಜನನ ಪ್ರಮಾಣಪತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ಹೆಸರು ಹುನಗುಂದ (Hungund) ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ (Vijayanand Kashappanavar) ಅವರದೇ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ವೈರಲ್ ಆಗಿರುವ ಪ್ರಮಾಣ ಪತ್ರದಲ್ಲಿ ತಾಯಿಯ ಹೆಸರು ‘ಪೂಜಾಶ್ರಿ ಎಸ್’ ಎಂದು ಉಲ್ಲೇಖಗೊಂಡಿದೆ. ಇದು ವಿಜಯಾನಂದ ಕಾಶಪ್ಪನವರ ಅವರು ಪೂಜಾಶ್ರಿ ಎಂಬ ನಟಿಯ ಜೊತೆ  ಎರಡನೇ ಮದುವೆ ಆಗಿದ್ದಾರಾ ಎಂಬ ಅನುಮಾನಗಳಿಗೆ ಕಾರಣವಾಗಿದೆ. ಇವರ ಮದುವೆ (Marriage) ಒಂದು ವರ್ಷದ ಹಿಂದೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಜನನ ಪ್ರಮಾಣ ಪತ್ರದಲ್ಲಿ ಮಗು 1-9-2021 ರಲ್ಲಿ ಹುಟ್ಟಿದ್ದು, ಹೆಣ್ಣುಮಗುವಿನ ಹೆಸರು ಉಲ್ಲೇಖವಾಗಿದೆ. ಜನ್ಮಸ್ಥಳ ಮದರ್ ಹುಡ್ ಆಸ್ಪತ್ರೆ ಬೆಂಗಳೂರು. ನೊಂದಣಿ ದಿನಾಂಕ 22-09-2021 ಎಂದು ಉಲ್ಲೇಖವಾಗಿದೆ. ವಿಜಯಾನಂದ ಕಾಶಪ್ಪನವರ  ಮತ್ತು ಮೊದಲ ಪತ್ನಿ ವೀಣಾ ಕಾಶಪ್ಪನವರ ಅವರ ಮಧ್ಯೆ ಒಂದು ವರ್ಷದ ಹಿಂದೆ ಜಗಳವಾಗಲು 2ನೇ ಮದುವೆಯೇ ಮುಖ್ಯ ಕಾರಣ ಎಂಬ ಮಾತು ಬಾಗಲಕೋಟೆಯಲ್ಲಿ ಈ ಹಿಂದೆ ಕೇಳಿಬಂದಿತ್ತು.

ಬಾಗಲಕೋಟೆ  ಜಿಲ್ಲಾ ಪಂಚಾಯತ್  ಮಾಜಿ ಅಧ್ಯಕ್ಷೆಯಾಗಿದ್ದ ವೀಣಾ ಕಾಶಪ್ಪನವರ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

ತಿಳಿಯದೆ ಹೇಗೆ ಮಾತನಾಡಲಿ: ಕಾಶಪ್ಪನವರ

ಮಗುವಿನ ಜನನ ಪ್ರಮಾಣ ಪತ್ರ ವೈರಲ್ ಆಗಿರುವ ಕುರಿತು ’ಟಿವಿ9’ ಪ್ರತಿನಿಧಿಗೆ ಪ್ರತಿಕ್ರಿಯಿಸಿದ ವಿಜಯಾನಂದ ಕಾಶಪ್ಪನವರ, ‘ನನಗೆ ಈ ಬಗ್ಗೆ ಏನೂ ಗೊತ್ತಿಲ್ಲ. ಮಾಹಿತಿ ಇಲ್ಲದೆ ಏನು ಮಾತಾಡಲಿ’ ಎಂದಷ್ಟೇ ಹೇಳಿದರು. ಫೊಟೋ ವೈರಲ್ ಬಗ್ಗೆ ನನಗೆ ಈ ಬಗ್ಗೆ ಗೊತ್ತಿಲ್ಲ. ನನಗೆ ದಾಖಲೆ ಕೊಡಿ. ದಾಖಲೆ ಕೊಟ್ಟರೆ ನಾನು ಮಾತನಾಡುತ್ತೇನೆ. ನಾನು ಇದಕ್ಕೆ ಪ್ರತಿಕ್ರಿಯೆ ನೀಡಲ್ಲ ಎಂದರು.

ವಯಕ್ತಿಕ ಬದುಕಿಗೆ ಹೋಗಬಾರದು. ವಯಕ್ತಿಕ ಜೀವನವೇ ಬೇರೆ,ರಾಜಕೀಯವೇ ಬೇರೆ. ವಿರೋಧಿಗಳು ಹೀಗೆ ಮಾಡೋದು ಸಹಜ ಎಂದು ಹೇಳಿದರು.

Published On - 3:06 pm, Sat, 23 July 22

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ