AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid: ಚುನಾವಣೆ ಹೊತ್ತಲ್ಲೇ ಇಂದು ಕರ್ನಾಟಕದ ವಿವಿಧ ಕಡೆ ಐಟಿ ದಾಳಿ; ಎಲ್ಲೆಲ್ಲಿ?

ಚುನಾವಣಾ ಸಮಯದಲ್ಲಿ ಐಟಿ ಅಧಿಕಾರಿಗಳು ಫುಲ್​ ಆ್ಯಕ್ಟಿವ್​ ಆಗಿದ್ದು, ರಾಜ್ಯದ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಅದರಂತೆ ಇಂದು(ಏ.20) ಮುಂಜಾನೆ ಉಡುಪಿಯ ಮೊಗವೀರ ಸಮುದಾಯದ ಮುಖಂಡನ ನಿವಾಸ, ವಿಜಯಪುರ ಬಾಲಾಜಿ ಸಕ್ಕರೆ ಕಾರ್ಖಾನೆ ನಿರ್ದೇಶಕರ ಮನೆ ಮೇಲೆ ಐಟಿ ದಾಳಿ ನಡೆಸಿದ್ದಾರೆ.

IT Raid: ಚುನಾವಣೆ ಹೊತ್ತಲ್ಲೇ ಇಂದು ಕರ್ನಾಟಕದ ವಿವಿಧ ಕಡೆ ಐಟಿ ದಾಳಿ; ಎಲ್ಲೆಲ್ಲಿ?
ಉಡುಪಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಐಟಿ ದಾಳಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 20, 2023 | 1:01 PM

Share

ಉಡುಪಿ: ಚುನಾವಣಾ ಸಮಯದಲ್ಲಿ ಐಟಿ ಅಧಿಕಾರಿಗಳು(IT Officers) ಫುಲ್​ ಆ್ಯಕ್ಟಿವ್​ ಆಗಿದ್ದು, ರಾಜ್ಯದ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಹೌದು ಕಳೆದ ಕೆಲ ದಿನಗಳ ಹಿಂದೆ ಮಂಗಳೂರು, ಮೈಸೂರು ಸೇರಿದಂತೆ ಕೆಲ ಕಡೆ ಕಾಂಗ್ರೆಸ್(Congress) ಮುಖಂಡರುಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿತ್ತು. ನಿನ್ನೆ(ಏ.19) ಐಟಿ ಅಧಿಕಾರಿಗಳು ಬೆಂಗಳೂರಿನಲ್ಲಿ ಕೆಜಿಎಫ್​ ಬಾಬು(KGF Babu) ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದು, ಬೆಂಗಳೂರು ಸೇರಿ ರಾಜ್ಯಾದ್ಯಂತ 50 ಕಡೆ ಹಲವಾರು ಕಾಂಗ್ರೆಸ್ ನಾಯಕರ ನಿವಾಸದ ಮೇಲೆ ದಾಳಿ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಅದರಂತೆ ಇಂದು(ಏ.20) ಮುಂಜಾನೆ ಮೊಗವೀರ ಸಮುದಾಯದ ಮುಖಂಡ ಜಿ.ಶಂಕರ್​ಗೆ ಐಟಿ ಶಾಕ್ ನೀಡಿದ್ದು, ಅಕ್ರಮ ಹಣದ ವಹಿವಾಟು ನಡೆಸಿದ ಆರೋಪದ ಹಿನ್ನೆಲೆ ಉಡುಪಿಯಲ್ಲಿನ ಜಿ.ಶಂಕರ್ ಸಂಸ್ಥೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಜಿ.ಶಂಕರ್​​ ಫ್ಯಾಮಿಲಿ ಟ್ರಸ್ಟ್​​, ಮನೆ, ಕಚೇರಿಯಲ್ಲಿನ ಲೆಕ್ಕ ಪತ್ರ ಮತ್ತು ನಗದು ವಹಿವಾಟಿನ ಬಗ್ಗೆ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.

ವಿಜಯಪುರ ಬಾಲಾಜಿ ಸಕ್ಕರೆ ಕಾರ್ಖಾನೆ ನಿರ್ದೇಶಕರ ಮನೆ ಮೇಲೆ ಐಟಿ ದಾಳಿ..

ಬಾಗಲಕೋಟೆ: ಜಿಲ್ಲೆಯಲ್ಲಿ ಏಕ ಕಾಲದಲ್ಲಿ ಎರಡು ಕಡೆ ಐಟಿ ದಾಳಿ ನಡೆಸಿದ್ದು, ಜಿಲ್ಲೆಯ ನವನಗರ ಸೆಕ್ಟರ್ ನಂ 55 ರಲ್ಲಿರುವ ವಿಜಯಪುರ ಬಾಲಾಜಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಹೆಚ್​.ಎಲ್ ಪಾಟೀಲ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇನ್ನು ಈ ಬಾಲಾಜಿ ಶುಗರ್ಸ್ ಕಾರ್ಖಾನೆಯಲ್ಲಿ ಇತ್ತೀಚೆಗೆ ಎಸ್.ಆರ್ ಪಾಟೀಲ್ ಅವರ ಭಾವಚಿತ್ರದ ಗೋಡೆ ಗಡಿಯಾರ, ಟಿ ಶರ್ಟ್ ಪತ್ತೆಯಾಗಿದ್ದವು. ಈ ಹಿನ್ನಲೆ ಇಂದು ಐಟಿ ಅಧಿಕಾರಿಗಳು ದಾಲಿ ನಡೆಸಿದ್ದಾರೆ.

ಇದನ್ನೂ ಓದಿ:IT Raid: ಕೆಜಿಎಫ್​ ಬಾಬು ನಿವಾಸದಲ್ಲಿ ಐಟಿ ಅಧಿಕಾರಿಗಳಿಗೆ ಸಿಕ್ತು 5000 ರೇಷ್ಮೆ‌ ಸೀರೆ, 2000ಕ್ಕೂ ಹೆಚ್ಚು ಡಿಡಿ

ಬಾಲಾಜಿ ​ ಕಾರ್ಖಾನೆ ಪಾಲುದಾರರ ಮನೆ ಮೇಲೆ ಐಟಿ ದಾಳಿ

ಹೌದು ಒಂದು ಕಡೆ ಬಾಲಾಜಿ ಸಕ್ಕರೆ ಕಾರ್ಖಾನೆ ನಿರ್ದೇಶಕರ ಮನೆ ಮೇಲೆ ಐಟಿ ದಾಳಿ ನಡೆಯುತ್ತಿದ್ದರೆ. ಇತ್ತ ಆನಂದ ನಗರದಲ್ಲಿರುವ ಬಾಲಾಜಿ ಶುಗರ್ಸ್ ಸಕ್ಕರೆ ಕಾರ್ಖಾನೆಯ ಪಾಲುದಾರ ದಿ.ನಂದಕುಮಾರ ಪಾಟೀಲ್ ಮನೆಯಲ್ಲಿಯೂ ಕೂಡ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ