AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರದಿಂದ ಪದಚ್ಯುತಿ ಆಗೋದು ಬೊಮ್ಮಾಯಿಗೆ ಬರಬಾರದು ಎಂದಾದರೆ, 2ಎ ಮೀಸಲಾತಿ ನೀಡಲಿ: ಯತ್ನಾಳ್

ಸಿಎಂ ಬಸವರಾಜ ಬೊಮ್ಮಾಯಿ ಕೊಟ್ಟ ಮಾತಿನಂತೆ ನಡೆದರೆ ಸರಿ. ಇಲ್ಲದಿದ್ದರೆ ಡಿ.22ರಂದು ಏನು ಮಾಡಬೇಕೆಂದು ನಿರ್ಣಯ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಅಧಿಕಾರದಿಂದ ಪದಚ್ಯುತಿ ಆಗೋದು ಬೊಮ್ಮಾಯಿಗೆ ಬರಬಾರದು ಎಂದಾದರೆ, 2ಎ ಮೀಸಲಾತಿ ನೀಡಲಿ: ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್, ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Dec 18, 2022 | 7:02 PM

Share

ಬಾಗಲಕೋಟೆ: ಸಿಎಂ ಬಸವರಾಜ ಬೊಮ್ಮಾಯಿ (CM Bommai) ಕೊಟ್ಟ ಮಾತಿನಂತೆ ನಡೆದರೆ ಸರಿ. ಇಲ್ಲದಿದ್ದರೆ ಡಿ.22ರಂದು ಏನು ಮಾಡಬೇಕೆಂದು ನಿರ್ಣಯ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದಲ್ಲಿ ಅವರು ಮಾತನಾಡಿ, ಕಳೆದ ಬಾರಿ ಮುಖ್ಯಮಂತ್ರಿ ಆಗಿದ್ದವರು ನಮಗೆ ಮೋಸ ಮಾಡಿದರು. 6 ತಿಂಗಳೊಳಗೆ ಮೀಸಲಾತಿ ಕೊಡುತ್ತೇನೆ ಅಂತೇಳಿ ಮೋಸ ಮಾಡಿದ್ರು. ನಮಗೆ ಮೋಸ ಮಾಡಿದ್ದಕ್ಕೆ ಅಧಿಕಾರದಿಂದಲೇ ಪದಚ್ಯುತಿ ಆದರು. ಸಿಎಂ ಬಸವರಾಜ ಬೊಮ್ಮಾಯಿಗೂ ಇಂತಹ ಪರಿಸ್ಥಿತಿ ಬರಬಾರದು. 25 ಲಕ್ಷ ಜನ ಸುವರ್ಣ ಸೌಧದ ಪ್ರತಿಭಟನೆ ವೇಳೆ ಸೇರುವ ನಿರೀಕ್ಷೆ ಇದೆ. 22ಕ್ಕೆ ದಾಖಲೆ ರೀತಿಯಲ್ಲಿ ನಮ್ಮ ಜನ ಸೇರುತ್ತದೆ ಅದಕ್ಕೆ ಉತ್ತರ ಕೊಡಬೇಕಾಗುತ್ತದೆ. ಗಡುವು ಕೊಡಬೇಕಾಗುತ್ತದೆ ಎಲ್ಲವೂ ಒಮ್ಮೆಲೆ ಆಗೋದಿಲ್ಲ ಎಂದು ಹೇಳಿದರು.

2. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಮಾತಾಡುವ ನೈತಿಕತೆಯಿಲ್ಲ 

ಸುವರ್ಣ ಸೌಧದಲ್ಲಿ ವೀರ ಸಾವರ್ಕರ್ ಭಾವಚಿತ್ರ ಅನಾವರಣಕ್ಕೆ ಡಿ.ಕೆ.ಶಿವಕುಮಾರ್​ ವಿರೋಧಿ ಹೇಳಿಕೆ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ವೀರ ಸಾವರ್ಕರ್, ಅಂಬೇಡ್ಕರ್ ತ್ಯಾಗದಿಂದ ಇವರು ಐವತ್ತು ವರ್ಷ ಅಧಿಕಾರ ಅನುಭವಿಸಿದ್ದಾರೆ. ಮಾನ ಮರ್ಯಾದೆ ಇದ್ರೆ ಸಾವರ್ಕರ್ ಬಗ್ಗೆ ಮಾತಾಡೋದು ಬಿಡಬೇಕು. ವಿಧಾನಸೌಧ, ಸುವರ್ಣ ಸೌಧ, ಸಂಸತ್​ನಲ್ಲೂ ಫೋಟೋ ಹಾಕಿದಿವಿ. ಇಂದಿರಾಗಾಂಧಿ ಕೂಡ ಸಾವರ್ಕರ್ ಸ್ಟಾಂಪ್ ಬಿಡುಗಡೆ ಮಾಡಿದಾರೆ.

ಇದನ್ನೂ ಓದಿ: ಸುವರ್ಣಸೌಧದಲ್ಲಿ ಸಾವರ್ಕರ್​ ಫೋಟೋ? ಪಟ್ಟು ಬಿಡದ ಬಿಜೆಪಿ: ಸರ್ಕಾರವನ್ನು ಹಣಿಯಲು ಸಿದ್ದವಾದ ಕಾಂಗ್ರೆಸ್​​

ಇಂದಿರಾಗಾಂಧಿ ತಮ್ಮ ಪತ್ರದಲ್ಲಿ ಕೋಟ್ ಮಾಡಿದ್ದಾರೆ. ಈ ದೇಶದ ಕಠಿಣ ಶಿಕ್ಷೆಗೆ ಒಳಗಾದ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅಂತ ಹೇಳಿದಾರೆ‌‌. ಆದ್ದರಿಂದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಜೈಲಿಗೆ ಹೋಗಿ ಬಂದ ಭ್ರಷ್ಟರಿಗೆ ಮಾತಾಡುವ ನೈತಿಕತೆಯಿಲ್ಲ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಯಡಿಯೂರಪ್ಪರಿಂದ 10 ಕೋಟಿ ರೂ ವಸೂಲಿ: ಅಧಿವೇಶನದಲ್ಲಿ ವಚನಾನಂದ ಸ್ವಾಮಿ ಬಣ್ಣ ಬಯಲು ಮಾಡುತ್ತೇನೆ ಎಂದ ಯತ್ನಾಳ್

3. ಸೋನಿಯಾ ಗಾಂಧಿಗೂ ಭಾರತ ದೇಶಕ್ಕೂ ಏನ್​ ಸಂಬಂಧ: ಯತ್ನಾಳ್​ ತಿರುಗೇಟು

ಇನ್ನು ಕರ್ನಾಟಕಕ್ಕೂ ಸಾವರ್ಕರ್​ಗೂ ಏನು ಸಂಬಂಧ ಹೇಳಿಕೆ ವಿಚಾರಕ್ಕೆ ಯತ್ನಾಳ್​ ತಿರುಗೇಟು ನೀಡಿದ್ದು, ಸೋನಿಯಾ ಗಾಂಧಿಗೂ ಭಾರತ ದೇಶಕ್ಕೂ ಏನ್​ ಸಂಬಂಧ. ಮಹಾರಾಷ್ಟ್ರ ರಾಜ್ಯದಲ್ಲಿ ಬಹಳಷ್ಟು ಸತ್ಪುರುಷರು ಹುಟ್ಟಿದ್ದಾರೆ. ಸರ್ದಾರ್​​ ಪಟೇಲ್​ ಗುಜರಾತ್​, ಅಂಬೇಡ್ಕರ್​ ಮಹಾರಾಷ್ಟ್ರದವರು. ಯಾರು ಎಲ್ಲಿ ಹುಟ್ಟಿದರು ಎಂಬುವುದು ಮುಖ್ಯವಲ್ಲ. ಕೋಟ್ಯಂತರ ಜನರ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ವಿ.ಡಿ.ಸಾವರ್ಕರ್ ಇತಿಹಾಸ ಓದಿದವರಿಗೆ ಅವರ ಬಗ್ಗೆ ಗೊತ್ತಿದೆ. ರಾಹುಲ್, ಡಿ.ಕೆ.ಶಿವಕುಮಾರ್​ 1 ತಿಂಗಳು ಆ ಜೈಲಿನಲ್ಲಿದ್ದು ಬರಲಿ. ವಿ.ಡಿ.ಸಾವರ್ಕರ್​ ಗಾಣದ ಎತ್ತಿನ ರೀತಿ ಶಿಕ್ಷೆ ಅನುಭವಿಸಿದ್ದಾರೆ. ಕಾಲಪಾನಿ ಶಿಕ್ಷೆ ಎದುರಿಸಿ ಸಾವರ್ಕರ್ ಕುಟುಂಬ ತ್ಯಾಗ ಮಾಡಿದೆ ಎಂದು ಕಿಡಿಕಾರಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ