AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳಚೆ ನೀರಲ್ಲಿ ಶಾಲಾ ವಿದ್ಯಾರ್ಥಿಗಳು ಪ್ಲೇಟ್ ತೊಳೆದ ವೈರಲ್ ಫೋಟೋ ಅಸಲಿಯತ್ತು ಬಿಚ್ಚಿಟ್ಟ ಬಿಇಓ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಬಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳ ಫೋಟೋವೊಂದು ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಬಿಸಿಯೂಟದ ನಂತರ ಮಕ್ಕಳು ಚರಂಡಿಯ ಪಕ್ಕದಲ್ಲಿರುವ ಪೈಪ್ ನೀರಿಗೆ ತಮ್ಮ ಊಟದ ತಟ್ಟೆಗಳನ್ನು ತೊಳೆಯುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಅಧಿಕಾರಿಗಳು ಶಾಲೆ ದೌಡಾಯಿಸಿ ಪರಿಶಿಲಿಸಿದ್ದಾರೆ. ಬಳಿಕ ಕೊಳಚೆ ನೀರಲ್ಲಿ ಪ್ಲೇಟ್ ತೊಳೆದಿರುವ ವೈರಲ್ ಫೋಟೋ ಹಿಂದಿನ ಅಸಲಿಯತ್ತು ಬಿಚ್ಚಿಟ್ಟಿದ್ದಾರೆ.

ಕೊಳಚೆ ನೀರಲ್ಲಿ ಶಾಲಾ ವಿದ್ಯಾರ್ಥಿಗಳು ಪ್ಲೇಟ್ ತೊಳೆದ ವೈರಲ್ ಫೋಟೋ ಅಸಲಿಯತ್ತು ಬಿಚ್ಚಿಟ್ಟ ಬಿಇಓ
ಆಲಬಾಳ ಸರ್ಕಾರಿ ಪ್ರಾಥಮಿಕ ಶಾಲೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Jan 29, 2026 | 5:27 PM

Share

ಬಾಗಲಕೋಟೆ, (ಜನವರಿ 29): ಜಿಲ್ಲೆಯ ಆಲಬಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳು(School Students) ಬಿಸಿಯೂಟದ (midday meal) ನಂತರ ಚರಂಡಿ ಪಕ್ಕದಲ್ಲಿ ತಟ್ಟೆ ತೊಳೆಯುತ್ತಿರುವ ಪೋಟೋ ವೈರಲ್ ಆಗಿದೆ. ಶಾಲೆಯಲ್ಲಿ ಸೂಕ್ತ ನೀರಿನ ವ್ಯವಸ್ಥೆ ಇಲ್ಲದಿರುವುದು ಈ ದುಸ್ಥಿತಿಗೆ ಕಾರಣವಾಗಿದ್ದು, ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಕಿಡಿಕಾರಿದ್ದಾರೆ. ಇದು ಮಕ್ಕಳ ಹಕ್ಕು ಆಯೋಗದ ಗಮನಕ್ಕೂ ಬಂದಿದ್ದು, ಕೂಡಲೇ ಬಾಗಲಕೋಟೆ ಜಿಲ್ಲಾಡಳಿತಕ್ಕೆ ಪತ್ರ ಬರೆದು ಘಟನೆ ಬಗ್ಗೆ ಗಮನಹರಿಸಬೇಕು. ಹಾಗೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಲು ಕೂಡಲೇ ಸೂಚನೆ ನೀಡಬೇಕು ಎಂದು ತಿಳಿಸಿದೆ. ಇದರ ಬೆನ್ನಲ್ಲೇ ಜಮಖಂಡಿ ಬಿ ಇ ಒ ಅಶೋಕ ಬಸಣ್ಣವರ್ , ಶಾಲೆಗೆ ಓಡೋಡಿ ಬಂದು ಪರಿಶೀಲಿಸಿದ್ದು, ಮಕ್ಕಳು ಚರಂಡಿ ನೀರಲ್ಲಿ ಪ್ಲೇಟ್ ತೊಳೆದಿಲ್ಲ. ಬದಲಾಗಿ ಚರಂಡಿ ಪಕ್ಕದ ಫಿಲ್ಟರ್ ನೀರಿನ ಪೈಪ್ ನಲ್ಲಿ ಪ್ಲೇಟ್ ತೊಳೆದಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಕೊಳಚೇ ನೀರಲ್ಲಿ ಪ್ಲೇಟ್ ತೊಳೆದ ಬಗ್ಗೆ ಬಿಇಓ ಹೇಳಿದ್ದೇನು?

ಜಿಲ್ಲಾಡಳಿತ ಸೂಚನೆ ಮೇರೆಗೆ ಜಮಖಂಡಿ ಬಿ ಇ ಒ ಅಶೋಕ ಬಸಣ್ಣವರ್ , ಆಲಬಾಳ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು. ಶಾಲೆಯಲ್ಲಿ ಪ್ರತ್ಯೇಕ ಕುಡಿಯುವ ನೀರಿನ ವ್ಯವಸ್ಥೆ ಇದೆ. ಹಾಗೇ ಪ್ಲೇಟ್ ತೊಳೆಯಲು ವ್ಯವಸ್ಥೆ ಇದೆ. ಮಕ್ಕಳು ಚರಂಡಿ ನೀರಲ್ಲಿ ಪ್ಲೇಟ್ ತೊಳೆದಿಲ್ಲ. ಬದಲಾಗಿ ಚರಂಡಿ ಪಕ್ಕದ ಫಿಲ್ಟರ್ ನೀರಿನ ಪೈಪ್ ನಲ್ಲಿ ಪ್ಲೇಟ್ ತೊಳೆದಿದ್ದಾರೆ. ಈ ಕುರಿತು ಮೇಲಾಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಇದನ್ನೂ ನೋಡಿ: ಆಂಜನೇಯನ ದೇವಸ್ಥಾನದಲ್ಲಿ ಭಕ್ತರಿಗೆ ವಿಶೇಷ ದರ್ಶನ ಕೊಟ್ಟ ವಾನರ!

ಡಿಸಿಗೆ ಪತ್ರ ಬರೆದಿದ್ದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ

ಬಿಸಿಯೂಟ ಮಾಡಿದ ಬಳಿಕ ಕೆಲ ವಿದ್ಯಾರ್ಥಿಗಳು ಕೊಳಚೆ ನೀರಿನಲ್ಲಿ ಪ್ಲೇಟ್ ತೊಳೆದಿರುವ ಫೋಟೋ ವೈರಲ್ ಆಗಿರುವುದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಗಮನಕ್ಕೆ ಬಂದಿತ್ತು. ಕೂಡಲೇ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬಿ ಅವರು ಬಾಗಲಕೋಟೆ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ಆಲಬಾಳ ಶಾಲೆಯಲ್ಲಿ ನಡೆದ ಈ ಘಟನೆ ಬಗ್ಗೆ ಗಮನಹರಿಸಬೇಕು. ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಲು ಕೂಡಲೇ ಸೂಚನೆ ನೀಡಬೇಕು. ಎಸ್ ಡಿ ಎಮ್ ಸಿ ಹಾಗೂ ಶಾಲಾ ಶಿಕ್ಷಕರ ವಿರುದ್ದ ಇಲಾಖಾ ನಿಯಮಾನುಸಾರ ಕ್ರಮ ಜರುಗಿಸಿ. ಕೈಗೊಂಡ ಕ್ರಮದ ವರದಿ ಆಯೋಗಕ್ಕೆ ಪುನಃ ತಿಳಿಸಲು ಪತ್ರದ ಮೂಲಕ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಜಿಲ್ಲಾಧಿಕಾರಿ, ಜಮಖಂಡಿ ಬಿಇಓಗೆ ಕರೆ ಮಾಡಿ ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಇನ್ನು ಆಲಬಾಳ ಶಾಲೆಯ ವಿದ್ಯಾರ್ಥಿಗಳು ಬಿಸಿಯೂಟ ಸೇವಿಸಿ ಬಳಿಕ ಪ್ಲೇಟ್ ಕೊಳಚೆ ನೀರಿನಲ್ಲಿ ತೊಳೆಯುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಆಗಿತ್ತು.  ಇದು ಭಾರೀ ಸುದ್ದು ಮಾಡಿದ್ದು,  ಶಿಕ್ಷಣ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ, ಛೀಮಾರಿ ಹಾಕಿದ್ದಾರೆ. ಬಿಸಿಯೂಟದ ನಂತರ ಪ್ಲೇಟ್ ತೊಳೆಯಲು ಸೂಕ್ತ ಸ್ಥಳ ಅಥವಾ ನೀರಿನ ಸೌಲಭ್ಯ ಕಲ್ಪಿಸದೆ ಶಾಲಾ ಸುಧಾರಣಾ ಸಮಿತಿ (SDMC) ಹಾಗೂ ಶಿಕ್ಷಕರ ನಿರ್ಲಕ್ಷ್ಯ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದರು. ಮಕ್ಕಳು ಕೊಳಚೆ ನೀರಿನ ಪಕ್ಕದಲ್ಲೇ ನಿಂತಿರುವುದು ಅವರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದರು.

ಕರ್ನಾಟದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!