AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಕನೂರು SBI ದರೋಡೆ ಕೇಸ್​​: ಮತ್ತಿಬ್ಬರು ಆರೋಪಿಗಳು ಲಾಕ್​​; ಹಣ, ಬಂಗಾರ ಜಪ್ತಿ

ಬಾಗಲಕೋಟೆಯ ಕಾಕನೂರು ಎಸ್‌ಬಿಐ ದರೋಡೆ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಗಳಿಂದ 25 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ, ಹಣ ಹಾಗೂ ದರೋಡೆಗೆ ಬಳಸಿದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, 62 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ ಮತ್ತು ಹಣ ವಶಪಡಿಸಿಕೊಳ್ಳಲಾಗಿದೆ.

ಕಾಕನೂರು SBI ದರೋಡೆ ಕೇಸ್​​: ಮತ್ತಿಬ್ಬರು ಆರೋಪಿಗಳು ಲಾಕ್​​; ಹಣ, ಬಂಗಾರ ಜಪ್ತಿ
SBI ಶಾಖೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Dec 25, 2025 | 3:34 PM

Share

ಬಾಗಲಕೋಟೆ, ಡಿಸೆಂಬರ್​​ 25: ಕಾಕನೂರು ಗ್ರಾಮದಲ್ಲಿ ಎಸ್​​ಬಿಐ ದರೋಡೆ ಪ್ರಕರಣ ಸಂಬಂಧ ಇಬ್ಬರು ಖತರ್ನಾಕ್​​ ಕಳ್ಳರನ್ನು ಬಾದಾಮಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಚಿಕಲಿ ತಾಲೂಕಿನ ನಯಗಾಂವ್ ನಿವಾಸಿಗಳಾದ ಅಕ್ಷಯ್ ಅಂಬೋರೆ ಮತ್ತು ಕುನಾಲ್ ಚವ್ಹಾಣ್ ಬಂಧಿತ ಆರೋಪಿಗಳು. ಬಂಧಿತರಿಂದ ಹಣ, ಚಿನ್ನಾಭರಣ, ವಾಹನ ಸೇರಿ ಹಲವು ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಘಟನೆ ಏನು?

2025ರ ಸೆಪ್ಟೆಂಬರ್​​ 2ರಂದು ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಕಾಕನೂರಿನ ಎಸ್​​ಬಿಐ ಲಾಕರ್​​ ಒಡೆದು ಚಿನ್ನಾಭರಣ ಮತ್ತು ಹಣ ದರೋಡೆ ಮಾಡಲಾಗಿತ್ತು. ಸಿಸಿ ಕ್ಯಾಮರಾಗಳಿಗೆ ಸ್ಪ್ರೇ ಹೊಡೆದು, ಮೊಬೈಲ್​​ ಬಳಕೆ ಮಾಡದೆ, ಫಿಂಗರ್​​ ಪ್ರಿಂಟ್​​ ಕೂಡ ಸಿಗದ ರೀತಿಯಲ್ಲಿ ಆರೋಪಿಗಳು ಬ್ಯಾಂಕ್​​ನಲ್ಲಿ ಕಳವು ಮಾಡಿದ್ದರು. ಕಳ್ಳತನ ನಡೆಸುವ ಆರು ತಿಂಗಳ ಹಿಂದೆಯೇ ಬ್ಯಾಂಕ್​​ಗೆ ಬಂದು ಹೇಗೆ ಕನ್ನ ಹಾಕಬಹುದು ಎಂದು ತಂತ್ರ ರೂಪಿಸಿದ್ದರು.

ಇದನ್ನೂ ಓದಿ: ಬ್ಯಾಂಕ್​ಗಳ​ ರಾಬರಿ ಪ್ರಕರಣ; ಅಂತಾರಾಜ್ಯ ಕಳ್ಳರು ಅಂದರ್​

ಈವರೆಗೆ ನಾಲ್ವರು ಆರೋಪಿಗಳ ಬಂಧನ

ಬಂಧಿತ ಆರೋಪಿಗಳಿಂದ 25 ಲಕ್ಷ 90 ಸಾವಿರ ಮೌಲ್ಯದ ಚಿನ್ನಾಭರಣ, ಹಣ, ಕಳ್ಳತನಕ್ಕೆ ಬಳಸಿದ್ದ ಕಾರು, ಗ್ಯಾಸ್ ಕಟರ್, ಕಂಟ್ರಿಮೇಡ್ ಗನ್, ಎರಡು ಜೀವಂತ‌ಗುಂಡು, ರಾಡ್ ಸೇರಿ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದೇ ಪ್ರಕರಣ ಸಂಬಂಧ ಈ ಹಿಂದೆ ಬಾಗಲಕೋಟೆ ಜಿಲ್ಲಾ ಪೊಲೀಸರು ಉತ್ತರ‌ ಪ್ರದೇಶದ ಕಕ್ರಾಳ ಗ್ರಾಮದ ಮಹಮ್ಮದ ನವಾನ್ ಹಾಗೂ ಕಮರುಲ್‌ಖಾನ್ ಎಂಬವರನ್ನು ಬಂಧಿಸಿದ್ದರು. ಒಟ್ಟು ನಾಲ್ವರು ಆರೋಪಿಗಳಿಂದ 62 ಲಕ್ಷ 20 ಸಾವಿರ ಮೌಲ್ಯದ 472.20 ಗ್ರಾಂ ಚಿನ್ನಾಭರಣ ಸೇರಿ ಹಣ ಜಪ್ತಿ ಮಾಡಲಾಗಿದೆ. ಆರೋಪಿಗಳು ಬೇರೆ ಬೇರೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಇವರಿಗೆ ಜೈಲಿನಲ್ಲಿ ಪರಸ್ಪರ ಪರಿಚಯವಾಗಿತ್ತು ಎಂದು ಪೊಲೀಸ್​​ ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು