AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ಕಾರ್ಯಕರ್ತರ ಮಟ್ಟದಲ್ಲೂ ಅಸಮಾಧಾನ: ಚಿಗುರಿದ ಕೇಸರಿ ಸಮಿತಿ, ಯತ್ನಾಳ್​ ಬೆಂಬಲ

ಬಾಗಲಕೋಟೆಯಲ್ಲಿ ಬಿಜೆಪಿ ಕಾರ್ಯಕರ್ತರು "ಕೇಸರಿ ಸಮಿತಿ"ಯನ್ನು ರಚಿಸಿ ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಸೂಕ್ತ ಸ್ಥಾನಮಾನವಿಲ್ಲದಿರುವುದು ಇದಕ್ಕೆ ಕಾರಣ. ದಾವಣಗೆರೆ, ತುಮಕೂರು, ಮೈಸೂರಿನಲ್ಲಿ ಬೃಹತ್ ಸಭೆಗಳನ್ನು ಏರ್ಪಡಿಸುವ ಯೋಜನೆ ಇದೆ. ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಪ್ರಮೋದ್ ಮುತಾಲಿಕ್ ಅವರು ಈ ಸಮಿತಿಗೆ ಬೆಂಬಲ ನೀಡಿದ್ದಾರೆ.

ಬಿಜೆಪಿಯಲ್ಲಿ ಕಾರ್ಯಕರ್ತರ ಮಟ್ಟದಲ್ಲೂ ಅಸಮಾಧಾನ: ಚಿಗುರಿದ ಕೇಸರಿ ಸಮಿತಿ, ಯತ್ನಾಳ್​ ಬೆಂಬಲ
ಕೇಸರಿ ಸಮಿತಿ ಸಭೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Aug 03, 2025 | 6:54 PM

Share

ಬಾಗಲಕೋಟೆ, ಆಗಸ್ಟ್​ 03: ಬಿಜೆಪಿ (BJP) ಪಕ್ಷದಲ್ಲಿ ಈಗ ಆಂತರಿಕ ಸಮರ ಜೋರಾಗಿದೆ. ಕೆಲವು ನಾಯಕರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುತ್ತಿದ್ದಾರೆ. ಈ ಬೆನ್ನಲ್ಲೇ ಇದೀಗ ಕಾರ್ಯಕರ್ತರೂ ಕೂಡ ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗದ ಕಾರ್ಯಕರ್ತರು ಕೇಸರಿ ಸಮಿತಿ ಎಂಬ ಹೆಸರಿನಲ್ಲಿ ಬಾಗಲಕೋಟೆಯ (Bagalakot) ಮಾರವಾಡಿ ಗಲ್ಲಿಯಲ್ಲಿರುವ ಮಾಹೇಶ್ವರಿ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದರು. ಈ ಮೂಲಕ ರಾಜ್ಯ ಬಿಜೆಪಿ ವಿರುದ್ಧ ಮತ್ತೊಂದು ಅತೃಪ್ತ ಟೀಮ್​ ಹುಟ್ಟಿಕೊಂಡಿದೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರು ಸಭೆಯಲ್ಲಿ ಭಾಗಿಯಾದರು. ಮುಂದಿನ ದಿನಗಳಲ್ಲಿ ದಾವಣಗೆರೆ, ತುಮಕೂರು, ಮೈಸೂರಿನಲ್ಲಿ ಬೃಹತ್​ ಸಭೆ ಮಾಡಲು ನಿರ್ಧರಿಸಲಾಯಿತು. ಕ್ಷತ್ರಿಯ, ಒಬಿಸಿ, ಹಿಂದೂ ಕಾರ್ಯಕರ್ತರಿಗೆ ಸ್ಥಾನಮಾನ ನೀಡಬೇಕು. ಸ್ಥಾನಮಾನ ನೀಡದಿದ್ದರೇ ಪರಿಣಾಮ ಎದುರಿಸಬೇಕಾಗುತ್ತೆ ಎಂದು ಸಭೆ ಬಳಿಕ ಕಾರ್ಯಕರ್ತರು ಪಕ್ಷಕ್ಕೆ ಎಚ್ಚರಿಕೆ ನೀಡಿದರು.

ಈ ಅಸಮಾಧಾನಿತರು ಒಂದು ತಿಂಗಳ ಹಿಂದೆಯೇ ದೇಶದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಚಿವರಾದ ಪ್ರಲ್ಹಾದ್​ ಜೋಷಿ ಸೇರಿದಂತೆ ಪ್ರಮುಖರಿಗೆ ಪತ್ರ ಬರೆದಿದ್ದಾರೆ. ಆದರೆ ಆ ಕಡೆಯಿಂದ ಯಾವುದೇ ಉತ್ತರ ಬಂದಿಲ್ಲ. ಇದರಿಂದ ಮತ್ತಷ್ಟು ಅಸಮಾಧಾನಗೊಂಡಿದ್ದಾರೆ.

ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ: ಮೊಯ್ಲಿ ಕಾರ್ಯಕ್ರಮದಲ್ಲಿ ಜಗಳಬಂದಿ

ಈ ನಡುವೆ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಹ ಕೇಸರಿ ಸಮಿತಿಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಕೇಸರಿ ಸಮಿತಿ ಜೊತೆ ಮಾತಾಡಿದ್ದು ತನು, ಮನ, ಧನದಿಂದ ಬೆಂಬಲ ನೀಡೋದಾಗಿ ಹೇಳಿದ್ದಾರೆ. ಹಿಂದುತ್ವದ ವಿಷಯವಾಗಿ ಯತ್ನಾಳ ಅವರಿಗೆ ತಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದು ಶ್ರೀರಾಮಸೇನೆಯ ಪ್ರಮೋದ ಮುತಾಲಿಕ್ ಸಹ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?