ಬಾಗಲಕೋಟೆ: ಕಾರಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ, ವ್ಯಕ್ತಿ ಸಜೀವದಹನ

| Updated By: ಕಿರಣ್ ಹನುಮಂತ್​ ಮಾದಾರ್

Updated on: May 11, 2024 | 8:52 PM

ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ನಡೆದಿದೆ. ಸಂಗನಗೌಡ ಗೌಡರ್​(50) ಎಂಬುವವರು ಮೃತ ರ್ದುದೈವಿ. ಇತ್ತ ಕೊಪ್ಪಳ ಮತ್ತು ದಕ್ಷಿಣ ಕನ್ನಡದಲ್ಲಿ ತಲಾ ಒಬ್ಬರಂತೆ ಇಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯವಾಗಿದೆ.

ಬಾಗಲಕೋಟೆ: ಕಾರಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ, ವ್ಯಕ್ತಿ ಸಜೀವದಹನ
ಕಾರಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ, ವ್ಯಕ್ತಿ ಸಜೀವದಹನ
Follow us on

ಬಾಗಲಕೋಟೆ, ಮೇ.11: ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ಸಂಗನಗೌಡ ಗೌಡರ್​(50) ಎಂಬುವವರು ಸಜೀವ ದಹನವಾಗಿದ್ದಾರೆ.
ಇನ್ನು ಬಾಗಲಕೋಟೆಯಿಂದ ಚಿಕ್ಕಮಾಗಿ ಕಡೆ ಹೊರಟಿದ್ದ py 05 y 8181 ನಂಬರಿನ ಕಾರು ಇದಾಗಿದ್ದು, ತಾಂತ್ರಿಕ ದೋಷದಿಂದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.  ಈ ಕುರಿತು ಬಾಗಲಕೋಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿದೆ.​

ಸಿಡಿಲಿಗೆ ರೈತ ಬಲಿ

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇಮುಕರ್ತಿನನಾಳ ಗ್ರಾಮದಲ್ಲಿ ಸಿಡಿಲಿಗೆ ರೈತನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಸಿಡಿಲು ಬಡಿದು ರೈತ ಕನಕಪ್ಪ ಕಾಟಾಪುರ(22) ಮೃತ. ಗ್ರಾಮದ ಹೊರವಲಯದಲ್ಲಿ ಕೃಷಿ ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಕುರಿತು ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಪುತ್ತೂರಿನಲ್ಲಿ ಯುವಕನ ಅನುಮಾನಾಸ್ಪದ ಸಾವು; ಮೃತನ ತಾಯಿ ಸೇರಿದಂತೆ ಮೂವರು ವಶಕ್ಕೆ

ಕಡಬದಲ್ಲಿ ಸಿಡಿಲಿಗೆ ಓರ್ವ ಬಲಿ, ಮತ್ತಿಬ್ಬರಿಗೆ ಗಾಯ

ದಕ್ಷಿಣ ಕನ್ನಡ: ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನಡೆದಿದೆ. ನದಿ ಬದಿಯ ಶೆಡ್‌ನಲ್ಲಿದ್ದ ಬಿಹಾರ ಮೂಲದ ಕೂಲಿ ಕಾರ್ಮಿಕ ಕೊನೆಯುಸಿರೆಳೆದಿದ್ದಾನೆ. ಮರಳು ತೆಗೆಯುವ ಕೆಲಸ ಮಾಡುತ್ತಿದ್ದ ಬಿಹಾರ ಮೂಲದವರು, ಈ ವೇಳೆ ದುರ್ಘಟನೆ ನಡೆದಿದೆ. ಇನ್ನು ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿಡಿಲು ಬಡಿದು 5 ಮೇಕೆಗಳು ಸಾವು, ರೈತನಿಗೆ ಗಾಯ

ರಾಯಚೂರು: ಲಿಂಗಸುಗೂರು ತಾಲೂಕಿನ ಜಂಗಿರಾಂಪುರ ತಾಂಡಾದಲ್ಲಿ ಸಿಡಿಲು ಬಡಿದು 5 ಮೇಕೆಗಳು ಸಾವನ್ನಪ್ಪಿದ್ದು, ರೈತ ಹನುಮಂತಗೆ ಗಾಯವಾಗಿದೆ. ಕೂಡಲೇ ಆತನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಜೆ ಹೊಲದಲ್ಲಿದ್ದ ವೇಳೆ ಈ ಘಟನೆ ನಡೆದಿದೆ. ಈ ಕುರಿತು ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:48 pm, Sat, 11 May 24