AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ತತ್ತರಿಸಿದ ಬಾಗಲಕೋಟೆ; 38 ಕುಟುಂಬಗಳ ಸ್ಥಳಾಂತರ, ಮುಳುಗುವ ಭೀತಿಯಲ್ಲಿ ಸಂಗಮೇಶ್ವರ ದೇಗುಲ

ಮಳೆ ತಂದ ಅವಾಂತರ ಒಂದೆರೆಡಲ್ಲ. ಕೊರೊನಾದಿಂದ ಚೇತರಿಕೆ ಕಾಣುತ್ತಿದ್ದ ಜನರ ಬಾಳಲ್ಲಿ ಮಳೆ ದೊಡ್ಡ ಆಘಾತ ತಂದಿದೆ. ಬೋಟ್‌ಗಳ ಸಹಾಯದಿಂದ ಜಾನುವಾರು, ಅಗತ್ಯವಸ್ತುಗಳ ಸಮೇತ ಜನರ ಸ್ಥಳಾಂತರ ಮಾಡಲಾಗಿದೆ. ಬೋಟ್ಗೆ ಕಟ್ಟಿದ್ದರಿಂದ ನದಿಯಲ್ಲಿ ಈಜುತ್ತಾ ಕೆಲ ಜಾನುವಾರುಗಳು ಸಾಗಿದೆ.

ಮಳೆಗೆ ತತ್ತರಿಸಿದ ಬಾಗಲಕೋಟೆ; 38 ಕುಟುಂಬಗಳ ಸ್ಥಳಾಂತರ, ಮುಳುಗುವ ಭೀತಿಯಲ್ಲಿ ಸಂಗಮೇಶ್ವರ ದೇಗುಲ
ಬಾಗಲಕೋಟೆಯ ಮಿರ್ಜಿ ಗ್ರಾಮಕ್ಕೆ ನೀರು ನುಗ್ಗಿತ್ತು (ಸಂಗ್ರಹ ಚಿತ್ರ)
TV9 Web
| Edited By: ಆಯೇಷಾ ಬಾನು|

Updated on: Jul 25, 2021 | 7:43 AM

Share

ಬಾಗಲಕೋಟೆ: ಕರ್ನಾಟಕದ ಕೆಲ ಭಾಗಗಳಲ್ಲಿ ಭಾರಿ ಮಳೆ ಸಂಭವಿಸುತ್ತಿದ್ದು ಜನ ಜೀವನ ತತ್ತರಿಸಿದೆ. ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ನಡುಗಡ್ಡೆಯಾದ ಗ್ರಾಮದಲ್ಲಿ ಸಿಲುಕಿದ್ದ ಜನರನ್ನು ಸ್ಥಳಾಂತರಿಸಲಾಗಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿ ಮುತ್ತೂರಿನಲ್ಲಿದ್ದ 38 ಕುಟುಂಬಗಳ ಸ್ಥಳಾಂತರ ಕಾರ್ಯ ನಡೆದಿದೆ.

ಮಳೆ ತಂದ ಅವಾಂತರ ಒಂದೆರೆಡಲ್ಲ. ಕೊರೊನಾದಿಂದ ಚೇತರಿಕೆ ಕಾಣುತ್ತಿದ್ದ ಜನರ ಬಾಳಲ್ಲಿ ಮಳೆ ದೊಡ್ಡ ಆಘಾತ ತಂದಿದೆ. ಬೋಟ್‌ಗಳ ಸಹಾಯದಿಂದ ಜಾನುವಾರು, ಅಗತ್ಯವಸ್ತುಗಳ ಸಮೇತ ಜನರ ಸ್ಥಳಾಂತರ ಮಾಡಲಾಗಿದೆ. ಬೋಟ್ಗೆ ಕಟ್ಟಿದ್ದರಿಂದ ನದಿಯಲ್ಲಿ ಈಜುತ್ತಾ ಕೆಲ ಜಾನುವಾರುಗಳು ಸಾಗಿದೆ.

20 ಶೆಡ್‌ಗಳು ಜಲಾವೃತ ಇನ್ನು ಮತ್ತೊಂದೆಡೆ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ನಗರಕ್ಕೆ ಮಳೆ ನೀರು ನುಗ್ಗಿದ್ದು ಕುಂಬಾರಗಲ್ಲಿಯಲ್ಲಿ 20 ಶೆಡ್‌ಗಳು ಜಲಾವೃತಗೊಂಡಿವೆ. ನಿವಾಸಿಗಳು ವಸ್ತುಗಳನ್ನು ತೆಗೆದುಕೊಂಡು ಬೇರೆಡೆ ಹೊರಟಿದ್ದಾರೆ.

bgk rain

ಶೆಡ್‌ಗಳು ಜಲಾವೃತ

ತ್ರಿವಳಿ ನದಿಗಳ ಅಬ್ಬರದಿಂದಾಗಿ ತ್ರಿವೇಣಿ ಸಂಗಮದಲ್ಲಿ ಭೀತಿ ಹೆಚ್ಚಾಗಿದೆ. ಯಾವುದೇ ಕ್ಷಣದಲ್ಲಾದರೂ ಪ್ರಸಿದ್ದ ಐತಿಹಾಸಿಕ ಕೂಡಲಸಂಗಮದ ಸಂಗಮೇಶ್ವರ ದೇಗುಲ ಜಲಾವೃತವಾಗುವ ಸಾಧ್ಯತೆ ಇದೆ. ದೇವಸ್ಥಾನ ಜಲಾವೃತಕ್ಕೆ ಇನ್ನೂ ಮೂರೇ ಮೆಟ್ಟಿಲು ಬಾಕಿ ಇದೆ. ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಗಳು ಸಂಗಮ ಆಗಿರುವ ಕ್ಷೇತ್ರವಿದು. ಇನ್ನು ಕೂಡಲಸಂಗಮದ 13 ಗ್ರಾಮಗಳಿಗೆ ನೀರು ನುಗ್ಗುವ ಅಪಾಯವಿದೆ. ಕೆಂಗಲ್, ಕಜಗಲ್, ವರಗೊಡದಿನ್ನಿ, ಹೂವನೂರ, ನಂದನೂರ, ಗಂಜಿಹಾಳ, ಇದ್ದಲಗಿ, ಕಮದತ್ತ, ಅಡವಿಹಾಳ, ಎಮ್ಮೆಟ್ಟಿ, ಚವಡಕಮಲದಿನ್ನಿ, ಬಿಸಲದಿನ್ನಿ, ವಳಕಲದಿನ್ನಿ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.

ಇನ್ನು ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮಿರ್ಜಿ ಗ್ರಾಮದಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಘಟಪ್ರಭಾ ನದಿ ನೀರು ಮಿರ್ಜಿ ಗ್ರಾಮಕ್ಕೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಗ್ರಾಮ ಜಲಾವೃತ ಹಿನ್ನೆಲೆ ಸುರಕ್ಷಿತ ಸ್ಥಳಕ್ಕೆ ಜನರು ತೆರಳ್ತಿದ್ದಾರೆ.

bgk rain

ಅಗತ್ಯವಸ್ತುಗಳ ಸಮೇತ ಜನರ ಸ್ಥಳಾಂತರ

ಇದನ್ನೂ ಓದಿ: ಉದ್ಘಾಟನೆಗೊಂಡ ಒಂದೇ ದಿನಕ್ಕೆ ಕಿತ್ತು ಹೋಯ್ತು 30 ಕೋಟಿ ರೂ. ವೆಚ್ಚದ ರಸ್ತೆ; ಕಮರ್ಷಿಯಲ್​ ಸ್ಟ್ರೀಟ್​ನ ಹೊಸ ರಸ್ತೆಗೆ ದುರಸ್ತಿ ಭಾಗ್ಯ

Follow Us
TV9 Web
TV9 Web

TV9 Kannada

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು