AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಡಾ. ಮೀರಾತಾಯಿ ಕೊಪ್ಪಿಕರ್ ನಿಧನ

ಮುಧೋಳ ನಗರದ ರುಕ್ಮಿಣಿಬಾಯಿ ವಾತ್ಸಲ್ಯಧಾಮದ ಹಿರಿಯಚೇತನ ಡಾ. ಮೀರಾತಾಯಿ ಕೊಪ್ಪಿಕರ್ (೯೬) ನಿಧನರಾಗಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಡಾ. ಮೀರಾತಾಯಿ ಕೊಪ್ಪಿಕರ್ ನಿಧನ
ಡಾ. ಮೀರಾತಾಯಿ ಕೊಪ್ಪಿಕರ್
TV9 Web
| Edited By: ವಿವೇಕ ಬಿರಾದಾರ|

Updated on:Aug 19, 2022 | 3:30 PM

Share

ಬಾಗಲಕೋಟ: ಮುಧೋಳ (Mudhol) ನಗರದ ರುಕ್ಮಿಣಿಬಾಯಿ ವಾತ್ಸಲ್ಯಧಾಮದ ಹಿರಿಯಚೇತನ ಡಾ. ಮೀರಾತಾಯಿ ಕೊಪ್ಪಿಕರ್ (೯೬) ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮದ್ಯಾಹ್ನ ೧೨.೩೦ ರ ಸುಮಾರಿಗೆ ನಿಧನರಾಗಿದ್ದಾರೆ. ಡಾ ಮೀರಾತಾಯಿ ಕೊಪ್ಪಿಕರ್ ಅವರು ಮಹಾತ್ಮ ಗಾಂಧಿಜಿ (Mahatam Gandhi) ಅವರ ಅನುಯಾಯಿಯಾಗಿದ್ದು, ವಿನೋಬಾ ಭಾವೆ (Vinodha Bhave) ಅವರ ಭೂದಾನ ಚಳುವಳಿಯಲ್ಲಿ ಭಾಗಿಯಾಗಿದ್ದರು.

ಇವರು ಮಹಾತ್ಮ ಗಾಂಧಿಜಿ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು. ವಿನೋಬಾ ಬಾವೆ ಅವರ ಹೋರಾಟದಿಂದ ಪ್ರಭಾವಿತರಾಗಿದ್ದರು. ಮೂಲತಃ ಹುಬ್ಬಳ್ಳಿ ಧಾರವಾಡದವರಾದ ಇವರು ಕಳೆದ ೪೫ ವರ್ಷದಿಂದ ಆಶ್ರಮದಲ್ಲಿ ನೆಲೆಸಿದ್ದರು.

೨೦೦೮-೨೦೦೯ ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ೨೦೨೧-೨೨ ರಲ್ಲಿ ಇವರಿಗೆ ಗಾಂಧಿ ಪುರಸ್ಕಾರ ಲಭಿಸಿತ್ತು. ಈ ಪುರಸ್ಕಾರವನ್ನು ಸ್ವತಃ ಅಂದಿನ ಮುಖ್ಯಮಂತ್ರಿ ಬಿ ಎಸ್​​ ಯಡಿಯೂರಪ್ಪ ಅವರು ಬಂದು ಪ್ರಶಸ್ತಿ ಪ್ರಧಾನ ಮಾಡಿದ್ದರು. ಈ ಸಮಯದಲ್ಲಿ ಪ್ರಶಸ್ತಿ ಮೊತ್ತ ನಿರಾಕರಣೆ ಮಾಡಿದ್ದರು.

ಮದುವೆ ಸಂಸಾರ ಕುಟುಂಬದಿಂದ ದೂರವಿದ್ದ ಇವರು ತಾವೆ ಬಟ್ಟೆ ನೇಯ್ದು ಉಡುತ್ತಿದ್ದರು. ದೇಶ ವಿದೇಶದಿಂದ ಜನರು ಬಂದು ವಾತ್ಸಲ್ಯಧಾಮದಲ್ಲಿ ನೆಲೆಸಿ, ಮೀರಾತಾಯಿ ಅವರಿಂದ ಮಾರ್ಗದರ್ಶನ ಪಡೆದು ಹೋಗುತ್ತಿದ್ದರು. ದೇಶಾಭಿಮಾನ, ಜಾತ್ಯಾತೀತತೆ, ದೇಶಿ ಸಂಸ್ಕೃತಿ ಬಗ್ಗೆ ದೇಶ ವಿದೇಶಿಗರು ಮಾರ್ಗದರ್ಶನ ಪಡೆಯುತ್ತಿದ್ದರು.

ಇವರ ಅಂತ್ಯಕ್ರಿಯೆ ಇಂದು ಸಂಜೆ ೪ ಗಂಟೆಗೆ ವಾತ್ಸಲ್ಯಧಾಮದಲ್ಲಿ ನಡೆಯಲಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Fri, 19 August 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ