AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾದಾಮಿ: ಪತಿ ಕಿರುಕುಳಕ್ಕೆ ಬೇಸತ್ತು 3 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಪತಿ ಕಿರುಕುಳದಿಂದ ಬೇಸತ್ತ ಪತ್ನಿ ತನ್ನ ಮೂರು ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುಂತಹ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಕೆರೂರು ಬಳಿ ಘಟನೆ ನಡೆದಿದೆ. ಮೃತ ಮಗಳ ಪೋಷಕರು ಪತಿ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾರೆ. ಕೆರೂರು ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ಬಾದಾಮಿ: ಪತಿ ಕಿರುಕುಳಕ್ಕೆ ಬೇಸತ್ತು 3 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಮೃತ ತಾಯಿ ಮತ್ತು ಮಗು
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Oct 22, 2025 | 3:34 PM

Share

ಬಾಗಲಕೋಟೆ, ಅಕ್ಟೋಬರ್​​ 22: ಪತಿ ಕಿರುಕುಳದಿಂದ ಬೇಸತ್ತು 3 ವರ್ಷದ ಮಗನ ಜೊತೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಚೆನ್ನಮ್ಮ ದೇವಿ ದೇವಸ್ಥಾನದ ಬಳಿ ನಡೆದಿದೆ. ತಾಯಿ ಫಾತಿಮಾ(21) ಮತ್ತು ಪುತ್ರ ಅಬ್ದುಲ್ (3) ಮೃತರು. ಮಗಳ ಸಾವಿಗೆ ಪತಿ (husband) ಮಸ್ತಾನ್​​ ಸಾಬ್ ಕಿರುಕುಳವೇ ಕಾರಣ ಎಂದು ಫಾತಿಮಾ ಪೋಷಕರು ಆರೋಪಿಸಿದ್ದಾರೆ. ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದದ್ದೇನು?

8 ವರ್ಷದ ಹಿಂದೆ ಜಮೇಲಾ ಎಂಬ ಯುವತಿಯೊಂದಿಗೆ ಮಸ್ತಾನ್​ ಸಾಬ್​​ ಮದುವೆ ಆಗಿದ್ದ. 5 ತಿಂಗಳ ಗರ್ಭಿಣಿಯಾಗಿದ್ದ ಫಾತಿಮಾಳನ್ನು ಪ್ರೀತಿಸಿ ವಿವಾಹವಾಗಿದ್ದ. ಗ್ರಾಮಸ್ಥರ ಸಮ್ಮುಖದಲ್ಲೇ ಮದುವೆ ಆಗಿದ್ದ. ಇತ್ತೀಚೆಗೆ ಫಾತಿಮಾಳಿಗೆ ಪತಿ ಮಸ್ತಾನ್​ ಸಾಬ್​​ ಹೆಚ್ಚು ಕಿರುಕುಳ ನೀಡುತ್ತಿದ್ದ ಆರೋಪ ಕೂಡ ಕೇಳಿಬಂದಿದೆ. ಪತಿ ಕಿರುಕುಳದಿಂದ ಬೇಸತ್ತು ಮೂರು ದಿನ ಹಿಂದೆ ಫಾತಿಮಾ ತವರಿಗೆ ಬಂದಿದ್ದಳು. ಮಗಳು ಫಾತಿಮಾ ಸಾವಿಗೆ ಪತಿ ಕಿರುಕುಳವೇ ಕಾರಣ ಎಂದು ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮದುವೆಯಾದ 11 ತಿಂಗಳಿಗೆ ಸಾವಿನ ಮನೆ ಸೇರಿದ ಗೃಹಿಣಿ

11 ತಿಂಗಳಿಂದಷ್ಟೆ ನೂರಾರು ಕನಸುಗಳನ್ನ ಕಟ್ಟಿಕೊಂಡು ಮನೆಯವರು ನೋಡಿದ ಯುವಕನ ಜೊತೆ ದಾಂಪತ್ಯ ಜೀವನಕ್ಕೆ ಯುವತಿ ಕಾಲಿಟ್ಟಿದ್ದಳು. ಇನ್ನೊಂದು ತಿಂಗಳು ಕಳೆದಿದ್ದರೆ ಮೊದಲನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನ ಸಹ ಆಚರಿಸಿಕೊಳ್ಳಬೇಕಿತ್ತು. ಆದರೆ ಅಷ್ಟರಲ್ಲಿ ಅತ್ತೆ ಮತ್ತು ಗಂಡನ ಕಿರುಕುಳು ಗೃಹಿಣಿ ವಿಡಿಯೋ ಮಾಡಿಟ್ಟು ಆಹಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿತ್ತು.

ವೇಣು ಎಂಬುವವರ ಜೊತೆಗೆ ನವಂಬರ್ 2024 ರಲ್ಲಿ ಪುಷ್ಪಾಂಜಲಿ ಹಸೆಮಣೆ ಏರಿದ್ದಳು. ಆರಂಭದಲ್ಲಿ ಚೆನ್ನಾಗೆ ಇದ್ದ ಗಂಡ ನಂತರ ತನ್ನ ಮನೆಯವರ ಜೊತೆ ಸೇರಿಕೊಂಡು ಅಸಲಿ ಆಟ ಶುರುಮಾಡಿಕೊಂಡಿದ್ದು ನಿತ್ಯ ಹಣ ಬೇಕು, ಸೈಟ್ ಬೇಕು ಅಂತ ಪುಷ್ಪಾಂಜಲಿಗೆ ಕಿರುಕುಳ ನೀಡಲು ಆರಂಭಿಸಿದನಂತೆ. ಅಲ್ಲದೆ ಎಷ್ಟೇ ಹೇಳಿದರೂ ತವರು ಮನೆಯಿಂದ ಸೈಟ್ ತೆಗೆಸಿಕೊಡುತ್ತಿಲ್ಲ ಅಂತ ಕಳೆದ 9 ತಿಂಗಳಿನಿಂದ ಗೃಹಿಣಿಯ ಜೊತೆ ಸಂಸಾರ ಮಾಡುವುದನೇ ಬಿಟ್ಟಿದ್ನಂತೆ.

ಇದನ್ನೂ ಓದಿ: ಲೇಡಿ ವಾರ್ಡನ್ ಲವ್ವಿಡವ್ವಿ ಫೋಟೋ, ವಿಡಿಯೋ ಇಟ್ಟುಕೊಂಡಿದ್ದಕ್ಕೆ ಸಹಾಯಕ ಕೊಲೆಯಾದ್ನಾ?

ತಾಳಿ ಕಟ್ಟಿದ ಪತ್ನಿ ಅನ್ನೋದನ್ನು ನೋಡದೆ ಹೀನಾಯಮಾನವಾಗಿ ಪತ್ನಿ ಜೊತೆ ನಡೆದುಕೊಂಡ ಗಂಡನಿಂದ ಪತ್ನಿ ಸಾಕಷ್ಟು ಮನನೊಂದಿದ್ದು ಎರಡು ಮೂರು ಭಾರಿ ಮನೆಯವರಿಗೂ ಹೇಳಿದ್ದಳಂತೆ. ಆದರೆ ಸಂಸಾರ ಅಂದ ಮೇಲೆ ಇದೆಲ್ಲ ಇರೋದೆ ಅಂತ ಮನೆಯವರೇ ಮಗಳಿಗೆ ಬುದ್ಧಿವಾದ ಹೇಳಿ ಕಳೆದ ತಿಂಗಳು ಗಂಡನ ಮನೆಗೆ ಕಳಿಸಿದ್ದರು. ಆದರೆ ಗಂಡನ ಮನೆಗೆ ಬಂದ ನಂತರವೂ ತಮ್ಮ ಹಳೆ ಚಾಳಿಯನ್ನ ಕುಟುಂಬಸ್ಥರು ಮುಂದುವರೆಸಿದ್ದು, ಮನೆಯವರು ಕಿರುಕುಳ ತಾಳಲಾರದ ಪುಷ್ಪಾ ಕಾಲೇಜಿಗೆ ಕೆಲಸಕ್ಕೆ ಅಂತ ಹೋದವಳು ವಾಪಸ್ ಬಂದಿರಲಿಲ್ಲ. ಎಲ್ಲೆಡೆ ಹುಡುಕಾಡಿದ ಪೋಷಕರಿಗೆ ಘಾಟಿ ಸುಬ್ರಮಣ್ಯದ ವಿಶ್ವೇಶ್ವರಯ್ಯ ಪಿಕಪ್ ಡ್ಯಾಂ ನಲ್ಲಿ ಮೃತದೇಹ ಪತ್ತೆ ಆಗಿತ್ತು.

ಸದ್ಯ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಮೃತಳ ಪೋಷಕರು ವರದಕ್ಷಿಣೆ ಕಿರುಕುಳ ಮತ್ತು ಸಾವಿಗೆ ಪ್ರಚೋದನೆ ಸಂಬಂಧ ಗಂಡ ಮತ್ತು ಆತನ ಕುಟುಂಬಸ್ಥರ ವಿರುದ್ದ ಪ್ರಕರಣ ದಾಖಲಿಸಿದ್ದು, ಗಂಡ ವೇಣು ಮತ್ತು ಮಾವ ಗೋವಿಂದಪ್ಪನನ್ನ ವಶಕ್ಕೆ ಪಡೆದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!