AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮಗಳಲ್ಲಿ ಹೊಸ ಮದ್ಯದಂಗಡಿ ತೆರೆಯುವ ವಿಚಾರ ಚರ್ಚಾ ಹಂತದಲ್ಲಿದೆ: ಅಬಕಾರಿ ಸಚಿವ

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯದಂಗಡಿ ತೆರೆಯುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಹಾಗೇ ಸಾರ್ವಜನಿಕ ವಲಯದಿಂದಲೂ ವಿರೋಧಗಳು ವ್ಯಕ್ತವಾಗುತ್ತಿದೆ. ಈ ಬಗ್ಗೆ ಅಬಕಾರಿ ಸಚಿವ ಆರ್​ಬಿ ತಿಮ್ಮಾಪುರ ಬಾಗಲಕೋಟೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಗ್ರಾಮಗಳಲ್ಲಿ ಹೊಸ ಮದ್ಯದಂಗಡಿ ತೆರೆಯುವ ವಿಚಾರ ಚರ್ಚಾ ಹಂತದಲ್ಲಿದೆ: ಅಬಕಾರಿ ಸಚಿವ
ಸಚಿವ ಆರ್​​ ಬಿ ತಿಮ್ಮಾಪುರ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Sep 25, 2023 | 3:04 PM

Share

ಬಾಗಲಕೋಟೆ ಸೆ.25: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯದಂಗಡಿ (Liquor store) ತೆರೆಯುವ ಸರ್ಕಾರದ (Government) ನಿರ್ಧಾರವನ್ನು ವಿರೋಧಿಸಿ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಹಾಗೇ ಸಾರ್ವಜನಿಕ ವಲಯದಿಂದಲೂ ವಿರೋಧಗಳು ವ್ಯಕ್ತವಾಗುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಯಾಗುತ್ತಿದೆ. ಈ ಬಗ್ಗೆ ಸ್ವತಃ ಅಬಕಾರಿ ಇಲಾಖೆ (Department of Excise) ಸಚಿವರೇ ಸ್ಪಷ್ಟನೆ ನೀಡಿದ್ದಾರೆ. ನಮ್ಮ ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲಿ ಪಾಕೇಟ್​​​ನಲ್ಲಿಟ್ಟು ಕದ್ದುಮುಚ್ಚಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಗ್ರಾಹಕರಿಗೆ ಹೊರೆ ಆಗುತ್ತಿದೆ. ಇದನ್ನು ತಪ್ಪಿಸುವುದು ಹೇಗೆ ಎಂಬುವುದರ ಬಗ್ಗೆ ವಿಚಾರ ಮಾಡುತ್ತಿದ್ದಾಗ, ಆ ಏರಿಯಾದಲ್ಲಿ ಮದ್ಯದ ಅಂಗಡಿ ತರೆಯಲು ಅನುಮತಿ ಕೊಟ್ಟರೆ ಅನುಕೂಲ ಆಗುತ್ತದೆ ಎನ್ನುವ ಸಲಹೆ ಬಂದಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ (RB Timmapure) ತಿಳಿಸಿದರು.

ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇದನ್ನು ಅನುಷ್ಠಾನಕ್ಕೆ ತರಬೇಕೋ ಅಥವಾ ಬೇಡವೋ ಎಂಬುವುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಶೀಘ್ರದಲ್ಲೆ ಈ ಬಗ್ಗೆ ತೀರ್ಮಾನ ಮಾಡುತ್ತೇವೆ. ಇನ್ನು ಮದ್ಯದ ಅಂಗಡಿಗಳನ್ನು ಬಂದ್​ ಮಾಡಬೇಕೆಂದು ಹಳ್ಳಿಗಳಲ್ಲಿ ಜನರು ಒತ್ತಾಯಿಸುತ್ತಿದ್ದಾರೆ. ಆದರೆ ಹೇಗೆ ಬಂದ್ ಮಾಡಬೇಕು ಅನ್ನುವುದನ್ನು ಸಲಹೆ ಕೊಡಲಿ. ಕುಡಿಯುವವರು ಕುಡಿಯುತ್ತಾರೆ ಎಂದು ಹೇಳಿದರು.

ಗ್ರಾಹಕರಿಗೆ ಹೊರೆ ಆಗುವುದನ್ನು ಗಮನ ಕೊಡಬೇಕಲ್ಲ. ಪಾಪ ಕುಡುಕರು ತಮ್ಮಲ್ಲಿ‌ ಮದ್ಯ ಸಿಗಲ್ಲ ಅಂತ ದೂರದ ಊರಿಗೆ ಹೋಗಿ, ಹತ್ತು ರೂಪಾಯಿಗೆ ಸಿಗುವುದನ್ನು 15 ರೂ. ಕೊಟ್ಟು ಮದ್ಯ ಕೊಂಡುಕೊಳ್ಳುತ್ತಿದ್ದಾರೆ. ಜನಸಂಖ್ಯೆ ಹೆಚ್ಚಾಗಿದ್ದು, ಮದ್ಯದಂಗಡಿ ಕಡಿಮೆ ಆಗಿವೆ. ಒಂದೊಂದು ಅಂಗಡಿಗೆ ಎರಡು, ಮೂರು ರೂಪಾಯಿ ಆಗುತ್ತೆ. ಮಧ್ಯವರ್ಗದವರಿಗೆ ಈ ಬಿಜಿನೆಸ್ ಮಾಡಲು ಆಗುತ್ತಿಲ್ಲ ಎಂದರು.

ಇದನ್ನೂ ಓದಿ: ದೇಶದ ಇತರ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಮದ್ಯದ ಬೆಲೆ ಹೆಚ್ಚು: ವರದಿ

ಸರ್ಕಾರದಲ್ಲಿ ದುಡ್ಡು ಇಲ್ಲ, ಹಣ ಸಂಗ್ರಹಿಸಲು ಮದ್ಯದಂಗಡಿ ಮೊರೆ ಹೋಗುತ್ತಿದೆ ಎಂಬ ಟೀಕೆ ವಿಚಾರವಾಗಿ ಮತನಾಡಿ, ಅವರು ಅಧಿಕಾರದಲ್ಲಿ ಇದ್ದಾಗ ಹಣ ಎಲ್ಲಿಂದ ತರುತ್ತಿದ್ದರು? ಏನ್ ಮ್ಯಾಲಿಂದ ಉದುರಿಸುತಿದ್ರಾ? ಅವರು ಮಾಡಿದ್ದನ್ನೇ ನಾವು ಮಾಡುತ್ತಿದ್ದೇವೆ. ಅವರು ಬೆಲೆ ಏರಿಸಿದ್ದಾರೆ, ನಾವು ಬೆಲೆ ಏರಿಸಿದ್ದೇವೆ. ಗ್ರಾಹಕರಿಗೆ ಹೊರೆಯಾಗದ ಹಾಗೆ ನಾವು ವಿಚಾರ ಮಾಡುತ್ತಿದ್ದೇವೆ. ಮದ್ಯದ ಗಡಿ ತೆರೆದ ತಕ್ಷಣ ಕುಡುಕರ ಬರುತ್ತಾರೇನು? ಎಂದು ಪ್ರಶ್ನಿಸಿದರು.

ಮಾಲ್​ಗಳಲ್ಲಿ ಮಾರುವುದರ ಬಗ್ಗೆಯೂ ಸಹ ಇನ್ನು ಚರ್ಚೆಯಲ್ಲಿದೆ. ಅಂಗಡಿಗಳಲ್ಲಿ 10 ರೂ. ಕೊಟ್ಟು ಕೊಂಡುಕೊಳ್ಳುವ ಗ್ರಾಹಕರು, ಮಾಲ್​​ಗಳಲ್ಲಿ ಹೋದರೇ 15 ರೂ. ಕೊಡಬೇಕು. ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿ ಮದ್ಯದ ಅಂಗಡಿ ತೆರಯುವ ವಿಚಾರ ಚರ್ಚೆಯಲ್ಲಿ ಇದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:00 pm, Mon, 25 September 23

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More