ಬಾಗಲಕೋಟೆ: ನವಜಾತ ಗಂಡು ಶಿಶು ಎಸೆದು ಪರಾರಿಯಾಗಲು ಯತ್ನಿಸಿದ ಬಾಣಂತಿ, ಪೋಷಕರು; ಸ್ಥಳೀಯರಿಂದ ತರಾಟೆ

ಹೊಲದಲ್ಲಿ ನವಜಾತ ಗಂಡು ಶಿಶುವನ್ನು ಎಸೆದು ಪರಾರಿಯಾಗಲು ಯತ್ನಿಸಿದ ಬಾಣಂತಿ ಮತ್ತು ಆಕೆಯ ಸಹೋದರನನ್ನು ಸ್ಥಳೀಯರು ಹಿಡಿದು ತರಾಟೆಗೆ ತೆಗೆದುಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆ: ನವಜಾತ ಗಂಡು ಶಿಶು ಎಸೆದು ಪರಾರಿಯಾಗಲು ಯತ್ನಿಸಿದ ಬಾಣಂತಿ, ಪೋಷಕರು; ಸ್ಥಳೀಯರಿಂದ ತರಾಟೆ
ಬಾಗಲಕೋಟೆಯಲ್ಲಿ ಹೊಲದಲ್ಲಿ ನವಜಾತ ಗಂಡು ಶಿಶುವನ್ನು ಎಸೆದು ಪರಾರಿಯಾಗಲು ಯತ್ನಿಸಿದ ಬಾಣಂತಿ ಮತ್ತು ಆಕೆಯ ಪೋಷಕರಿಗೆ ಸ್ಥಳೀಯರಿಂದ ತರಾಟೆ (ಸಾಂದರ್ಭಿಕ ಚಿತ್ರ)
Edited By: Rakesh Nayak Manchi

Updated on: Aug 06, 2023 | 6:57 PM

ಬಾಗಲಕೋಟೆ, ಆಗಸ್ಟ್ 6: ಹೊಲದಲ್ಲಿ ನವಜಾತ ಗಂಡು ಶಿಶುವನ್ನು (Newborn) ಎಸೆದು ಪರಾರಿಯಾಗಲು ಯತ್ನಿಸಿದ ಬಾಣಂತಿ ಮತ್ತು ಆಕೆಯ ಪೋಷಕರನ್ನು ಸ್ಥಳೀಯರು ಹಿಡಿದು ತರಾಟೆಗೆ ತೆಗೆದುಕೊಂಡ ಘಟನೆ ಬಾಗಲಕೋಟೆ (Bagalkot) ತಾಲೂಕಿನ ಬೆನಕಟ್ಟಿ ಗ್ರಾಮದ ಬಳಿ ನಡೆದಿದೆ. ಅಕ್ರಮ ಸಂಬಂಧದಿಂದ ಮಹಿಳೆ ಗರ್ಭಿಣಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಸಂಗೊಂದಿ ಗ್ರಾಮದ ಬಾಣಂತಿ ಹಾಗೂ ಆಕೆಯ ಸಹೋದರ ಬೆನಕಟ್ಟಿ ಗ್ರಾಮದ ಬಳಿ ಇರುವ ಹೊಲಕ್ಕೆ ಬಂದು ನವಜಾತ ಗಂಡು ಶಿಶುವನ್ನು ಎಸೆದು ಪರಾರಿಯಾಗಲು ಯತ್ನಿಸಿದ್ದಾರೆ. ಇದನ್ನು ನೋಡಿದ ಸ್ಥಳೀಯರು, ಬಾಣಂತಿ ಮತ್ತು ಪೋಷಕರನ್ನು ತಾರಾಟೆಗೆ ತೆಗೆದುಕೊಂಡಿದ್ದು, ಆಕೆಯ ಸಹೋದರನಿಗೆ ಕಪಾಳಮೋಕ್ಷ ಮಾಡಿದ್ದಾರೆ.

ಇದನ್ನೂ ಓದಿ: Kalaburagi News: ತಿಪ್ಪೆಗುಂಡಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ; ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಅಧಿಕಾರಿಗಳು ದೌಡು

ನಂತರ ಸ್ಥಳೀಯರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು, ಪರಿಶೀಲನೆ ನಡೆಸಿದ್ದಾರೆ. ನಂತರ ಬಾಣಂತಿ ಹಾಗೂ ನವಜಾತ ಶಿಶುವನ್ನು ಆ್ಯಂಬುಲೆನ್ಸ್​​ ಮೂಲಕ ಜಿಲ್ಲಾಸ್ಪತ್ರೆಗೆ ಕೊಂಡೊಯ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 pm, Sun, 6 August 23

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us