AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆಗೆ ಮನೆಯಲ್ಲಿ ವಿರೋಧ: ಒಂದೇ ಮರಕ್ಕೆ ನೇಣಿಗೆ ಶರಣಾದ ಪ್ರೇಮಿಗಳು

ಬೆಳಗ್ಗೆ ಸಪ್ತಪದಿ ತುಳಿದು ಮಧ್ಯಾಹ್ನದ ವೇಳೆಗೆ ಮಚ್ಚಿನಿಂದ ಹೊಡೆದಾಡಿಕೊಂಡಿದ್ದು, ಘಟನೆಯಲ್ಲಿ ವಧು ಮೃತಪಟ್ಟಿರುವ ಆಘಾತಕಾರಿ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಇದಕ್ಕೆ ವಿರುದ್ಧವೆಂಬಂತೆ ಮನೆಯವರು ಮದುವೆಗೆ ಒಪ್ಪಲಿಲ್ಲವೆಂದು ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಮದ್ವೆಗೆ ಮನೆಯಲ್ಲಿ ವಿರೋಧ: ಒಂದೇ ಮರಕ್ಕೆ ನೇಣಿಗೆ ಶರಣಾದ ಪ್ರೇಮಿಗಳು
ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ರವಿ ಹೆಚ್ ಮೂಕಿ, ಕಲಘಟಗಿ
| Updated By: ರಮೇಶ್ ಬಿ. ಜವಳಗೇರಾ|

Updated on: Aug 09, 2024 | 2:41 PM

Share

ಬಾಗಲಕೋಟೆ, (ಆಗಸ್ಟ್​ 09): ಮನೆಯಲ್ಲಿ ತಮ್ಮ ಮದುವೆ ಒಪ್ಪಲಿಲ್ಲವೆಂದು ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ನಡೆದಿದೆ. ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಮೃತ ಪ್ರೇಮಿಗಳು. ಇವರಿಬ್ಬರ ಜಾತಿ ಬೇರೆಯಾಗಿದ್ದರಿಂದ ಹುಡುಗನ ಮನೆಯವರು ಅಂತರ್ಜಾತಿ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಜೋಡಿ ಸಾವಿನ ಹಾದಿ ಹಿಡಿದಿದೆ.

ಇದನ್ನೂ ಓದಿ: ಶಿವಮೊಗ್ಗ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಸಚಿನ್‌ ದಳವಾಯಿ, ಪ್ರಿಯಾ ಮಡಿವಾಳರ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಪರಸ್ಪರ ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧಾರ ತೆಗೆದುಕೊಂಡಿದ್ದರು. ಇಬ್ಬರದ್ದು ಬೇರೆ ಬೇರೆ ಜಾತಿಯಾಗಿದ್ದರಿಂದ ಸಚಿನ್‌ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯವನ್ನು ಸಚಿನ್‌, ತಮ್ಮ ಪ್ರೇಯಸಿ ಪ್ರಿಯಾಳಿಗೆ ತಿಳಿಸಿದ್ದಾನೆ. ಇದರಿಂದ ಮನನೊಂದ ಪ್ರೇಮಿಗಳು ಗುರುವಾರ ರಾತ್ರಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ವಿಷಯ ತಿಳಿದು ಸ್ಥಳಕ್ಕೆ ಮಹಾಲಿಂಗಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ