AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಯಲ್ಲಿ ಮುಸ್ಲಿಮರು ಸೋಲಲ್ಲ, ಅವರನ್ನು ಸೋಲಿಸ್ತಾರೆ: ಮಹೇಶ್ವರಾನಂದ ಸ್ವಾಮೀಜಿ

ಮುಸ್ಲಿಮರು ಚುನಾವಣೆಯಲ್ಲಿ ಸೋಲುವುದಿಲ್ಲ, ಅವರನ್ನು ಸೋಲಿಸಲಾಗುತ್ತದೆ ಎಂದು ಮಹೇಶ್ವರಾನಂದ ಸ್ವಾಮೀಜಿ ಆರೋಪಿಸಿದ್ದಾರೆ. ರಾಜ್ಯದಲ್ಲಿ ಒಂದು ಕೋಟಿ ಮುಸ್ಲಿಂ ಜನಸಂಖ್ಯೆ ಇದ್ದರೂ ಕೇವಲ 10 ಶಾಸಕರಿದ್ದಾರೆ. ಇತರ ಸಮುದಾಯಗಳ ಪ್ರಾತಿನಿಧ್ಯಕ್ಕೆ ಹೋಲಿಸಿದರೆ ಇದು ಬಹಳ ಕಡಿಮೆ. ಮುಂದಿನ ಬಾರಿ 30 ಮುಸ್ಲಿಂ ಶಾಸಕರಾಗಬೇಕು ಎಂದು ಕರೆ ನೀಡಿದ ಅವರು, ಮುಸ್ಲಿಂರನ್ನ ಬಿಟ್ಟು ಭವಿಷ್ಯದ ಭಾರತ ನಿರ್ಮಾಣ ಸಾಧ್ಯವಿಲ್ಲ ಎಂದಿದ್ದಾರೆ.

ಚುನಾವಣೆಯಲ್ಲಿ ಮುಸ್ಲಿಮರು ಸೋಲಲ್ಲ, ಅವರನ್ನು ಸೋಲಿಸ್ತಾರೆ: ಮಹೇಶ್ವರಾನಂದ ಸ್ವಾಮೀಜಿ
ಮಹೇಶ್ವರಾನಂದ ಸ್ವಾಮೀಜಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Dec 24, 2025 | 4:03 PM

Share

ಬಾಗಲಕೋಟೆ, ಡಿಸೆಂಬರ್​​ 24: ದೇಶದ ಮೂವತ್ತು ಕೋಟಿ ಮುಸ್ಲಿಮರನ್ನ ಬಿಟ್ಟು ಭವಿಷ್ಯದ ಭಾರತ ನಿರ್ಮಾಣ ಸಾಧ್ಯವಿಲ್ಲ. ರಾಜ್ಯದಲ್ಲಿ ಒಂದು ಕೋಟಿ ಜನ ಮುಸ್ಲಿಂ ಜನಸಂಖ್ಯೆ ಇದ್ದರೂ ಕೇವಲ 10 ಜನ ಶಾಸಕರಿದ್ದಾರೆ. ಮುಸಲ್ಮಾನರು ಚುನಾವಣೆಯಲ್ಲಿ ಸೋಲುವುದಿಲ್ಲ, ಅವರನ್ನು ಸೋಲಿಸಲಾಗುತ್ತೆ ಎಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಮಹೇಶ್ವರಾನಂದ ಸ್ವಾಮೀಜಿ ಹೇಳಿದ್ದಾರೆ.

ಸ್ವಾಮೀಜಿ ಹೇಳಿದ್ದೇನು?

ರಾಜ್ಯದಲ್ಲಿ ಲಿಂಗಾಯತರು ಕೇವಲ 66 ಲಕ್ಷ ಜನ ಇದ್ದಾರೆ. ಆದರೆ ಅವರ ಸಮುದಾಯದ 59 ಜನ ಶಾಸಕರಿದ್ದಾರೆ. 60 ಲಕ್ಷ ಜನಸಂಖ್ಯೆಯಿರುವ ಒಕ್ಕಲಿಗರ 46 ಜನ ಎಂಎಲ್​​ಎಗಳಿದ್ದಾರೆ. 15 ಲಕ್ಷ ಇರುವ ಬ್ರಾಹ್ಮಣ ಸಮುದಾಯದ 10 ಶಾಸಕರಿದ್ದಾರೆ. ಆದ್ರೆ ಮುಸ್ಲಿಂ ಸಮುದಾಯದಿಂದ ಈ ಸಂಖ್ಯೆ ಬಹಳ ಕಡಿಮೆ ಇದೆ. ಚುನಾವಣೆ ಸಂದರ್ಭದಲ್ಲಿ ಕೇವಲ 15 ಜನ ಮುಸಲ್ಮಾನರಿಗೆ ಕಾಂಗ್ರೆಸ್ ಪಕ್ಷ‌ ಟಿಕೆಟ್ ಕೊಡುತ್ತೆ. ಅದರಲ್ಲಿ 9 ಜನ ಗೆಲ್ತಾರೆ 6 ಜನ ಸೋಲ್ತಾರೆ. ಆದರೆ ಮುಂದಿನ ಬಾರಿ ಮುಸ್ಲಿಂ ಸಮುದಾಯದ 30 ಜನ ಶಾಸಕರಾಗಬೇಕು ಎಂದು ಸ್ವಾಮೀಜಿ ಕರೆ ನೀಡಿದ್ದಾರೆ.

ಇದನ್ನೂ ಓದಿ: ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿಗೆ ಲೋಕಾಯುಕ್ತ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತು ಇದೆ ಗೊತ್ತೇ?

ಗಂಗಾವತಿಯಲ್ಲಿ ಇಕ್ಬಾಲ್‌ ಅನ್ಸಾರಿ ಸೋಲುವುದಿಲ್ಲ, ಅವರನ್ನ ಸೋಲಿಸಲಾಗುತ್ತೆ. ವಿಜಯಪುರದಲ್ಲೂ ಹಮೀದ ಮುಷರಫಿ ಅವರ ಸ್ಥಿತಿ ಇದೇ ಆಗಿದೆ. ಆದರೆ ವಿಜಯಪುರದ ಸಿದ್ಧೇಶ್ವರ ಸ್ವಾಮೀಜಿ ಆಣೆಗೂ ಹಮೀದ ಮುಷರಫಿ ಅವರನ್ನು ಸೋಲಿಸುವವರನ್ನ ಮುಂದಿನ ಬಾರಿ ನಾವು ಸೋಲಿಸುತ್ತೇವೆ ಎಂದು ಹೇಳುವ ಮೂಲಕ ಸ್ವಾಮೀಜಿ ಪರೋಕ್ಷವಾಗಿ ಯತ್ನಾಳ್​​ರನ್ನ ಬೆಂಬಲಿಸುವ ನಾಯಕರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಟಿಪ್ಪು ಸುಲ್ತಾನ್​​ ಮತ್ತು ಅಬ್ದುಲ್​​ ಕಲಾಂ ಅವರ ಸಾಧನೆ ಬಗ್ಗೆಯೂ ಈ ವೇಳೆ ಉಲ್ಲೇಖಿಸಿರುವ ಅವರು, ಟಿಪ್ಪು ಸುಲ್ತಾನ್​​ ಕುರಿತು ನಟ ಶಾರುಖ್ ಖಾನ್ ಸಿನೆಮಾ ಮಾಡಬೇಕೆಂದೂ ಮನವಿ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:01 pm, Wed, 24 December 25

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!