AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ಯೆ ನೋಡಲು ಬಂದಿದ್ದ ಯುವಕ ಸಾವು; ಮಗನ ಶವ ಕಂಡು ಕಣ್ಣೀರಿಟ್ಟ ಕುಟುಂಬಸ್ಥರು

ಪ್ರತಾಪ್ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ತರಿಗೆದೊಡ್ಡಿ ಗ್ರಾಮದ ಯುವಕ. ಕುಟುಂಬದವರು ಸೇರಿ ನಿನ್ನೆ ಬಲಕುಂದಿ ತಾಂಡಾಕ್ಕೆ ಕನ್ಯೆ ನೋಡಲು ಬಂದಿದ್ದರು. ಸಂಜೆ ಬಹಿರ್ದೆಸೆಗಾಗಿ ಕಾಲುವೆ ಬಳಿಗೆ ಹೋಗಿದ್ದಾಗ ಈ ಘಟನೆ ನಡೆದಿದೆ.

ಕನ್ಯೆ ನೋಡಲು ಬಂದಿದ್ದ ಯುವಕ ಸಾವು; ಮಗನ ಶವ ಕಂಡು ಕಣ್ಣೀರಿಟ್ಟ ಕುಟುಂಬಸ್ಥರು
ಪ್ರತಾಪ್ ನಾಯಕ್
TV9 Web
| Edited By: |

Updated on:Oct 17, 2021 | 12:36 PM

Share

ಬಾಗಲಕೋಟೆ: ಅಳಿಯನಿಗೆ ಕನ್ಯೆಯನ್ನು ನೋಡಲು ಹೋಗಿದ್ದ ಯುವಕ, ಕಾಲು ಜಾರಿ ಕಾಲುವೆಗೆ ಬಿದ್ದು ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಬಲಕುಂದಿ ತಾಂಡಾದಲ್ಲಿ ನಡೆದಿದೆ. ಮೊದಲು ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕಿನ ಗದಗೇರಿ ಗ್ರಾಮದಲ್ಲಿ ಪ್ರತಾಪ್​ಗೆ ಕನ್ಯೆ ನೋಡಿದ್ದರು. ಬಳಿಕ ಪ್ರತಾಪ್​ನ ಅಳಿಯನಿಗೆ ಕನ್ಯೆ ನೋಡಲು ಬಾಗಲಕೋಟೆಗೆ ಆಗಮಿಸಿದ್ದಾರೆ. ಈ ವೇಳೆ ಬಯಲು ಬಹಿರ್ದೆಸೆಗೆ ಹೋಗಿದ್ದಾಗ ಕಾಲೂವೆಯಲ್ಲಿ ಕಾಲುಜಾರಿ ಬಿದ್ದು ಪ್ರತಾಪ್ ನಾಯಕ್(24) ಸಾವನ್ನಪ್ಪಿದ್ದಾರೆ. ಇಳಕಲ್ ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಪ್ರತಾಪ್ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ತರಿಗೆದೊಡ್ಡಿ ಗ್ರಾಮದ ಯುವಕ. ಕುಟುಂಬದವರು ಸೇರಿ ನಿನ್ನೆ ಬಲಕುಂದಿ ತಾಂಡಾಕ್ಕೆ ಕನ್ಯೆ ನೋಡಲು ಬಂದಿದ್ದರು. ಸಂಜೆ ಬಹಿರ್ದೆಸೆಗಾಗಿ ಕಾಲುವೆ ಬಳಿಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಇತ್ತೀಚಿಗೆ ಸುರಿದ ಮಳೆಯಿಂದ ಕಾಲೂವೆಯಲ್ಲಿ ನೀರು ಬಂದಿತ್ತು. ಇದರಿಂದಾಗಿ ಯುವಕ ಬಲಿಯಾಗಿದ್ದಾರೆ. ಇಂದು (ಅಕ್ಟೋಬರ್ 17) ಬೆಳಿಗ್ಗೆ ಅಗ್ನಿಶಾಮಕ ಸಿಬ್ಬಂದಿ ಶವ ಹೊರತೆಗೆದಿದ್ದಾರೆ. ಮೃತ ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಚಾಮರಾಜನಗರ: ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಶಿವಪುರದಲ್ಲಿ ನಡೆದಿದೆ. ರೈತರೊಬ್ಬರ ಜಮೀನಿನಲ್ಲಿ ಮೂವರು ಯುವಕರು ಭೇಟೆಯಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ವಿದ್ಯುತ್ ತಂತಿ ಸ್ಪರ್ಶಿಸಿ ಕುಮಾರ್(22) ಸಾವನ್ನಪ್ಪಿದ್ದಾನೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರ ಸಾವು: ಮೀನುಗಾರರ ಸಮಯಪ್ರಜ್ಞೆಯಿಂದ ಬದುಕಿದ ಐವರು!

Crime News: ದುರ್ಗಾ ಮೂರ್ತಿ ವಿಸರ್ಜನೆ ವೇಳೆ ನದಿಯಲ್ಲಿ ಮುಳುಗಿ ಐವರು ಭಕ್ತರು ಸಾವು

Published On - 10:52 am, Sun, 17 October 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!