AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ; ಡಿಸಿ, ಎಸ್​ಪಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಮಹಾರಾಷ್ಟ್ರ ಪಶ್ಚಿಮ ಘಟ್ಟದ ಮಳೆ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಹ ಸೃಷ್ಟಿ ಮಾಡಿದೆ‌. ಇದರಿಂದ ಕೃಷ್ಣಾ, ಘಟಪ್ರಭಾ ನದಿಗಳು ಉಕ್ಕಿ ಹರಿಯುತ್ತಿದ್ದು, ಘಟಪ್ರಭಾ ಘರ್ಜನೆಗೆ ಬಾಗಲಕೋಟೆ ಜಿಲ್ಲೆಯ ಕೆಲ ಗ್ರಾಮಗಳು ತತ್ತರಗೊಂಡಿದೆ. ಸಂತ್ರಸ್ತರು ತಮ್ಮ ಗೋಳು ಹೇಳಿ ಕಣ್ಣೀರು ಹಾಕುತ್ತಿದ್ದಾರೆ. ಈ ಹಿನ್ನಲೆ ಇಂದು(ಮಂಗಳವಾರ) ನೆರೆ ಪೀಡಿತ ಪ್ರದೇಶಕ್ಕೆ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿದ್ದರು.

ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ; ಡಿಸಿ, ಎಸ್​ಪಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ
ಸಚಿವ ಕೃಷ್ಣ ಬೈರೇಗೌಡ ಸೂಚನೆ
ರವಿ ಹೆಚ್ ಮೂಕಿ, ಕಲಘಟಗಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jul 30, 2024 | 3:41 PM

Share

ಬಾಗಲಕೋಟೆ, ಜು.30: ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಎಸ್​ಪಿಗಳಿಗೆ ಸೂಚನೆ ಕೊಟ್ಟದ್ದೇನೆ ಎಂದು ಸಚಿವ ಕೃಷ್ಣ ಬೈರೇಗೌಡ(Krishna Byre Gowda) ಅವರು ಹೇಳಿದರು. ಘಟಪ್ರಭಾ ನದಿ ಪ್ರವಾಹಕ್ಕೆ ಬಾಗಲಕೋಟೆ ಜಿಲ್ಲೆಯ ನೂರಾರು ಕುಟುಂಬಗಳು ತತ್ತರಿಸಿದ್ದು, ಈ ಹಿನ್ನಲೆ ನೆರೆ ಪೀಡಿತ ಪ್ರದೇಶಕ್ಕೆ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿದ್ದರು. ಈ ವೇಳೆ ಮುಧೋಳ(Mudhol)ದಲ್ಲಿ ಮಾತನಾಡಿದ ಅವರು, ‘ ರಾಜ್ಯದ ಜನತೆ ನಮ್ಮ ಬಗ್ಗೆ ತಪ್ಪು ತಿಳಿದುಕೊಂಡರೂ ಪರವಾಗಿಲ್ಲ. ಅಧಿಕಾರಿಗಳ ಮಾತು ಕೇಳದೆ ನದಿಗೆ ಇಳಿದರೆ ಲಾಠಿ ಪ್ರಯೋಗ ಮಾಡಲು ಸೂಚಿಸಿದ್ದೇನೆ ಎಂದರು.

ಮೀನು ಹಿಡಿಯುವುದು, ಕೃಷಿ ಚಟುವಟಿಕೆ ಎಂದು ಇಳಿಯುವುದು, ಸೆಲ್ಫಿಗಾಗಿ ನದಿ ಅಥವಾ ಹೊಳೆಗೆ ಇಳಿಯುವವರು ಒಳ್ಳೆ ಮಾತಿಗೆ ಗೌರವ ಕೊಡಲಿಲ್ಲ ಅಂದರೆ ಲಾಠಿ ಏಟು ನಿಶ್ಚಿತ. ನಮ್ಮ ರಾಜ್ಯದಲ್ಲಿ ಪ್ರಾಣಹಾನಿಯಾಗುವುದಕ್ಕೆ ನಾವು ಬಿಡುವುದಿಲ್ಲ. ನಮ್ಮ ಪುಣ್ಯ ಎರಡು ದಿನದಿಂದ ಮಳೆ ಕಡಿಮೆ ಆಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ನಮಗೆ ಕಡಿಮೆ ಹಾನಿ ಆಗಿದೆ. 2019-20 ರಲ್ಲಿ 272 ಜನ ಮಳೆಗಾಲದಲ್ಲಿ ಸಾವಿಗೀಡಾದರೆ, 2022 ರಲ್ಲಿ 249 ಜನರ ಸಾವನ್ನಪ್ಪಿದ್ರು. ಅದಕ್ಕೆ ಹೋಲಿಕೆ ಮಾಡಿದ್ರೆ 243 ಸಾವು ಆಗಿದೆ.‌

ಇದನ್ನೂ ಓದಿ:ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಹ: ಮುಧೋಳ-ಸಾಂಗ್ಲಿ ರಸ್ತೆ ಬಂದ್​, ಇಲ್ಲಿದೆ ಫೋಟೋಸ್​

44 ಸಾವಿರ ಹೆಕ್ಟೇರ್ ಬೆಳೆ ಹಾನಿ

ಬೆಳೆ ಹಾನಿ ಸಹ 2019 ರಲ್ಲಿ 9 ಲಕ್ಷ 70 ಸಾವಿರ ಹೆಕ್ಟೇರ್ ನಷ್ಟು ಆಗಿತ್ತು. 2022 ರಲ್ಲಿ 12 ಲಕ್ದ 40 ಸಾವಿರ ಹೆಕ್ಟೇರ್ ಪ್ರದೇಶ ಬೆಳೆ ಹಾನಿ ಆಗಿತ್ತು. ಇದೀಗ 44 ಸಾವಿರ ಹೆಕ್ಟೇರ್ ಹಾನಿ ಆಗಿದೆ. ಸರ್ಕಾರ ಎಚ್ಚೆತ್ತುಕೊಂಡು ಇದನ್ನ ನಿಭಾಯಿಸುವ ಕೆಲಸ ಮಾಡುತ್ತಿದೆ. ಜಿಲ್ಲಾಡಳಿತ, ಜಿಲ್ಲಾ ಮಂತ್ರಿಗಳು ಜನಗಳ ಜೊತೆ ಇದ್ದಾರೆ. ಪ್ರಕೃತಿ ವಿಕೋಪ ಆದಾಗ ಅದನ್ನ ಎಲ್ಲಾ ನಿಭಾಯಿಸಿ ಬಿಡುತ್ತೇವೆ ಎಂದು ಹೇಳಿದ್ರೆ ಉಡಾಫೆ ಮಾತಾಗುತ್ತೆ. ಇರುವ ಪರಿಸ್ಥಿತಿಯಲ್ಲಿ ಜನರ ಜೊತೆ ನಿಂತು ಅವರ ಕಷ್ಟ ಪರಿಹರಿಸುವ ಪ್ರಯತ್ನ ಮಾಡುತ್ತೆವೆ ಎಂದರು.

ಸಚಿವರ ಮುಂದೆ ಕಣ್ಣೀರಿಟ್ಟ ರೈತ

ಇನ್ನು ನೆರೆ ಪೀಡಿತ ಪ್ರದೇಶಕ್ಕೆ ಸಚಿವ ಕೃಷ್ಣ ಭೈರೇಗೌಡ ಅವರು ಭೇಟಿ ನೀಡುತ್ತಿದ್ದಂತೆ ರೈತ ರಾಘವೇಂದ್ರ ಎಂಬುವವರು ಸಚಿವರ ಮುಂದೆ ಕಣ್ಣೀರಿಟ್ಟಿದ್ದಾರೆ. ಈ ವೇಳೆ ‘ಪ್ರತಿ ಬಾರಿ ನಮ್ಮ ಮನೆ ಮುಳುಗುತ್ತೆ, ಇದಕ್ಕೆ ಶಾಶ್ವತ ಪರಿಹಾರ ಕೊಡಿ ಎಂದು ಕಣ್ಣೀರು ಹಾಕಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ