AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಡಿಸಿ ಕಚೇರಿ ಮುಂದೆ ಹೋರಾಟಗಾರನ ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆಗೆ ಯತ್ನ, ಕೂದಲೆಳೆ ಅಂತರದಲ್ಲಿ ಬಚಾವ್

ಒಂದು ಕಡೆ ಸಚಿವರ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಅಧಿಕಾರಿಗಳ ಸಭೆ ನಡೆಯುತ್ತಿದ್ರೆ ಮತ್ತೊಂದೆಡೆ ಹೊರಗಡೆ ಜಿಲ್ಲಾಡಳಿತ ಭವನದ ಮುಂದೆ ಹೋರಾಟಗಾರನ ಕೊಲೆಗೆ ಯತ್ನ ನಡೆದಿದೆ.

ಬಾಗಲಕೋಟೆ ಡಿಸಿ ಕಚೇರಿ ಮುಂದೆ ಹೋರಾಟಗಾರನ ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆಗೆ ಯತ್ನ, ಕೂದಲೆಳೆ ಅಂತರದಲ್ಲಿ ಬಚಾವ್
ಕುತುಬುದ್ದಿನ್ ಖಾಜಿ
ಆಯೇಷಾ ಬಾನು
|

Updated on: Jun 13, 2023 | 2:55 PM

Share

ಬಾಗಲಕೋಟೆ: ಅಪರಿಚಿತ ಯುವಕನೊಬ್ಬ ಕಬ್ಬಿಣದ ರಾಡ್​ನಿಂದ ಹೊಡೆದು ಕೊಲೆಗೆ ಯತ್ನಿಸಿರುವ ಭಯಾನಕ ಘಟನೆ ಬಾಗಲಕೋಟೆ ಡಿಸಿ ಕಚೇರಿ ಮುಂದೆ ನಡೆದಿದೆ. ಒಂದು ಕಡೆ ಸಚಿವರ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಅಧಿಕಾರಿಗಳ ಸಭೆ ನಡೆಯುತ್ತಿದ್ರೆ ಮತ್ತೊಂದೆಡೆ ಹೊರಗಡೆ ಜಿಲ್ಲಾಡಳಿತ ಭವನದ ಮುಂದೆ ಹೋರಾಟಗಾರನ ಕೊಲೆಗೆ ಯತ್ನ ನಡೆದಿದೆ. ರಾಜ್ಯ ರೈಲ್ವೆ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಕುತುಬುದ್ದಿನ್ ಖಾಜಿ ಅವರ ಮೇಲೆ ಯುವಕನೊಬ್ಬ ಕೊಲೆಗೆ ಯತ್ನಿಸಿದ್ದಾನೆ.

ಸಚಿವ ಆರ್.ಬಿ‌. ತಿಮ್ಮಾಪುರ ಅವರಿಗೆ ಬಾಗಲಕೋಟೆ-ಕುಡಚಿ ರೈಲ್ವೆ ಯೋಜನೆ ಬಗ್ಗೆ ಮನವಿ ಕೊಡಲು ಕುತುಬುದ್ದಿನ್ ಖಾಜಿ ಹಾಗೂ ಕೆಲವು ಹೋರಾಟಗಾರರು ಬಾಗಲಕೋಟೆ ಡಿಸಿ ಕಚೇರಿ ಬಳಿ ಆಗಮಿಸಿದ್ದರು. ಸಚಿವರಿಗೆ ಮನವಿ ಕೊಟ್ಟು ಬಂದ ಮೇಲೆ ಅಪರಿಚಿತ ಯುವಕ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆಗೆ ಯತ್ನಿಸಿದ್ದಾನೆ. ಅದೃಷ್ಟವಶಾತ್ ಕಬ್ಬಿಣದ ರಾಡ್​ನ ಏಟು ಕಾರಿಗೆ ಬಿದ್ದಿದ್ದು ಕಾರಿನ ಹಿಂಭಾಗ ಪುಡಿ ಪುಡಿಯಾಗಿದೆ. ಮುಧೋಳ ನಗರದ ಸುಭಾಷ್ ಪಾಟೀಲ್ ಎಂಬುವರ ರಿನಾಲ್ಟ್ ಕಾರು ಜಖಂಗೊಂಡಿದೆ.

ಇದನ್ನೂ ಓದಿ: ನಿಮ್ಮನ್ನು ಅಲ್ಲಾ ಎಂದಿಗೂ ಕ್ಷಮಿಸಲ್ಲ, ಮುಸ್ಲಿಂ ಸಮುದಾಯದ ವಿರುದ್ಧ ಬುಸುಗುಟ್ಟಿದ ಎಂಟಿಬಿ ನಾಗರಾಜ್‌

ಜಿಲ್ಲಾಡಳಿತ ಭವನ ಮುಂಭಾಗ ಹಾಡಹಗಲೆ ಕೊಲೆಗೆ ಯತ್ನ ನಡೆದಿದೆ. ಭದ್ರತಾ ಸಿಬ್ಬಂದಿ ಇಲ್ಲದಿದ್ದರೆ ನನ್ನ ಕೊಲೆ ನಡೆದೆ ಹೋಗ್ತಿತ್ತು. ಹೋಮ್ ಗಾರ್ಡ್ ರವಿ ದೂಪದ ಅವರು ನನ್ನ ರಕ್ಷಣೆಯಾಗಿದೆ ಎಂದು ಕುತುಬುದ್ದಿನ್ ಖಾಜಿ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನು ಮತ್ತೊಂದೆಡೆ ಈ ಬಗ್ಗೆ ಬಾಗಲಕೋಟೆ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಪ್ರತಿಕ್ರಿಯಿಸಿದ್ದು ಜಿಲ್ಲಾಡಳಿತ ಭವನದ ಮುಂದೆ ಹೋರಾಟಗರರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಒಬ್ಬ ವ್ಯಕ್ತಿ ಏಕಾಏಕಿ ರಾಡ್ ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಸ್ಥಳದಲ್ಲಿ ಇದ್ದ ಹೋಮ್ ಗಾಡ್ಸ್ ನಿಂದ ಅವರಿಗೆ ಯಾವುದೇ ಅಪಾಯ ಆಗಿಲ್ಲ. ಹಲ್ಲೆಗೆ ಯತ್ನಿಸಿದ ವ್ಯಕ್ತಿಯನ್ನ ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಆರೋಪಿಗೂ, ಕುತುಬುದ್ದಿನ್ ಖಾಜಿಗೂ ಏನಾದ್ರೂ ದ್ವೇಷ ಇದಿಯಾ ಎನ್ನುವ ಬಗ್ಗೆ ತನಿಖೆ ಮಾಡ್ತೇವೆ. ಜಿಲ್ಲಾಡಳಿತ ಭವನದ ಮುಂದಿನ ಸಿಸಿಟಿವಿ ದೃಶ್ಯಗಳನ್ನ ಗಮನಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಬಾಗಲಕೋಟೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ