AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟದಲ್ಲಿ ನಿರ್ಮಿಸಿದ್ದ ಶೆಡ್​ಗೆ ಬೆಂಕಿ ಹೆಚ್ಚಿದ ದುಷ್ಕರ್ಮಿಗಳು; ತಾಯಿ-ಮಗಳು ಸಜೀವ ದಹನ, ಇಬ್ಬರಿಗೆ ಗಾಯ

ಬಾಗಲಕೋಟೆ ಜಿಲ್ಲೆ ಮುಧೋಳ‌ ತಾಲೂಕಿನ ಬೆಳಗಲಿ ಗ್ರಾಮದ ತೋಟದಲ್ಲಿ ನಿರ್ಮಿಸಲಾಗಿದ್ದ ತಗಡಿನ ಶೆಡ್​​ನಲ್ಲಿ ಕುಟುಂಬವೊಂದು ಮಲಗಿದ್ದಾಗ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಇಟ್ಟು ದುಷ್ಕೃತ್ಯ ಮೆರೆದಿದ್ದಾರೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಮತ್ತಿಬ್ಬರಿಗೆ ಗಾಯಗಳಾಗಿವೆ. ಓರ್ವ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ತೋಟದಲ್ಲಿ ನಿರ್ಮಿಸಿದ್ದ ಶೆಡ್​ಗೆ ಬೆಂಕಿ ಹೆಚ್ಚಿದ ದುಷ್ಕರ್ಮಿಗಳು; ತಾಯಿ-ಮಗಳು ಸಜೀವ ದಹನ, ಇಬ್ಬರಿಗೆ ಗಾಯ
ಬಾಗಲಕೋಟೆ: ಶೆಡ್​ಗೆ ಬೆಂಕಿ ಹೆಚ್ಚಿದ ದುಷ್ಕರ್ಮಿಗಳು; ತಾಯಿ-ಮಗಳು ಸಜೀವ ದಹನ
ರವಿ ಹೆಚ್ ಮೂಕಿ, ಕಲಘಟಗಿ
| Updated By: ಆಯೇಷಾ ಬಾನು|

Updated on:Jul 16, 2024 | 12:53 PM

Share

ಬಾಗಲಕೋಟೆ, ಜುಲೈ.16: ಪೆಟ್ರೋಲ್ ಸುರಿದು ತಗಡಿನ ಶೆಡ್​​ಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದು ಘಟನೆಯಲ್ಲಿ ತಾಯಿ-ಮಗಳು ಸಜೀವ ದಹನವಾಗಿದ್ದಾರೆ (Death). ಹಾಗೂ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಬಾಗಲಕೋಟೆ ಜಿಲ್ಲೆ ಮುಧೋಳ‌ ತಾಲೂಕಿನ ಬೆಳಗಲಿ ಗ್ರಾಮದ ತೋಟದಲ್ಲಿದ್ದ ತಗಡಿನ ಶೆಡ್​​ಗೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಇಟ್ಟು ದುಷ್ಕೃತ್ಯ ಮೆರೆದಿದ್ದಾರೆ. ಬೆಳಗಲಿ ಗ್ರಾಮದ ಜೈಬಾನ್​(55), ಶಬಾನ್​(25) ಎಂಬ ತಾಯಿ-ಮಗಳು ಬೆಂಕಿಯಲ್ಲಿ ಸುಟ್ಟು ಪ್ರಾಣ ಕಳೆದುಕೊಂಡಿದ್ದಾರೆ.

ಇನ್ನು ದಸ್ತಗಿರಿಸಾಬ್, ಸುಬಾನ್​​ಗೆ ಸುಟ್ಟ ಗಾಯಗಳಾಗಿದ್ದು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಿದ್ದಿಕ್ಕಿ ಎಂಬ ಯುವಕ ಪೆಟ್ರೋಲ್ ವಾಸನೆ ಬರುತ್ತಿದೆ ಎಂದು ಹೊರ ಬಂದು ಪ್ರಾಣಾಪಾಯದಿಂದ ಬಚಾವ್ ಆಗಿದ್ದಾನೆ. ಸ್ಥಳಕ್ಕೆ ಮಹಾಲಿಂಗಪುರ ಪೊಲೀಸರು, ಬಾಗಲಕೋಟೆ ಎಸ್​​ಪಿ ಅಮರನಾಥ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳ ಮೂಲಕ ಪರಿಶೀಲನೆ ನಡೆಸಲಾಗುತ್ತಿದೆ.

ದಸ್ತಗಿರಿಸಾಬ್ ಪೆಂಡಾರಿ ಅವರ ಸ್ವಂತ ಜಮೀನಿನಲ್ಲಿದ್ದ ಶೆಡ್​ನಲ್ಲಿ ಕಳೆದ ರಾತ್ರಿ ಕುಟುಂಬದ ಒಟ್ಟು ಐವರು ಮಲಗಿದ್ದರು. ಬೆಳಗಿನ ಜಾವ 2.30 ರಿಂದ 3.30 ನಡುವೆ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ. ಅಂದಾಜು 100 ಲೀಟರ್ ಸಾಮರ್ಥ್ಯದ ಸಿಂಟೆಕ್ಸ್ ಹಾಗೂ ಎರಡು ಹೆಚ್​ಪಿ ಮೋಟಾರನ್ನು ದುಷ್ಕರ್ಮಿಗಳು ಈ ಕೃತ್ಯಕ್ಕೆ ಬಳಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಶೆಡ್​ಗೆ ಪೆಟ್ರೋಲ್ ಸ್ಪ್ರೆ ಮಾಡಿ, ಬೆಂಕಿ ಹಚ್ಚುವ ಮುನ್ನ ಬಾಗಿಲನ್ನು ಲಾಕ್ ಮಾಡಿದ್ದಾರೆ. ಇಡೀ ಕುಟುಂಬವನ್ನು ನಾಶ ಮಾಡುವ ಉದ್ದೇಶದಿಂದ ಈ ಹೀನ ಕೃತ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮದ್ಯಪ್ರಿಯರಿಗೆ ಗುಡ್​ ನ್ಯೂಸ್​, 10 ನಿಮಿಷಗಳಲ್ಲಿ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಮದ್ಯ

ಪಿಎಸ್​ಐ ಕನಸು ಕಂಡಿದ್ದ ಶಬಾನ

ಇನ್ನು ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಸುಟ್ಟು ಮೃತಪಟ್ಟ ಶಬಾನ ಪಿಎಸ್​ಐ ಆಗೋ ಕನಸು ಕಂಡಿದ್ದಳು. ಮುಧೋಳದಲ್ಲಿ ಎಂಎ ವ್ಯಾಸಂಗ ಮಾಡುತ್ತಿದ್ದ ಶಬಾನ ಪಿಎಸ್​ಐ ಆಗಬೇಕು ಎಂದು ಶ್ರಮಿಸುತ್ತಿದ್ದಳು. ಶಬಾನ ಶವ ಕಂಡು ಆಕೆಯ ಸಹೋದರಿ ಕಣ್ಣೀರು ಹಾಕಿದ್ದಾರೆ. ನನ್ನ ತಂಗಿ ಎಂಎ ಪದವಿ ಓದುತ್ತಿದ್ದಳು. ಪಿಎಸ್​ಐ ಪರೀಕ್ಷೆ ಸಿದ್ಧತೆ ನಡೆಸಿದ್ಲು. ಎರಡು ಬಾರಿ ದೈಹಿಕ ಪರೀಕ್ಷೆ ಪಾಸ್ ಮಾಡಿದ್ದಳು. ಇನ್ನೊಮ್ಮೆ ಊರಿಗೆ ಬಂದ್ರೆ ಪಿಎಸ್​ಐ ಆಗಿಯೇ ಊರಿಗೆ ಬರುತ್ತೇನೆ ಎನ್ನುತ್ತಿದ್ದಳು. ಮೈ ಮೇಲೆ ಖಾಕಿ ಬಟ್ಟೆ ಹಾಕಿಕೊಂಡು ಬರ್ತೇನೆ ಅಂದಾಕಿ ಬಿಳಿ ಬಟ್ಟೆ ಹಾಕಿಕೊಂಡು ಹೋಗೋ ಹಾಗೆ ಆಯ್ತು. ನನ್ನ ತಾಯಿ ಹಾಗೂ ತಂಗಿಯ ಮುಖ ನೋಡಲು ಆಗದಂತೆ ಆಗಿದೆ. ಇಂತಹ ಕೃತ್ಯ ಮಾಡಿದವರಿಗೆ ಜೀವಾವಧಿ, ಗಲ್ಲು ಶಿಕ್ಷೆ ಆಗಬಾರದು. ಅವರನ್ನು ಪ್ರತಿ ದಿನ ಸಾರ್ವಜನಿಕವಾಗಿ ತುಂಡು ತುಂಡಾಗಿ ಕತ್ತರಿಸಬೇಕು ಎಂದು ತಾಯಿ ಹಾಗೂ ಸಹೋದರಿಯ ಶವದ ಮುಂದೆ ರೇಷ್ಮಾ ಕಣ್ಣೀರು ಹಾಕಿ ಆಕ್ರೋಶ ಹೊರ ಹಾಕಿದ್ದಾರೆ.

ಭೀಕರ ಅಪಘಾತ.. ಗ್ರಾ.ಪಂ. ಸದಸ್ಯ ಸೇರಿ ಮೂವರು ಬಲಿ

ಬೆಂಗಳೂರಿನ ಚನ್ನಸಂದ್ರ ಸೇತುವೆ ಬಳಿ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕನಕಪುರ ತಾಲೂಕಿನ ಶಿವನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ವಿನೋದ್ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಇನ್ನೂ ಹನುಮನಹಳ್ಳಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಕುಮಾರ್ ಹಾಗೂ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ನಂಜೇಗೌಡ ಕೂಡ ಬಲಿಯಾಗಿದ್ದಾರೆ. ಮೃತರು ಬಸ್ ಖರೀದಿಸಲು ಗೋವಾಗೆ ತೆರಳಲು KIABಗೆ ಹೋಗ್ತಿದ್ದಾಗ ಅಪಘಾತ ಸಂಭವಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:25 am, Tue, 16 July 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!