AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ, ದುಡುಕಿನ‌ ನಿರ್ಧಾರಕ್ಕೆ 3 ಜೀವಗಳು ಬಲಿ

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ಘನ ಘೋರ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರು ತನ್ನ ಮೂರು ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮೊದಲು ಚಿಕ್ಕ ಚಿಕ್ಕ ಮಕ್ಕಳಿಗೆ ಹಗ್ಗದಿಂದ ಮನೆಯ ಜಂತಿಗೆ ನೇಣು ಹಾಕಿ ಕೊಂದಿದ್ದು, ಕೌಟುಂಬಿಕ ಕಲಹಕ್ಕೆ ಬಾಳಿ ಬದುಕಬೇಕಿದ್ದ ಪುಟ್ಟ ಪುಟ್ಟ ಮಕ್ಕಳು ಬಲಿಯಾಗಿವೆ.

ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ, ದುಡುಕಿನ‌ ನಿರ್ಧಾರಕ್ಕೆ 3 ಜೀವಗಳು ಬಲಿ
ಪರಿಶೀಲನೆ ಮಾಡುತ್ತಿರುವ ಪೊಲೀಸ್ರು
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Feb 01, 2026 | 5:47 PM

Share

ಬಾಗಲಕೋಟೆ, (ಫೆಬ್ರವರಿ 01): ಮಹಿಳೆಯೊಬ್ಬರು (Woman) ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಸಹ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಬಾಗಲಕೋಟೆ (Bagalkot) ಜಿಲ್ಲೆ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ರೂಪಾ ಎನ್ನುವ ಮಹಿಳೆ ತನ್ನ ಮೂರು ಮಕ್ಕಳನ್ನು ನೇಣಿಗೆ ಹಾಕಿ ಕೊಂದು ಬಳಿಕ ತಾನೂ ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸಮೃದ್ಧಿ(5), ಪ್ರೀತಮ್(4), ಸುಕ್ಷಿತ್(2) ಮೃತ ಮಕ್ಕಳು. ಇನ್ನು ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ರೂಪಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರೂಪಾ 2018ರಲ್ಲಿ ಹನಮಂತ ಬಾದಾಮಿ ಎನ್ನುವಾತನೊಂದಿಗೆ ಮದುವೆ ಮಾಡಿಕೊಂಡಿದ್ದು, ದಂಪತಿಗೆ ಮೂರು ಮಕ್ಕಳು ಸಹ ಇದ್ದವು. ಆದ್ರೆ, ಅತ್ತೆ ರೇಣವ್ವ ಕಿರುಕುಳ ಹೆಚ್ಚಾಗಿತ್ತು. ಇದರಿಂದ ಬೇಸತ್ತು ರೂಪಾ ಮೊದಲು ತನ್ನ ಮೂವರು ಮಕ್ಕಳಿಗೆ ಹಗ್ಗದಿಂದ ಮನೆಯ ಜಂತಿಗೆ ನೇಣು ಹಾಕಿ ಕೊಂದಿದ್ದಾಳೆ. ಬಳಿಕ ತಾನೂ ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ಬದುಕುಳಿದಿದ್ದು ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಇದನ್ನೂ ಓದಿ: ಕೊಳಚೆ ನೀರಲ್ಲಿ ಶಾಲಾ ವಿದ್ಯಾರ್ಥಿಗಳು ಪ್ಲೇಟ್ ತೊಳೆದ ವೈರಲ್ ಫೋಟೋ ಅಸಲಿಯತ್ತು ಬಿಚ್ಚಿಟ್ಟ ಬಿಇಓ

ಇನ್ನು ಘಟನಾ ಸ್ಥಳಕ್ಕೆ ಬಾದಾಮಿ ಠಾಣೆ ಪೊಲೀಸರ ಹಾಗೂ ಬಾಗಲಕೋಟೆ ಎಸ್ ಪಿ ಸಿದ್ದಾರ್ಥ ಗೋಯೆಲ್ ಭೇಟಿ ಪರಿಶೀಲನೆ ನಡೆಸಿದ್ದಾರೆ.  ಕೌಟುಂಬಿಕ ಕಲಹಕ್ಕೆ ರೂಪಾಳ ದುಡುಕಿನ‌ ನಿರ್ಧಾರಕ್ಕೆ ಅನಾಯಸವಾಗಿ ಮೂವರು ಮಕ್ಕಳ ಜೀವ ಹೋಗಿದ್ದು ದುರಂತವೇ ಸರಿ.

ಘಟನೆಗೆ ಬಗ್ಗೆ ಪ್ರಾಥಮಿಕ ಮಾಹಿತಿ ಬಿಚ್ಚಿಟ್ಟ ಎಸ್ಪಿ

ಹಿರೇಮಚ್ಚಳಗುಡ್ಡದಲ್ಲಿ ತಾಯಿ ಮೂರು ಮಕ್ಕಳ ಕೊಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮಕ್ಕಳು ಮೃತಪಟ್ಟಿವೆ. ತಾಯಿಗೆ ಸೀರಿಯಸ್ ಆಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಗೆ ಕಾರಣ ಗಂಡ ಹೆಂಡತಿ ಜಗಳ , ಅತ್ತೆ ಮಾವ ಕಿರುಕಳ ಬಗ್ಗೆ ಪ್ರಾಥಮಿಕ ಮಾಹಿತಿ ಇದೆ. ಈ ಬಗ್ಗೆ ಪೂರ್ಣ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಸ್ಥಳದಲ್ಲೇ ಸಿಪಿಐ ಮತ್ತು ಪಿಎಸ್ಐ ಇದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಅತ್ತೆ ಮಾವನ ಕಿರುಕಳ ಬಗ್ಗೆ ಹೆಚ್ಚು ಆರೋಪ ಇದೆ. ಆದ್ರೆ ತಾಯಿ ಕಂಡಿಷನ್ ನೋಡಿಕೊಂಡು, ವೈದ್ಯರ ಸಲಹೆ ಮೇರೆಗೆ ತಾಯಿ ಹೇಳಿಕೆ ಪಡೆಯುತ್ತೇವೆ ಎಂದು ಮಾಹಿತಿ ನೀಡಿದರು.

ನಾವು ಮತ್ತು ಎಕ್ಸಿಕ್ಯುಟಿವ್ ಮೆಜಿಸ್ಟ್ರೇಟ್ ಕಡೆಯಿಂದ ರೆಕಾರ್ಡ್ ಮಾಡಿ ಮಾಹಿತಿ ಪಡೆಯುತ್ತೇವೆ‌. ಇಂದು ಮಧ್ಯಾಹ್ನ 1.30 ಗಂಟೆಯೊಳಗೆ ಈ ಘಟನೆ ‌ನಡೆದಿದೆ‌. ಗಂಡ ಮನೆಗೆ ಬಂದು ನೋಡಿದಾಗ ಘಟನೆ ಗೊತ್ತಾಗಿದೆ ಅಂತಿದ್ದಾರೆ. ಒಟ್ಟಾರೆ ಸಂಪೂರ್ಣ ತನಿಖೆ ನಂತರವೇ ಘಟನೆಗೆ ನಿಖರ ಕಾರಣ ತಿಳಿಯಲಿದೆ ಎಂದರು.

ಕರ್ನಾಟದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:36 pm, Sun, 1 February 26

Follow Us
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್