AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ.13ರಂದು ಸಿಎಂ ಬೊಮ್ಮಾಯಿ ನಿವಾಸ ಬಳಿ ಧರಣಿ ಮಾಡಲು ಪಂಚಮಸಾಲಿ‌ ಸಮುದಾಯಕ್ಕೆ ಕರೆ ಕೊಟ್ಟ ಮೃತ್ಯುಂಜಯ ಸ್ವಾಮೀಜಿ

2ಎ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಖಡಕ್​ ಆಗಿ ಹೇಳಿಕೆ ನೀಡಿದ್ದಾರೆ.

ಜ.13ರಂದು ಸಿಎಂ ಬೊಮ್ಮಾಯಿ ನಿವಾಸ ಬಳಿ ಧರಣಿ ಮಾಡಲು ಪಂಚಮಸಾಲಿ‌ ಸಮುದಾಯಕ್ಕೆ ಕರೆ ಕೊಟ್ಟ ಮೃತ್ಯುಂಜಯ ಸ್ವಾಮೀಜಿ
ಬಸವ ಜಯಮೃತ್ಯುಂಜಯ ಶ್ರೀ
TV9 Web
| Edited By: |

Updated on:Jan 08, 2023 | 4:56 PM

Share

ಬಾಗಲಕೋಟೆ: ಸಿಎಂ ಬಸವರಾಜ ಬೊಮ್ಮಾಯಿ (cm basavaraj bommai) ತಾಯಿ ಮೇಲೆ ಆಣೆ ಮಾಡಿ ಕೊಟ್ಟ ಮಾತು ತಪ್ಪಿದ್ದಾರೆ. ಈಗಾಗಲೇ ಸರ್ಕಾರ ನೀಡಿರುವ 2ಡಿ ಮೀಸಲಾತಿ ನಮಗೆ ತೃಪ್ತಿ ತಂದಿಲ್ಲ. 2ಎ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಖಡಕ್​ ಆಗಿ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಇಂದು (ಜ. 8) ಮಾಧ್ಯಮದವರೊಂದಿಗೆ ಮಾತನಾಡಿ, ಜ.12ರೊಳಗೆ 2ಎ ಮೀಸಲಾತಿ ಘೋಷಿಸಿ ನೋಟಿಫಿಕೇಷನ್ ಹೊರಡಿಸಬೇಕು. ಇಲ್ಲದಿದ್ದರೆ ಜ. 13ರಂದು ಶಿಗ್ಗಾಂವಿಯಲ್ಲಿರುವ ಸಿಎಂ ಬೊಮ್ಮಾಯಿ ನಿವಾಸದ ಬಳಿ ಧರಣಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಜೊತೆಗೆ ರಾಜ್ಯದ ಪಂಚಮಸಾಲಿ‌ (Panchamasali) ಸಮಾಜದ ಬಾಂಧವರು ರೊಟ್ಟಿ ಬುತ್ತಿ ಕಟ್ಟಿಕೊಂಡು ಬಂದು ಧರಣಿಯಲ್ಲಿ ಭಾಗವಹಿಸುವಂತೆ ಸ್ವಾಮೀಜಿ ಕರೆ ನೀಡಿದರು.

ಮೀಸಲಾತಿ ಹೋರಾಟ ಮುಚ್ಚಿ ಹಾಕಲು ಯತ್ನ

ಕಳೆದ 1 ವಾರದಿಂದ ಮೀಸಲಾತಿ ಹೋರಾಟ ಮುಚ್ಚಿ ಹಾಕಲು ಯತ್ನಿಸಲಾಗುತ್ತಿದೆ. ಕೆಲವು ಕುತಂತ್ರಿಗಳು, ದುಷ್ಟಶಕ್ತಿಗಳು ಮುಚ್ಚಿಹಾಕುವ ಕೆಲಸ ಮಾಡುತ್ತಿದ್ದಾರೆ. ಬ್ರಿಟಿಷರ ಪಾಲಿಸಿ ಮೂಲಕ ಹೋರಾಟ ಕುಂದಿಸುವ ಕೆಲಸ ಮಾಡ್ತಿದ್ದಾರೆ. ದುಷ್ಟಶಕ್ತಿಗಳ ಎಲ್ಲ ಒಳಮರ್ಮ ಶಿಗ್ಗಾಂವಿಯಲ್ಲಿ ಚರ್ಚೆ ಮಾಡುತ್ತೇವೆ. ಪಂಚಮಸಾಲಿ ಸಮಾಜ ಕುತಂತ್ರಿಗಳ ಯಾವುದೇ ಮಾತು ಕೇಳಬಾರದು. ಒಡೆದಾಳುವ ತಂತ್ರಕ್ಕೆ ಒಳಗಾಗಬಾರದು ಎಂದರು.

ಇದನ್ನೂ ಓದಿ:

ಮೀಸಲಾತಿ ನೀಡಲು ಕುಲಶಾಸ್ತ್ರ ಆಧ್ಯಯನ ಅವಶ್ಯಕತೆ ಇಲ್ಲಾ: ಯತ್ನಾಳ 

ಶಾಸಕ ಬಸನಗೌಡ ಪಾಟೀಲ ಯತ್ನಾಳ 2ಎ ಮೀಸಲಾತಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಮೀಸಲಾತಿ ನೀಡಲು ಹಿಂದುಳಿದ ಆಯೋಗದ ವರದಿ ಹಾಗೂ ಕುಲಶಾಸ್ತ್ರ ಆಧ್ಯಯನ ಅವಶ್ಯಕತೆ ಇಲ್ಲಾ. ಎಸ್ಟಿಎಸ್ಟಿ ಸಮುದಾಯಕ್ಕೆ ಯಾವುದಾರೂ ಸಮಾಜವನ್ನು ಸೇರಿಸಬೇಕಾದರೆ ಮಾತ್ರ ಕುಲಶಾಸ್ತ್ರ ಆಧ್ಯಯನವಾಗಬೇಕು. ಇದನ್ನ ಸಚಿವ ಮಾಧುಸ್ವಾಮಿಯವರೇ ಹೇಳಿದ್ಧಾರೆ. ಪಿಎಂ ಮೋದಿ ಅವರು ಯಕನಾಮಿಕ್ ವೀಕರ್ ಸೆಕ್ಷನ್ ಎಂದು ಮಾಡಿದ್ಧಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಪ್ರಕಟಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ನೆಲಕಚ್ಚುತ್ತದೆ: ಬಸನಗೌಡ ಯತ್ನಾಳ್

ಯಾವುದೇ ಮೀಸಲಾತಿ ಇಲ್ಲದ ಸಮಾಜ ಯಾವುದಿವೆ. ಅಂಥ ಸಮಾಜಗಳಿಗೆ 10 ಪರ್ಸೆಂಟ್ ಮೀಸಾಲಾತಿ ನೀಡಲಾಗಿದೆ. ಅದರಲ್ಲಿ ಲಿಂಗಾಯತರು, ರಿಸರ್ವೇಷನ್​ನಲ್ಲಿದ್ದವರು ಸೇರಲು ಬರಲ್ಲ. ರಿಸರ್ವೇಷನ್​ನಲ್ಲಿ ಇರದ ಸಮುದಾಯಗಳಿಗೆ 10 ಪರ್ಸೆಂಟ್ ಮೀಸಲಾತಿಯಲ್ಲಿ ಸೇರಬಹುದು. ಈ ಮೀಸಲಾತಿ ಪಡೆದುಕೊಳ್ಳುವುದೂ ಸಹ ಕಠಿಣವಿದ್ದು, ಹತ್ತಾರು ನಿಯಮಗಳಿವೆ. ಅದರಲ್ಲಿನ 2 ಪರ್ಸೆಂಟ್ ಲಿಂಗಾಯತರಿಗೆ ಕೊಡುತ್ತೇವೆಂದು ಹೇಳಿದ್ದಾರೆ. ಆದರೆ ಅದು ಅಸಾಧ್ಯ ಅದರಲ್ಲಿಂದ ತೆಗೆದು ಇದಕ್ಕೆ ಹಾಕೋದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:56 pm, Sun, 8 January 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ