AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರ ರೋಷಾಗ್ನಿ: 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಂಡಿದೆ. ಪ್ರತಿ ಟನ್ ಕಬ್ಬಿಗೆ 3,500 ರೂ. ದರ ಘೋಷಿಸುವಂತೆ ಆಗ್ರಹಿಸಿ ಸಮೀರವಾಡಿ ಗೋದಾವರಿ ಕಾರ್ಖಾನೆ ಬಳಿ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿದ್ದಾರೆ. ಕಾರ್ಖಾನೆ ಮಾಲೀಕರು ಮಾತುಕತೆಗೆ ಬಾರದ ಕಾರಣ ರೈತರು ಆಕ್ರೋಶಗೊಂಡಿದ್ದಾರೆ.

ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರ ರೋಷಾಗ್ನಿ: 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ
ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Nov 13, 2025 | 7:35 PM

Share

ಬಾಗಲಕೋಟೆ, ನವೆಂಬರ್​ 13: ಪ್ರತಿ ಟನ್​​ ಕಬ್ಬಿಗೆ 3,500 ರೂ. ಘೋಷಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು (Sugarcane Farmers Protest) ನಡೆಸಿರುವ ಹೋರಾಟ ಮತ್ತಷ್ಟು ತೀವ್ರ ಸ್ವರೂಪಕ್ಕೆ ತಿರುಗಿದೆ. ಜಿಲ್ಲೆಯ ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ಸಾಲಾಗಿ ನಿಲ್ಲಿಸಿದ್ದ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ (fire) ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಕಿ ಹಚ್ಚಿ ಆಕ್ರೋಶ

ಬೆಳಗಾವಿಯಲ್ಲಿ ಧಗಧಗಿಸಿದ್ದ ಕಬ್ಬಿನ ಜ್ವಾಲೆ ತಣ್ಣಗಾಗುತ್ತಿದ್ದಂತೆ ಬಾಗಲಕೋಟೆಯ ಮುಧೋಳದಲ್ಲಿ ಕಬ್ಬು ಕಿಡಿ ಹೊತ್ತಿಕೊಂಡಿತ್ತು. ಸರ್ಕಾರ ನಿಗದಿ ಪಡಿಸಿದ 3300 ರೂಪಾಯಿಗೆ ವಿರೋಧ ವ್ಯಕ್ತಪಡಿಸಿದ್ದ ಮುಧೋಳ ರೈತರು ಕಳೆದೊಂದು ವಾರದಿಂದ ಪ್ರತಿಭಟನೆ ನಡೆಸಿದ್ದರು. ಇಂದು ಮುಧೋಳ ಪಟ್ಟಣವನ್ನ ಬಂದ್ ಮಾಡಿದ್ದರು. ಸಕ್ಕರೆ ಕಾರ್ಖಾನೆ ಮಾಲೀಕರೇ ಮಾತುಕತೆ ಬರಬೇಕು. ಪ್ರತಿ ಟನ್ ಕಬ್ಬಿಗೆ 3 ಸಾವಿರದ 500 ರೂಪಾಯಿ ನೀಡಬೇಕು ಅಂತಾ ಪಟ್ಟು ಹಿಡಿದಿದ್ದರು. ಆದರೆ ಇಂದು ಆಕ್ರೋಶದ ಕಟ್ಟೆ ಹೊಡೆದಿದೆ.

ಇದನ್ನೂ ಓದಿ: ಕಬ್ಬಿನ ಜಾಲ್ವೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ

ನಮ್ಮ ಜೊತೆಗೆ ಕಾರ್ಖಾನೆ ಮಾಲೀಕರು ಮಾತುಕತೆಗೆ ಬಂದಿಲ್ಲ ಅಂತಾ ಕೆಲ ರೈತರು ಸಿಟ್ಟಾಗಿದ್ದರು. ಸಮೀರವಾಡಿ ಬಳಿಯ ಗೋದಾವರಿ ಕಾರ್ಖಾನೆ ಮೆರವಣಿಗೆ ಹೊರಟಿದ್ದರು. ಬೆಳಗ್ಗೆಯಿಂದಲೇ ಟ್ರ್ಯಾಕ್ಟರ್ ರ‍್ಯಾಲಿ ಮಾಡಿದ್ದರು. ಸಮೀರವಾಡಿಯ ಗೋಧಾವರಿ ಕಾರ್ಖಾನೆಗೆ ರೈತರು ಮುತ್ತಿಗೆ ಹಾಕಲು ಹೊರಟಿದ್ದರು. ಆಗ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ನ ಕಂಡು ಅದನ್ನ ನೆಲಕ್ಕುರುಳಿಸಿ ಬೆಂಕಿ ಹಚ್ಚಿದ್ದಾರೆ.

ಇದು ಕೆಲ ಕಿಡಿಗೇಡಿಗಳು ಮಾಡಿರುವ ಕೆಲಸ: ಸಚಿವ ಶಿವಾನಂದ್ ಪಾಟೀಲ್

ಘಟನೆ ಬಗ್ಗೆ ಟಿವಿ9 ಜೊತೆ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಮಾತನಾಡಿದ್ದು, ಇದು ರೈತರು ಮಾಡಿರುವ ಕೆಲಸ ಅಲ್ಲ. ಕೆಲ ಕಿಡಿಗೇಡಿಗಳು ಮಾಡಿರುವ ಕೆಲಸ. ಜಿಲ್ಲಾ ಸಚಿವರು ಮೂರು ದಿನದಿಂದ ಮುಧೋಳದಲ್ಲಿದ್ದಾರೆ. ರೈತರು-ಕಾರ್ಖಾನೆಗಳ ಜೊತೆ ಮಾತುಕತೆ ಮಾಡುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಎಲ್ಲೂ ಕೂಡ ರೈತರು ಹೀಗೆ ಮಾಡಿಲ್ಲ, ಹಾಗಾಗಿ ಇದು ರೈತರ ಹೆಸರಲ್ಲಿ ಕಿಡಿಗೇಡಿಗಳು ಮಾಡಿದ್ದು ಎಂದಿದ್ದಾರೆ.

ಇದನ್ನೂ ಓದಿ: ರೈತರ ಕಷ್ಟ ಗೊತ್ತೇನ್ರೀ? ಎಸಿ ರೂಮಲ್ಲಿ ಕುಳಿತುಕೊಂಡು ರೈತರ ಕಷ್ಟ ಕೇಳೋ ರಾಜಕಾರಣಿಗಳಿಗೆ ವಿದ್ಯಾರ್ಥಿನಿ ಖಡಕ್ ಪ್ರಶ್ನೆ

ಪೊಲೀಸರ ತನಿಖೆಯಿಂದ ಎಲ್ಲವೂ ಹೊರಗೆ ಬರಲಿದೆ. ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳುತ್ತಾರೆ. ಕಬ್ಬು ಬೆಳೆಗಾರರಿಗೆ ಸರ್ಕಾರ ಹೆಚ್ಚಿನ ಹಣ ಕೊಟ್ಟಿದೆ. ಇದಕ್ಕಿಂತ ಮೇಲೆ ಸರ್ಕಾರ ಇನ್ನೇನು ಮಾಡೋಕಾಗಲ್ಲ. ಇಡೀ ರಾಜ್ಯದ ಕಬ್ಬು ಬೆಳೆಗಾರರೇ ಒಪ್ಪಿಕೊಂಡಿದ್ದಾರೆ. ಮುಧೋಳ ಕಬ್ಬು ಬೆಳೆಗಾರರು ಸರ್ಕಾರದ ನಿರ್ಧಾರ ಒಪ್ಪವಂತೆ ಕಬ್ಬು ಬೆಳೆಗಾರರಿಗೆ ಮನವಿ ಮಾಡಿದರು.

ಸರ್ಕಾರ ಏನ್ಮಾಡಬೇಕು ಎಲ್ಲ ಮಾಡಿದೆ. ಯಾರದ್ದೋ ಮನಸ್ಸಿನಲ್ಲಿ ಅಸೂಯೆ ಇರಬೇಕು. ರೈತರಾದವರು ಯಾರೂ ಕೂಡ ಈ ರೀತಿ ಮಾಡುವುದಿಲ್ಲ. ಇತಿಹಾಸದಲ್ಲಿ ಯಾವ ಸರ್ಕಾರ ಕೊಡದ ದರ ನಾವು ಕೊಟ್ಟಿದ್ದೇವೆ. ರಾಜ್ಯದಲ್ಲಿ ಇಡೀ ರೈತ ಸಂಕುಲ ತುಂಬಾ ಸಂತೋಷದಿಂದ ಇದೆ. ಆದರೆ, ಇದು ಕೆಲವು ಕಿಡಿಗೇಡಿಗಳು ಮಾಡಿರುವ ಕೆಲಸ ಎಂದು ಅವರು ಹೇಳಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ

ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ದೂರವಾಣಿ ಮೂಲಕ ಬಾಗಲಕೋಟೆ ಡಿಸಿ, ಎಸ್‌ಪಿರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ‌ ಸಚಿವ ತಿಮ್ಮಾಪುರ ಜೊತೆಯೂ ಫೋನ್‌ನಲ್ಲಿ ಚರ್ಚೆ ಮಾಡಿದ್ದು, ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸಿಎಂ ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:16 pm, Thu, 13 November 25

ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!
ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ
ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ
ಒಪ್ಪಂದ ಆಗಿದೆ, ನಾವು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ
ಒಪ್ಪಂದ ಆಗಿದೆ, ನಾವು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ
T20 World Cup 2026: ಇಟಲಿ ಮುಂದೆ ಯುಎಇ ಪಲ್ಟಿ!
T20 World Cup 2026: ಇಟಲಿ ಮುಂದೆ ಯುಎಇ ಪಲ್ಟಿ!
ಶಾಸಕರು, ರಾಜ್ಯದ ಜನರಿಗೆ ನಾನೇ ಸಿಎಂ ಆಗಬೇಕೆಂದಿದೆ: ಡಿಕೆ ಶಿವಕುಮಾರ್
ಶಾಸಕರು, ರಾಜ್ಯದ ಜನರಿಗೆ ನಾನೇ ಸಿಎಂ ಆಗಬೇಕೆಂದಿದೆ: ಡಿಕೆ ಶಿವಕುಮಾರ್
ಎರಡಂಕಿ ಮೊತ್ತಕ್ಕೆ ನಮೀಬಿಯ ಆಲೌಟ್: ಭಾರತಕ್ಕೆ ಭರ್ಜರಿ ಜಯ
ಎರಡಂಕಿ ಮೊತ್ತಕ್ಕೆ ನಮೀಬಿಯ ಆಲೌಟ್: ಭಾರತಕ್ಕೆ ಭರ್ಜರಿ ಜಯ