AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮವು ನೂರಾರು ವಿಷಯಗಳು ನನ್ನ ಕಡೆ ಇವೆ: ಮೃತ್ಯುಂಜಯ ಸ್ವಾಮೀಜಿಗೆ ನಿರಾಣಿ ಎಚ್ಚರಿಕೆ

ಲೋಕಸಭಾ ಚುನಾವಣಾ ಕಾವು ಜೋರಾಗಿದೆ. ಉಭಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದು, ಆರೋಪ-ಪ್ರತ್ಯಾರೋಪಗಳ ಸುರುಮಳೆಗೈಯುತ್ತಿದ್ದಾರೆ. ಅದರಂತೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಮುರುಗೇಶ್​ ನಿರಾಣಿ(Murugesh Nirani) ನಡುವೆ ಜಾತಿ ಸಮರ ಶುರುವಾಗಿದ್ದು, ಇದರ ಮಧ್ಯೆ ಬಸವಜಯಮೃತ್ಯುಂಜಯ ಸ್ವಾಮೀಜಿ(Basavajaya Mrityunjaya Swamiji) ಆಗಮಿಸಿ ಹೆಬ್ಬಾಳ್ಕರ್ ಪರ ನಿಂತಿದ್ದಾರೆ. ಈ ಹಿನ್ನಲೆ ಸ್ವಾಮೀಜಿಗೆ ನಿರಾಣಿ ಖಡಕ್​ ಎಚ್ಚರಿಕೆ ಕೊಟ್ಟಿದ್ದಾರೆ.

ನಿಮ್ಮವು ನೂರಾರು ವಿಷಯಗಳು ನನ್ನ ಕಡೆ ಇವೆ: ಮೃತ್ಯುಂಜಯ ಸ್ವಾಮೀಜಿಗೆ ನಿರಾಣಿ ಎಚ್ಚರಿಕೆ
ಮುರುಗೇಶ್ ನಿರಾಣಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Apr 11, 2024 | 3:59 PM

Share

ಬಾಗಲಕೋಟೆ, ಏ.11: ಲೋಕಸಭಾ ಚುನಾವಣೆ(Lok Sabha Election) ಹತ್ತಿರವಾಗುತ್ತಿದ್ದಂತೆ ಅದರ ಕಾವು ಜೋರಾಗಿದೆ. ಉಭಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದು, ಆರೋಪ-ಪ್ರತ್ಯಾರೋಪಗಳ ಸುರುಮಳೆಗೈಯುತ್ತಿದ್ದಾರೆ. ಅದರಂತೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಮುರುಗೇಶ್​ ನಿರಾಣಿ(Murugesh Nirani) ನಡುವೆ ಜಾತಿ ಸಮರ ಶುರುವಾಗಿದ್ದು, ಇದರ ಮಧ್ಯೆ ಬಸವಜಯಮೃತ್ಯುಂಜಯ ಸ್ವಾಮೀಜಿ(Basavajaya Mrityunjaya Swamiji) ಆಗಮಿಸಿ ಹೆಬ್ಬಾಳ್ಕರ್ ಪರ ನಿಂತಿದ್ದಾರೆ. ‘ಲಕ್ಷ್ಮೀ ಹೆಬ್ಬಾಳ್ಕರ್ ಪಂಚಮಸಾಲಿ ಸಮುದಾಯದವರು, ಯಾರೊ ಒಬ್ಬರು ಏನೂ ಹೇಳಿದರೆ ಪ್ರತಿಕ್ರಿಯೆ ಕೊಡಲ್ಲ ಎಂದು ಸ್ವಾಮೀಜಿ  ಹೇಳಿದ್ದಾರೆ. ಇದಕ್ಕೆ ನಿರಾಣಿ, ‘ಯಾರೊ ಒಬ್ಬರು ಅಲ್ಲ, ನಾನೇ ಹೇಳಿದ್ದೇನೆ ಎಂದು ಕಿಡಿಕಾರಿದ್ದಾರೆ.

ಬಾಗಲಕೋಟೆ ತಾಲ್ಲೂಕಿನ ಕಲಾದಗಿಯಲ್ಲಿ ಮಾತನಾಡಿದ ನಿರಾಣಿ, ‘ಕೂಡಲಪಂಚಮಸಾಲಿ ಪೀಠದ ಸ್ವಾಮೀಜಿಯವರೇ ಒಂದು ಮಾತು ಹೇಳ್ತಿನಿ ನಿಮಗೆ, ‘ನನ್ನ ವ್ಯಯಕ್ತಿಕವಾಗಿ ಇನ್ಮುಂದೆ ಮಾತಾಡಿದರೆ, ನಿಮ್ಮವು ನೂರಾರು ವಿಷಯಗಳು ನನ್ನ ಕಡೆ ಇವೆ. ಸಮಾಜದವರು ಮಾತಾಡಬಾರದು ಎಂದು ಗೌರವ ಕೊಟ್ಟು ಸುಮ್ಮನಿದ್ದೇವೆ. ಅದು ನಮ್ಮ ದೌರ್ಬಲ್ಯವಲ್ಲ, ಮಾತಾಡೋದಕ್ಕೆ ಸಾಕಷ್ಟು ಪಾಯಿಂಟ್ ‌ಇವೆ. ಇದೆಲ್ಲ‌ ಬಿಟ್ಟು ಸಮಾಜಕ್ಕೆ ಮೀಸಲಾತಿ ಕೊಡಿಸೋದರ ಕಡೆ ಗಮನ ಕೊಟ್ಟು, ಪಕ್ಷದ ಪರ ಪ್ರಚಾರ ಮಾಡೋದನ್ನು ಬಿಡಿ ಎಂದು ಖಡಕ್​ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ:ಜಾತಿ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಗುಡುಗಿದ ಮುರುಗೇಶ್ ನಿರಾಣಿ

ಜೊತೆಗೆ ಬಸವಜಯಮೃತ್ಯುಂಜಯ ಸ್ವಾಮೀಜಿ, ‘ಮೃಣಾಲ್‌ ಹೆಬ್ಬಾಳಕರ್ ಯಾರು ಎಂದು ಬಾಯಿ ಬಿಡಬೇಕು. ಜಗದೀಶ್ ಶೆಟ್ಟರ್ ಹಾಗೂ‌ ಮೃಣಾಲ್‌ ಇಬ್ಬರು ಒಂದೆ ಸಮಾಜದವರು. ನೀವೇಕೆ ಅಲ್ಲಿ ಪ್ರಚಾರ ಮಾಡುತ್ತಿದ್ದೀರಿ. ನಿಮ್ಮ ಸಮಾಜದವರು ಇದ್ದಲ್ಲಿ ಹೋಗಿ ಪ್ರಚಾರ ಮಾಡಿ. ಆದರೆ, ಸುಳ್ಳು ಹೇಳಿ ಸಪೋರ್ಟ್ ಮಾಡೋದು ಯಾವ ನ್ಯಾಯ. ನಾವು ನಮ್ಮ ಸರಕಾರ ಇದ್ದಾಗ ಪಂಚಮಸಾಲಿ ಸಮಾಜಕ್ಕೆ 2ಡಿ ಮಾಡಿದ್ದೇವೆ. ಜಾತಿ ‌ಕಾಲಂನಲ್ಲಿ ಸೇರಿಸಿದ್ದೇವೆ. ಇವತ್ತು ಅವರ ಜೊತೆ ಬಾಲ ಬಡಿದುಕೊಳ್ಳುತ್ತಾ ಕಾಂಗ್ರೆಸ್ ಎಜೆಂಟ್​ರಾಗಿ ಕೆಲಸ‌ ಮಾಡುತ್ತಿದ್ದೀರಾ ಎಂದು ಕಿಡಿಕಾರಿದರು.

ಜಾತಿ ಖಾಲಂನಲ್ಲಿ ಪಂಚಮಸಾಲಿ ಬಿಟ್ಟು ಹೋಗಿತ್ತು. ಅದನ್ನು ಸೇರಿಸಿದ್ದು ನಾವು, 2 ಡಿ ಕೊಟ್ಟಿದ್ದು ಬಿಜೆಪಿ. ಆದರೆ, ಲಕ್ಷ್ಮಿ ಹೆಬ್ಬಾಳ್ಕರ್​ ಹಾಗೂ ಸ್ವಾಮೀಜಿ ನಮ್ಮ ಸರಕಾರವಿದ್ದಾಗ ಎಷ್ಟು ಪ್ರತಿಭಟನೆ ‌ಮಾಡಿದರು. ವಿಧಾನಸೌಧಕ್ಕೆ ಮುತ್ತಿಗೆ ಹಾಕಿದರು. ಆಗ ಲಕ್ಷ್ಮಿ ಅಕ್ಕ, ಅಣ್ಣ ನಮಗೆ 2 ಡಿ ಒಪ್ಪಿಗೆ ಇಲ್ಲ. ನಿಮ್ಮ ಸರಕಾರದಲ್ಲಿ 2ಎ ಮೀಸಲಾತಿ ಕೊಟ್ಟರೆ ಬೆಳಗಾವಿ ಕುಂದಾ ಕೊಟ್ಟು ಸನ್ಮಾನ ಮಾಡ್ತಿನಿ. ನಿಮಗೆ ಆಗದೆ ಇದ್ರೆ, ನಮ್ಮ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು‌ ಮೂರು ತಿಂಗಳೊಳಗೆ 2ಎ ಕೊಡ್ತೀವಿ. ಆಗ ನನಗೆ ಒಂದು ಜೊತೆ ಬಂಗಾರದ ಬಳೆ ಹಾಕಿ ಸಮಾಜದ ಹಿರಿಯರ ಮುಂದೆ ಸನ್ಮಾನ ‌ಮಾಡಬೇಕು ಎಂದು ಓಪನ್ ಚಾಲೆಂಜ್​ ಮಾಡಿದ್ದರು. ಅದರ ಸಾನಿಧ್ಯವನ್ನೇ ಸ್ವಾಮೀಜಿ ವಹಿಸಿಕೊಂಡಿದ್ದರು. ಈಗ ಸರಕಾರ ಬಂದು ಆರು ತಿಂಗಳು ಆಯಿತು.

ಇದನ್ನೂ ಓದಿ:ನೀತಿ ಸಂಹಿತೆ ಉಲ್ಲಂಘನೆ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ

ಸ್ವಾಮೀಜಿಗಳೇ ನೀವು ಒಂದು ಸರಕಾರ ಇದ್ದಾಗ ಒಂದು ತರಹ. ಇನ್ನೊಂದು ಸರಕಾರ ಇದ್ದಾಗ ಮತ್ತೊಂದು ತರಹ ದ್ವಂಧ್ವ ನೀತಿ‌ಮಾಡಬೇಡಿ. ಎರಡು ಸರಕಾರ ನಿಮಗೆ ಎರಡು ಕಣ್ಣಿದ್ದಂತೆ. ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಮಾಡಬೇಡಿ. ನಮ್ಮ ಸರಕಾರ ಇದ್ದಾಗ ಮುತ್ತಿಗೆ ಹಾಕೋದು ಮಾಡಿದ್ರಿ, ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆದರೂ ಸಹಿತ  ನಿದ್ದೆ ಹತ್ತಿದವರ ಹಾಗೆ ನಾಟಕ ಮಾಡಿ ಮಲಗಿಕೊಳ್ಳುವ ಹಾಗೆ ಮಾಡಬೇಡಿ ಎಂದರು.

ಲಕ್ಷ್ಮಿ ಹೆಬ್ಬಾಳಕರ್ ಗಂಡ ಬಣಜಿಗ, ಹುಟ್ಟುವ‌‌ ಮಗನಿಗೆ ತಂದೆ‌ ಮನೆ ಹೆಸರು ಬರುತ್ತದೆ. ಆ ಪ್ರಕಾರ ಮೃಣಾಲ್ ತಂದೆ ಬಣಜಿಗ ಸಮುದಾಯಕ್ಕೆ ಸೇರ್ತಾರೆ. ಸ್ವಾಮೀಜಿ ಇದಕ್ಕೆ ಉತ್ತರ ಹೇಳಿ. ನಾನು ಸ್ವಾಮೀಜಿ ವೈರಿ ಅಲ್ಲ, ಲಕ್ಷ್ಮಿ ಅಕ್ಕನ ವೈರಿಯೂ ಅಲ್ಲ. ಸುಳ್ಳು ಹೇಳಿ ಯಾಕೆ ‌ಮೋಸ ಮಾಡ್ತಿದಿರಿ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?